newsfirstkannada.com

ಅಟ್ರಾಸಿಟಿ ಕೇಸ್.. ಬಿಗ್‍ಬಾಸ್ ಸ್ಪರ್ಧಿ ತನಿಷಾಗೆ ಬಿಗ್ ರಿಲೀಫ್!

Share :

Published February 9, 2024 at 5:49pm

    ಭೋವಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪ

    ತನಿಷಾ ವಿರುದ್ಧ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಕೇಸ್​​

    ಅಟ್ರಾಸಿಟಿ ಪ್ರಕರಣದಲ್ಲಿ ಬಿಗ್‍ಬಾಸ್ ಸ್ಪರ್ಧಿ ತನಿಷಾಗೆ ಬಿಗ್ ರಿಲೀಫ್!

ಅಟ್ರಾಸಿಟಿ ಕೇಸ್​​ವೊಂದರಲ್ಲಿ ಬಿಗ್‍ಬಾಸ್ ಸ್ಪರ್ಧಿ ತನಿಷಾಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಗ್​ಬಾಸ್​ ಮನೆಯಲ್ಲಿದ್ದಾಗ ತನಿಷಾ ಕುಪ್ಪಂಡ ಭೋವಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇವರ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿತ್ತು. ಈಗ ತನಿಷಾಗೆ ಇದೇ ಕೇಸ್​ನಲ್ಲಿ ಕ್ಲೀನ್‍ಚಿಟ್ ಸಿಕ್ಕಿದೆ.

ಬಿಗ್ ಬಾಸ್ ಶೋನಲ್ಲಿ ತಮ್ಮ ಸಮುದಾಯದ ಬಗ್ಗೆ ನಿಂದಿಸಿದ್ದರು ಎಂದು ಆರೋಪಿಸಿ ತನಿಷಾ ವಿರುದ್ಧ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಪದ್ಮ ಕುಂಬಳುಗೋಡು ಪೊಲೀಸ್ ಠಾಣೆಯಲ್ಲಿ ಕೇಸ್​ ಮಾಡಿದ್ದರು. ದೂರಿನ ಆಧಾರದ ಮೇರೆಗೆ ಕುಂಬಳಗೋಡು ಪೊಲೀಸರು ಜಾತಿನಿಂದನೆ ಆರೋಪದಡಿ ತನಿಷಾ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು.

ಇನ್ನು, ಜಾತಿನಿಂದನೆ ಕೇಸ್ ಅನ್ನು ಡಿವೈಎಸ್​​ಪಿ ತನಿಖೆ ಮಾಡಿದ್ದರು. ಎರಡು ತಿಂಗಳ ಬಳಿಕ ಎಫ್‍ಎಸ್‍ಎಲ್‍ ವರದಿ ತನಿಖಾಧಿಕಾರಿ ಕೈ ಸೇರಿದ್ದು, ತನಿಷಾ ಹಾಗೇ ಮಾತಾಡಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಅಟ್ರಾಸಿಟಿ ಕೇಸ್.. ಬಿಗ್‍ಬಾಸ್ ಸ್ಪರ್ಧಿ ತನಿಷಾಗೆ ಬಿಗ್ ರಿಲೀಫ್!

https://newsfirstlive.com/wp-content/uploads/2024/01/Tanisha.jpg

    ಭೋವಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪ

    ತನಿಷಾ ವಿರುದ್ಧ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಕೇಸ್​​

    ಅಟ್ರಾಸಿಟಿ ಪ್ರಕರಣದಲ್ಲಿ ಬಿಗ್‍ಬಾಸ್ ಸ್ಪರ್ಧಿ ತನಿಷಾಗೆ ಬಿಗ್ ರಿಲೀಫ್!

ಅಟ್ರಾಸಿಟಿ ಕೇಸ್​​ವೊಂದರಲ್ಲಿ ಬಿಗ್‍ಬಾಸ್ ಸ್ಪರ್ಧಿ ತನಿಷಾಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಗ್​ಬಾಸ್​ ಮನೆಯಲ್ಲಿದ್ದಾಗ ತನಿಷಾ ಕುಪ್ಪಂಡ ಭೋವಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇವರ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿತ್ತು. ಈಗ ತನಿಷಾಗೆ ಇದೇ ಕೇಸ್​ನಲ್ಲಿ ಕ್ಲೀನ್‍ಚಿಟ್ ಸಿಕ್ಕಿದೆ.

ಬಿಗ್ ಬಾಸ್ ಶೋನಲ್ಲಿ ತಮ್ಮ ಸಮುದಾಯದ ಬಗ್ಗೆ ನಿಂದಿಸಿದ್ದರು ಎಂದು ಆರೋಪಿಸಿ ತನಿಷಾ ವಿರುದ್ಧ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಪದ್ಮ ಕುಂಬಳುಗೋಡು ಪೊಲೀಸ್ ಠಾಣೆಯಲ್ಲಿ ಕೇಸ್​ ಮಾಡಿದ್ದರು. ದೂರಿನ ಆಧಾರದ ಮೇರೆಗೆ ಕುಂಬಳಗೋಡು ಪೊಲೀಸರು ಜಾತಿನಿಂದನೆ ಆರೋಪದಡಿ ತನಿಷಾ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು.

ಇನ್ನು, ಜಾತಿನಿಂದನೆ ಕೇಸ್ ಅನ್ನು ಡಿವೈಎಸ್​​ಪಿ ತನಿಖೆ ಮಾಡಿದ್ದರು. ಎರಡು ತಿಂಗಳ ಬಳಿಕ ಎಫ್‍ಎಸ್‍ಎಲ್‍ ವರದಿ ತನಿಖಾಧಿಕಾರಿ ಕೈ ಸೇರಿದ್ದು, ತನಿಷಾ ಹಾಗೇ ಮಾತಾಡಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Load More