ಅತಿಯಾದ ಆತ್ಮವಿಶ್ವಾಸವೇ BJPಗೆ ಹಿನ್ನಡೆ ಬಗ್ಗೆ ಮೂಡಿದ ಪ್ರಶ್ನೆ
ಈ ಬಾರಿ ಹಿಂದಿ ಭಾಷಿಕ ರಾಜ್ಯಗಳಲ್ಲೇ ಬಿಜೆಪಿ ಪಕ್ಷಕ್ಕೆ ತೀವ್ರ ಹಿನ್ನಡೆ!
ಕಲಬುರಗಿ, ಬಳ್ಳಾರಿ, ಬೀದರ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸೋಲು
400 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಎನ್ಡಿಎಗೆ ಈ ಬಾರಿ 300 ಸೀಟು ಕೂಡ ದಕ್ಕಿಲ್ಲ. ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲೂ ಏಕಾಂಗಿಯಾಗಿ ಬಹುಮತ ಪಡೆದಿದ್ದ ಬಿಜೆಪಿ ಈ ಬಾರಿ ಸ್ಪಷ್ಟ ಬಹುಮತವನ್ನೂ ತಲುಪಿಲ್ಲ. ಎನ್ಡಿಎ ಮೈತ್ರಿ ಪಕ್ಷಗಳ ಬಲ ಮ್ಯಾಜಿಕ್ ನಂಬರ್ಗಿಂತಲೂ ಕೆಲವೇ ಸೀಟುಗಳು ಹೆಚ್ಚು ಬಂದಿವೆ.
ಇದನ್ನೂ ಓದಿ: ವಾರಾಣಸಿಯಲ್ಲೂ ಮೋದಿ ಗೆಲುವು ಸುಲಭವಾಗಲಿಲ್ಲ; ಕಾಂಗ್ರೆಸ್ ವಿರುದ್ಧ ಗೆದ್ದ ಅಂತರ ಎಷ್ಟು?
2019ರ ಲೋಕಸಭಾ ಚುನಾವಣೆಯಲ್ಲಿ 353 ಸೀಟುಗಳನ್ನು ಗೆದ್ದಿದ್ದ ಎನ್ಡಿಎ ಈ ಬಾರಿ 300ರ ಗಡಿ ದಾಟಲು ಸಾಧ್ಯವಾಗಿಲ್ಲ. 2014 ಹಾಗೂ 2019ರ ಚುನಾವಣೆಯಲ್ಲಿ ಹಿಂದಿ ಹಾರ್ಟ್ಲ್ಯಾಂಡ್ಗಳು ಬಿಜೆಪಿ ಕೈ ಹಿಡಿದಿದ್ದು ಗೆಲುವಿಗೆ ಕಾರಣ ಆಗಿತ್ತು. 2019ರಲ್ಲಿ ಏಕಾಂಗಿಯಾಗಿಯೇ ಬಿಜೆಪಿ 303 ಸ್ಥಾನಗಳನ್ನ ಗೆದ್ದುಕೊಂಡಿತ್ತು. ಆದ್ರೆ, ಈ ಬಾರಿ ಹಿಂದಿ ಭಾಷಿಕ ರಾಜ್ಯಗಳಲ್ಲೇ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಹರಿಯಾಣ ಅಲ್ಲದೇ ಪಂಜಾಬ್ನಲ್ಲೂ ಬಿಜೆಪಿ ನೀರಸ ಫಲಿತಾಂಶ ತೋರಿದೆ. ಅದರಲ್ಲೂ ಉತ್ತರ ಪ್ರದೇಶವೊಂದರಲ್ಲೇ ಬಿಜೆಪಿ 30 ಸೀಟುಗಳನ್ನ ಕಳೆದುಕೊಂಡಿದೆ.
ರಾಮನ ವಿಚಾರದಲ್ಲಿ ಸದಾ ಮೈಲೇಜ್ನಲ್ಲಿದ್ದ ಬಿಜೆಪಿಗೆ ಅದ್ಯಾಕೋ ಶ್ರೀರಾಮ ಕೃಪೆ ತೋರಿದಂತಿಲ್ಲ, ರಾಮಜನ್ಮಭೂಮಿ ಅಯೋಧ್ಯೆಯಲ್ಲೇ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್, ಇಂಡಿಯಾ ಒಕ್ಕೂಟದ ಅಭ್ಯರ್ಥಿ ಅವದೇಶ್ ಪ್ರಸಾದ್ ಎದುರು ಸೋಲು ಕಂಡಿದ್ದಾರೆ. ಮತ್ತೊಂದೆಡೆ 25 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಬಿಜೆಪಿ ಈ ಬಾರಿ 14 ಕ್ಷೇತ್ರಗಳನ್ನಷ್ಟೇ ಗೆದ್ದಿದೆ. ಕಾಂಗ್ರೆಸ್ 8 ಹಾಗೂ ಇತರರು 3 ಸ್ಥಾನಗಳನ್ನು ಗಳಿಸಿದ್ದಾರೆ. 2019ರಲ್ಲಿ ಎಲ್ಲಾ 25 ಕ್ಷೇತ್ರಗಳನ್ನೂ ಬಿಜೆಪಿ ಗೆದ್ದು ದಾಖಲೆ ಬರೆದಿದ್ದ ಬಿಜೆಪಿ ಇಲ್ಲಿಯೂ 11 ಸ್ಥಾನಗಳಷ್ಟು ನಷ್ಟ ಅನುಭವಿಸಿದೆ. ಇತ್ತ ಮಹಾರಾಷ್ಟ್ರದಲ್ಲೂ ಎನ್ಡಿಎ ಮೈತ್ರಿಕೂಟ ಕ್ಷೇತ್ರಬಲ ಕುಗ್ಗಿದೆ. ಒಟ್ಟು 48 ಕ್ಷೇತ್ರಗಳಲ್ಲಿ ಮಹಾರಾಷ್ಟ್ರದಲ್ಲಿ 2019ರಲ್ಲಿ 41 ಸ್ಥಾನಗಳನ್ನು ಗೆದ್ದಿದ್ದ ಎನ್ಡಿಎ ಈ ಬಾರಿ 18 ಸ್ಥಾನಗಳನ್ನಷ್ಟೇ ಪಡೆದಿದೆ.
ಬಿಜೆಪಿ ಮುಗ್ಗರಿಸಿದ್ದೇಕೆ?
ಇದನ್ನೂ ಓದಿ: 5, 10 ಲಕ್ಷ ಅಲ್ಲ.. ದೇಶದಲ್ಲೇ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗಳು; ಹೊಸ ದಾಖಲೆ!
ಇತ್ತ ಕರ್ನಾಟಕದಲ್ಲಿ ಈ ಬಾರಿ ಜೆಡಿಎಸ್ ಮೈತ್ರಿಯೊಂದಿಗೆ 28ಕ್ಕೆ 28 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದ ಬಿಜೆಪಿ ನಿರಾಸೆ ಅನುಭವಿಸಿದೆ. ಕಳೆದ ಬಾರಿಗಿಂತ 7 ಸ್ಥಾನಗಳನ್ನು ಕಳೆದುಕೊಂಡಿದೆ. ಚಿಕ್ಕೋಡಿ, ಕಲಬುರಗಿ, ಬಳ್ಳಾರಿ, ಬೀದರ್ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸೋಲು ಕಂಡಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಭದ್ರನೆಲೆ ಹೊಂದಿದ್ದ ಬಿಜೆಪಿ ಬಲ ಕುಗ್ಗಿದಂತಾಗಿದೆ. ಒಟ್ಟಾರೆ, ಅತಿಯಾದ ಆತ್ಮವಿಶ್ವಾಸವೇ ಬಿಜೆಪಿಗೆ ಹಿನ್ನಡೆ ಆಯ್ತಾ ಎಂಬ ಮಾತು ಕೇಳಿಬರ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಅತಿಯಾದ ಆತ್ಮವಿಶ್ವಾಸವೇ BJPಗೆ ಹಿನ್ನಡೆ ಬಗ್ಗೆ ಮೂಡಿದ ಪ್ರಶ್ನೆ
ಈ ಬಾರಿ ಹಿಂದಿ ಭಾಷಿಕ ರಾಜ್ಯಗಳಲ್ಲೇ ಬಿಜೆಪಿ ಪಕ್ಷಕ್ಕೆ ತೀವ್ರ ಹಿನ್ನಡೆ!
ಕಲಬುರಗಿ, ಬಳ್ಳಾರಿ, ಬೀದರ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸೋಲು
400 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಎನ್ಡಿಎಗೆ ಈ ಬಾರಿ 300 ಸೀಟು ಕೂಡ ದಕ್ಕಿಲ್ಲ. ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲೂ ಏಕಾಂಗಿಯಾಗಿ ಬಹುಮತ ಪಡೆದಿದ್ದ ಬಿಜೆಪಿ ಈ ಬಾರಿ ಸ್ಪಷ್ಟ ಬಹುಮತವನ್ನೂ ತಲುಪಿಲ್ಲ. ಎನ್ಡಿಎ ಮೈತ್ರಿ ಪಕ್ಷಗಳ ಬಲ ಮ್ಯಾಜಿಕ್ ನಂಬರ್ಗಿಂತಲೂ ಕೆಲವೇ ಸೀಟುಗಳು ಹೆಚ್ಚು ಬಂದಿವೆ.
ಇದನ್ನೂ ಓದಿ: ವಾರಾಣಸಿಯಲ್ಲೂ ಮೋದಿ ಗೆಲುವು ಸುಲಭವಾಗಲಿಲ್ಲ; ಕಾಂಗ್ರೆಸ್ ವಿರುದ್ಧ ಗೆದ್ದ ಅಂತರ ಎಷ್ಟು?
2019ರ ಲೋಕಸಭಾ ಚುನಾವಣೆಯಲ್ಲಿ 353 ಸೀಟುಗಳನ್ನು ಗೆದ್ದಿದ್ದ ಎನ್ಡಿಎ ಈ ಬಾರಿ 300ರ ಗಡಿ ದಾಟಲು ಸಾಧ್ಯವಾಗಿಲ್ಲ. 2014 ಹಾಗೂ 2019ರ ಚುನಾವಣೆಯಲ್ಲಿ ಹಿಂದಿ ಹಾರ್ಟ್ಲ್ಯಾಂಡ್ಗಳು ಬಿಜೆಪಿ ಕೈ ಹಿಡಿದಿದ್ದು ಗೆಲುವಿಗೆ ಕಾರಣ ಆಗಿತ್ತು. 2019ರಲ್ಲಿ ಏಕಾಂಗಿಯಾಗಿಯೇ ಬಿಜೆಪಿ 303 ಸ್ಥಾನಗಳನ್ನ ಗೆದ್ದುಕೊಂಡಿತ್ತು. ಆದ್ರೆ, ಈ ಬಾರಿ ಹಿಂದಿ ಭಾಷಿಕ ರಾಜ್ಯಗಳಲ್ಲೇ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಹರಿಯಾಣ ಅಲ್ಲದೇ ಪಂಜಾಬ್ನಲ್ಲೂ ಬಿಜೆಪಿ ನೀರಸ ಫಲಿತಾಂಶ ತೋರಿದೆ. ಅದರಲ್ಲೂ ಉತ್ತರ ಪ್ರದೇಶವೊಂದರಲ್ಲೇ ಬಿಜೆಪಿ 30 ಸೀಟುಗಳನ್ನ ಕಳೆದುಕೊಂಡಿದೆ.
ರಾಮನ ವಿಚಾರದಲ್ಲಿ ಸದಾ ಮೈಲೇಜ್ನಲ್ಲಿದ್ದ ಬಿಜೆಪಿಗೆ ಅದ್ಯಾಕೋ ಶ್ರೀರಾಮ ಕೃಪೆ ತೋರಿದಂತಿಲ್ಲ, ರಾಮಜನ್ಮಭೂಮಿ ಅಯೋಧ್ಯೆಯಲ್ಲೇ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್, ಇಂಡಿಯಾ ಒಕ್ಕೂಟದ ಅಭ್ಯರ್ಥಿ ಅವದೇಶ್ ಪ್ರಸಾದ್ ಎದುರು ಸೋಲು ಕಂಡಿದ್ದಾರೆ. ಮತ್ತೊಂದೆಡೆ 25 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಬಿಜೆಪಿ ಈ ಬಾರಿ 14 ಕ್ಷೇತ್ರಗಳನ್ನಷ್ಟೇ ಗೆದ್ದಿದೆ. ಕಾಂಗ್ರೆಸ್ 8 ಹಾಗೂ ಇತರರು 3 ಸ್ಥಾನಗಳನ್ನು ಗಳಿಸಿದ್ದಾರೆ. 2019ರಲ್ಲಿ ಎಲ್ಲಾ 25 ಕ್ಷೇತ್ರಗಳನ್ನೂ ಬಿಜೆಪಿ ಗೆದ್ದು ದಾಖಲೆ ಬರೆದಿದ್ದ ಬಿಜೆಪಿ ಇಲ್ಲಿಯೂ 11 ಸ್ಥಾನಗಳಷ್ಟು ನಷ್ಟ ಅನುಭವಿಸಿದೆ. ಇತ್ತ ಮಹಾರಾಷ್ಟ್ರದಲ್ಲೂ ಎನ್ಡಿಎ ಮೈತ್ರಿಕೂಟ ಕ್ಷೇತ್ರಬಲ ಕುಗ್ಗಿದೆ. ಒಟ್ಟು 48 ಕ್ಷೇತ್ರಗಳಲ್ಲಿ ಮಹಾರಾಷ್ಟ್ರದಲ್ಲಿ 2019ರಲ್ಲಿ 41 ಸ್ಥಾನಗಳನ್ನು ಗೆದ್ದಿದ್ದ ಎನ್ಡಿಎ ಈ ಬಾರಿ 18 ಸ್ಥಾನಗಳನ್ನಷ್ಟೇ ಪಡೆದಿದೆ.
ಬಿಜೆಪಿ ಮುಗ್ಗರಿಸಿದ್ದೇಕೆ?
ಇದನ್ನೂ ಓದಿ: 5, 10 ಲಕ್ಷ ಅಲ್ಲ.. ದೇಶದಲ್ಲೇ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿಗಳು; ಹೊಸ ದಾಖಲೆ!
ಇತ್ತ ಕರ್ನಾಟಕದಲ್ಲಿ ಈ ಬಾರಿ ಜೆಡಿಎಸ್ ಮೈತ್ರಿಯೊಂದಿಗೆ 28ಕ್ಕೆ 28 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದ ಬಿಜೆಪಿ ನಿರಾಸೆ ಅನುಭವಿಸಿದೆ. ಕಳೆದ ಬಾರಿಗಿಂತ 7 ಸ್ಥಾನಗಳನ್ನು ಕಳೆದುಕೊಂಡಿದೆ. ಚಿಕ್ಕೋಡಿ, ಕಲಬುರಗಿ, ಬಳ್ಳಾರಿ, ಬೀದರ್ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸೋಲು ಕಂಡಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಭದ್ರನೆಲೆ ಹೊಂದಿದ್ದ ಬಿಜೆಪಿ ಬಲ ಕುಗ್ಗಿದಂತಾಗಿದೆ. ಒಟ್ಟಾರೆ, ಅತಿಯಾದ ಆತ್ಮವಿಶ್ವಾಸವೇ ಬಿಜೆಪಿಗೆ ಹಿನ್ನಡೆ ಆಯ್ತಾ ಎಂಬ ಮಾತು ಕೇಳಿಬರ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ