ಕಾಂಗ್ರೆಸ್ನ ಆಪರೇಷನ್ ಪಟ್ಟಿಯಲ್ಲಿ ಬಿಜೆಪಿ ಪ್ರಭಾವಿ ನಾಯಕರ ಹೆಸರು
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಆಗಿರುವ ಡಾ.ತೇಜಸ್ವಿನಿ ಅನಂತ್ಕುಮಾರ್
ಎಲೆಕ್ಷನ್ಗೂ ಮೊದಲೇ ಆಪರೇಷನ್ ಮಾಡಿ ಬಿಜೆಪಿಗೆ ಟಕ್ಕರ್ ಕೊಡಲು ಪ್ಲಾನ್
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೆ ತಡ ಮುಂಬರುವ 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭಾರೀ ಸಿದ್ಧತೆ ನಡೆಸಿದೆ. ವಿಧಾನಸಭೆ ಚುನಾವಣೆ ವೇಳೆ ಪ್ರಮುಖ ಬಿಜೆಪಿ ನಾಯಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಸದ್ಯ ಲೋಕಸಭೆ ಎಲೆಕ್ಷನ್ಗೆ ಅಂತಹದ್ದೆ ಒಂದು ದಾಳ ಉರುಳಿಸಿದೆ ಎಂಬ ಮಾಹಿತಿ ನ್ಯೂಸ್ಫಸ್ಟ್ಗೆ ಲಭ್ಯವಾಗಿದೆ.
ಲೋಕಾಸಭಾ ಚುನಾವಣೆಗೆ ಬಿಜೆಪಿಯ ಹಲವು ನಾಯಕರನ್ನು ಸೆಳೆಯಲು ಕಾಂಗ್ರೆಸ್ ಪಟ್ಟಿಯನ್ನು ಸಿದ್ಧಮಾಡಿದೆ. ಆ ಲಿಸ್ಟ್ನಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಡಾ.ತೇಜಸ್ವಿನಿ ಅನಂತ್ಕುಮಾರ್ ಅವರ ಹೆಸರು ಮೊದಲ ಸ್ಥಾನದಲ್ಲಿದೆ ಎನ್ನಲಾಗಿದೆ. ಅವರನ್ನು ಕಾಂಗ್ರೆಸ್ಗೆ ಕರೆದುಕೊಂಡು ಬಂದು ಬೆಂಗಳೂರು ನಗರದ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಬಿಗ್ ಪ್ಲಾನ್ ಮಾಡುತ್ತಿದೆ ಎನ್ನಲಾಗಿದೆ. ಅಲ್ಲದೇ ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ್ಕುಮಾರ್ ಅವರು ತುಂಬಾ ಪ್ರಬಲ ಅಭ್ಯರ್ಥಿಯಾಗಿದ್ದಾರೆ. ಇವರನ್ನು ಪಕ್ಷಕ್ಕೆ ಕರೆದುಕೊಂಡು ಬಂದರೆ ಒಂದು ಎಂಪಿ ಸೀಟ್ ಗೆಲುವು ಪಕ್ಕಾ ಎನ್ನುವುದು ಕಾಂಗ್ರೆಸ್ ನಾಯಕರ ತಂತ್ರವಾಗಿದೆ.
ಸದ್ಯ ಡಾ.ತೇಜಸ್ವಿನಿ ಅನಂತ್ಕುಮಾರ್ ಅವರು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಬಿಜೆಪಿಯಿಂದ ಅವರಿಗೆ ಮನ್ನಣೆ ಸಿಕ್ಕಿಲ್ಲ ಎನ್ನುವುದು ಒಂದು ಕಡೆಯಾದರೆ ಕಳೆದ ಬಾರಿಯೂ ಟಿಕೆಟ್ ನೀಡಿರಲಿಲ್ಲ. ಹಿರಿಯ ಕೋಟಾದಡಿ ತೇಜಸ್ವಿನಿರನ್ನು ಪರಿಗಣಿಸಿ ಹಿಂದಕ್ಕೆ ಸರಿಸಲಾಗಿದೆ. ಇದನ್ನೇ ತನ್ನ ಬಂಡವಾಳ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಸರ್ಕಾರ ಬಗ್ಗೆ ಹೆಚ್ಚಾಗಿ ತಿಳಿದಿರುವ ಇಂತಹ ವ್ಯಕ್ತಿಗೆ ಟಿಕೆಟ್ ನೀಡಬೇಕು ಎನ್ನುವ ಉದ್ದೇಶ ಹೊಂದಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಕಳೆದ ವಿಧಾನಸಭಾ ಎಲೆಕ್ಷನ್ನಲ್ಲಿ ಬಿಜೆಪಿಯ ಪ್ರಭಾವಿ ನಾಯಕರಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದಿತ್ತು. ಜಗದೀಶ್ ಶೆಟ್ಟರ್ ಅವರು ದಿವಂಗತ ಅನಂತ್ಕುಮಾರ್ ಕುಟುಂಬಕ್ಕೆ ತುಂಬಾ ಆಪ್ತರು. ಹೀಗಾಗಿ ಅವರ ಮೂಲಕವೇ ಡಾ.ತೇಜಸ್ವಿನಿರನ್ನು ಪಕ್ಷಕ್ಕೆ ಕರೆತರುವ ಕೆಲಸ ಮಾಡಲಾಗುತ್ತಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾಂಗ್ರೆಸ್ನ ಆಪರೇಷನ್ ಪಟ್ಟಿಯಲ್ಲಿ ಬಿಜೆಪಿ ಪ್ರಭಾವಿ ನಾಯಕರ ಹೆಸರು
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಆಗಿರುವ ಡಾ.ತೇಜಸ್ವಿನಿ ಅನಂತ್ಕುಮಾರ್
ಎಲೆಕ್ಷನ್ಗೂ ಮೊದಲೇ ಆಪರೇಷನ್ ಮಾಡಿ ಬಿಜೆಪಿಗೆ ಟಕ್ಕರ್ ಕೊಡಲು ಪ್ಲಾನ್
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೆ ತಡ ಮುಂಬರುವ 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭಾರೀ ಸಿದ್ಧತೆ ನಡೆಸಿದೆ. ವಿಧಾನಸಭೆ ಚುನಾವಣೆ ವೇಳೆ ಪ್ರಮುಖ ಬಿಜೆಪಿ ನಾಯಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಸದ್ಯ ಲೋಕಸಭೆ ಎಲೆಕ್ಷನ್ಗೆ ಅಂತಹದ್ದೆ ಒಂದು ದಾಳ ಉರುಳಿಸಿದೆ ಎಂಬ ಮಾಹಿತಿ ನ್ಯೂಸ್ಫಸ್ಟ್ಗೆ ಲಭ್ಯವಾಗಿದೆ.
ಲೋಕಾಸಭಾ ಚುನಾವಣೆಗೆ ಬಿಜೆಪಿಯ ಹಲವು ನಾಯಕರನ್ನು ಸೆಳೆಯಲು ಕಾಂಗ್ರೆಸ್ ಪಟ್ಟಿಯನ್ನು ಸಿದ್ಧಮಾಡಿದೆ. ಆ ಲಿಸ್ಟ್ನಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಡಾ.ತೇಜಸ್ವಿನಿ ಅನಂತ್ಕುಮಾರ್ ಅವರ ಹೆಸರು ಮೊದಲ ಸ್ಥಾನದಲ್ಲಿದೆ ಎನ್ನಲಾಗಿದೆ. ಅವರನ್ನು ಕಾಂಗ್ರೆಸ್ಗೆ ಕರೆದುಕೊಂಡು ಬಂದು ಬೆಂಗಳೂರು ನಗರದ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಬಿಗ್ ಪ್ಲಾನ್ ಮಾಡುತ್ತಿದೆ ಎನ್ನಲಾಗಿದೆ. ಅಲ್ಲದೇ ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ್ಕುಮಾರ್ ಅವರು ತುಂಬಾ ಪ್ರಬಲ ಅಭ್ಯರ್ಥಿಯಾಗಿದ್ದಾರೆ. ಇವರನ್ನು ಪಕ್ಷಕ್ಕೆ ಕರೆದುಕೊಂಡು ಬಂದರೆ ಒಂದು ಎಂಪಿ ಸೀಟ್ ಗೆಲುವು ಪಕ್ಕಾ ಎನ್ನುವುದು ಕಾಂಗ್ರೆಸ್ ನಾಯಕರ ತಂತ್ರವಾಗಿದೆ.
ಸದ್ಯ ಡಾ.ತೇಜಸ್ವಿನಿ ಅನಂತ್ಕುಮಾರ್ ಅವರು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಬಿಜೆಪಿಯಿಂದ ಅವರಿಗೆ ಮನ್ನಣೆ ಸಿಕ್ಕಿಲ್ಲ ಎನ್ನುವುದು ಒಂದು ಕಡೆಯಾದರೆ ಕಳೆದ ಬಾರಿಯೂ ಟಿಕೆಟ್ ನೀಡಿರಲಿಲ್ಲ. ಹಿರಿಯ ಕೋಟಾದಡಿ ತೇಜಸ್ವಿನಿರನ್ನು ಪರಿಗಣಿಸಿ ಹಿಂದಕ್ಕೆ ಸರಿಸಲಾಗಿದೆ. ಇದನ್ನೇ ತನ್ನ ಬಂಡವಾಳ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಸರ್ಕಾರ ಬಗ್ಗೆ ಹೆಚ್ಚಾಗಿ ತಿಳಿದಿರುವ ಇಂತಹ ವ್ಯಕ್ತಿಗೆ ಟಿಕೆಟ್ ನೀಡಬೇಕು ಎನ್ನುವ ಉದ್ದೇಶ ಹೊಂದಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಕಳೆದ ವಿಧಾನಸಭಾ ಎಲೆಕ್ಷನ್ನಲ್ಲಿ ಬಿಜೆಪಿಯ ಪ್ರಭಾವಿ ನಾಯಕರಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದಿತ್ತು. ಜಗದೀಶ್ ಶೆಟ್ಟರ್ ಅವರು ದಿವಂಗತ ಅನಂತ್ಕುಮಾರ್ ಕುಟುಂಬಕ್ಕೆ ತುಂಬಾ ಆಪ್ತರು. ಹೀಗಾಗಿ ಅವರ ಮೂಲಕವೇ ಡಾ.ತೇಜಸ್ವಿನಿರನ್ನು ಪಕ್ಷಕ್ಕೆ ಕರೆತರುವ ಕೆಲಸ ಮಾಡಲಾಗುತ್ತಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ