ಚೆನ್ನೈ ವಿರುದ್ಧ ಮಹತ್ವದ ಪಂದ್ಯ; ಆರ್​​ಸಿಬಿ ತಂಡಕ್ಕೆ ಸರಿಯಾಗಿ ಕೈ ಕೊಟ್ಟ ವಿರಾಟ್ ಕೊಹ್ಲಿ

author-image
Ganesh Nachikethu
Updated On
GT ವಿರುದ್ಧ ಆರ್​ಸಿಬಿಗೆ ಬಿಗ್​ ಚಾಲೆಂಜ್.. ಈ 6 ಪ್ರಶ್ನೆಗೆ ಉತ್ತರ ಕಂಡುಕೊಂಡರೆ ಗೆಲುವು ನಮ್ಮದೇ..!
Advertisment
  • ಇಂಡಿಯನ್ ಪ್ರೀಮಿಯರ್ ಲೀಗ್​ 18ನೇ ಸೀಸನ್​ನಲ್ಲಿ ಆರ್​​​ಸಿಬಿ ಶುಭಾರಂಭ
  • ಇಂದು ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆಲ್ಲಲೇಬೇಕು ಎಂದು ಆರ್​​ಸಿಬಿ ಪ್ಲಾನ್
  • ಮಹತ್ವದ ಪಂದ್ಯದಲ್ಲೇ ಬೆಂಗಳೂರು ಟೀಮ್​​ಗೆ ಕೈ ಕೊಟ್ಟ ವಿರಾಟ್​ ಕೊಹ್ಲಿ..!

ಇಂಡಿಯನ್ ಪ್ರೀಮಿಯರ್ ಲೀಗ್​ 18ನೇ ಸೀಸನ್​ನಲ್ಲಿ ಆರ್​​​ಸಿಬಿ ಟೀಮ್​ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಸೀಸನ್​​ನ ಮೊದಲ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ 7 ವಿಕೆಟ್​ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದ ಆರ್​​​ಸಿಬಿ ಇಂದು ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆಲ್ಲಲೇಬೇಕು ಎಂದು ಮುಂದಾಗಿದೆ.

ಚೇಪಕ್​ ಇಂಟರ್​ ನ್ಯಾಷನಲ್​ ಕ್ರಿಕೆಟ್​​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ರೋಚಕ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಮುಖಾಮುಖಿ ಆಗಿವೆ.

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕ್ಯಾಪ್ಟನ್​​ ರುತುರಾಜ್ ಗಾಯಕ್ವಾಡ್ ಅವರು ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್​ ಮಾಡಲಿದೆ.

ಕೈ ಕೊಟ್ಟ ವಿರಾಟ್​ ಕೊಹ್ಲಿ

ಆರ್​​ಸಿಬಿ ಪರ ಓಪನಿಂಗ್​ ಮಾಡಿದ ಸ್ಟಾರ್ ಬ್ಯಾಟರ್​ ಫಿಲಿಪ್​ ಸಾಲ್ಟ್​​ ಅವರು ಅಬ್ಬರಿಸಿದರು. ಕ್ರೀಸ್​ನಲ್ಲಿ ಇರೋವರೆಗೂ ಎದುರಾಳಿಗಳನ್ನು ಕಾಡಿದರು. ತಾನು ಎದುರಿಸಿದ 16 ಬಾಲ್​ನಲ್ಲಿ 5 ಭರ್ಜರಿ ಫೋರ್​​, 1 ಸಿಕ್ಸರ್​ ಸಮೇತ 32 ರನ್​ ಚಚ್ಚಿದ್ರು.

ಇನ್ನೊಂದೆಡೆ ವಿರಾಟ್​ ಕೊಹ್ಲಿ ಕುಟ್ಟುತ್ತಲೇ ಬ್ಯಾಟಿಂಗ್​ ಮಾಡಿದ್ರು. ಸ್ಲೋ ಬ್ಯಾಟಿಂಗ್​ ಮಾಡಿದ ಕೊಹ್ಲಿ ಆರಂಭದಿಂದಲೂ ರನ್​ ಗಳಿಸಲು ಪರದಾಡಿದ್ರು. ತಾನು ಆಡಿದ 30 ಬಾಲ್​ನಲ್ಲಿ 1 ಸಿಕ್ಸರ್​, 2 ಫೋರ್​ ಸಮೇತ 31 ರನ್​ ಗಳಿಸಿ ಔಟಾದ್ರು.

ಇದನ್ನೂ ಓದಿ:ಚೆನ್ನೈ ವಿರುದ್ಧ ಅಬ್ಬರಿಸಿದ ಆರ್​​ಸಿಬಿ ಹುಲಿ; ಕೊನೆಗೂ ಫಿಲ್​​ ಸಾಲ್ಟ್​ಗೆ ಖೆಡ್ಡಾ ತೋಡಿದ ಎಂ.ಎಸ್​ ಧೋನಿ

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment