Advertisment

ಛಲ ಬಿಡದ ರೋಹಿಣಿ ಸಿಂಧೂರಿ, ಡಿ.ರೂಪಾ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಸುಪ್ರೀಂಕೋರ್ಟ್‌ ಹೇಳಿದ್ದೇನು?

author-image
admin
Updated On
ಛಲ ಬಿಡದ ರೋಹಿಣಿ ಸಿಂಧೂರಿ, ಡಿ.ರೂಪಾ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಸುಪ್ರೀಂಕೋರ್ಟ್‌ ಹೇಳಿದ್ದೇನು?
Advertisment
  • ರೋಹಿಣಿ ಸಿಂಧೂರಿ ಮತ್ತು ಡಿ.ರೂಪಾ ನಡುವಿನ ಜಟಾಪಟಿ
  • ಮಧ್ಯಸ್ಥಿಕೆ ಮೂಲಕ ಕೇಸ್‌ ಬಗೆಹರಿಸಿಕೊಳ್ಳಲು ಹೇಳಿದ್ದ ಕೋರ್ಟ್‌
  • ಮತ್ತೆ ಐಪಿಎಸ್ ಆಫೀಸರ್​ ವರ್ಸಸ್ ಐಎಎಸ್ ಆಫೀಸರ್​ ಯುದ್ಧ!

ನವದೆಹಲಿ: ಒಂದು ವರ್ಷದ ಹಿಂದೆ ರಾಜ್ಯದಲ್ಲಿ ಐಪಿಎಸ್ ಆಫೀಸರ್​ ವರ್ಸಸ್ ಐಎಎಸ್ ಆಫೀಸರ್​ ಯುದ್ಧ ಜೋರಾಗಿ ನಡೆದಿತ್ತು. ರೋಹಿಣಿ ಸಿಂಧೂರಿಯವರ ಆಕ್ಷೇಪಾರ್ಹ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಐಪಿಎಸ್ ಅಧಿಕಾರಿ ಡಿ.ರೂಪಾ ದೊಡ್ಡ ಕಿಚ್ಚನ್ನು ಹೊತ್ತಿಸಿದ್ದರು. ಇಬ್ಬರ ಜಗಳ ವಿಧಾನಸೌಧದ ಮೆಟ್ಟಿಲು ಹತ್ತಿ ಕೊನೆಗೆ ನ್ಯಾಯಾಲಯದಲ್ಲಿ ಮಾನನಷ್ಟ ಕೇಸ್ ದಾಖಲಿಸಲಾಗಿತ್ತು.

Advertisment

ರೋಹಿಣಿ ಸಿಂಧೂರಿ, ಡಿ.ರೂಪಾ ಅವರ ಈ ಕೇಸ್‌ಗೆ ಈಗ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದ ವಿಚಾರಣೆ ವೇಳೆ ಮಾನನಷ್ಟ ಕೇಸ್ ಅನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ರೋಹಿಣಿ ಸಿಂಧೂರಿ ಅವರು ನಿರಾಕರಿಸಿದ್ದಾರೆ. ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧದ ಕೇಸ್‌ ಅನ್ನು ಮೆರಿಟ್ ಮೇಲೆ ಕೇಸ್‌ ಮುಂದುವರಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ, ಡಿ ರೂಪಾಗೆ ಸುಪ್ರೀಂ ಕೋರ್ಟ್ ಕ್ಲಾಸ್​; ಪ್ರಕರಣ ಇತ್ಯರ್ಥಕ್ಕೆ ಸೂಚನೆ 

ಮಾನನಷ್ಟ ಕೇಸ್ ರದ್ದುಪಡಿಸಲು ಕೋರಿ ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು ಕೂಡ ಇಬ್ಬರ ನಡುವೆ ಮಾತುಕತೆಗೆ ಸಮಯ ಕೊಡಲಾಗಿದೆ. ಆದರೆ ರೋಹಿಣಿ ಸಿಂಧೂರಿ ಅವರು ಮಾತುಕತೆಗೆ ಆಸಕ್ತಿ ತೋರಿಲ್ಲ.

Advertisment

publive-image

ರೂಪಾ ಪರ ವಕೀಲ ಆದಿತ್ಯ ಸೋಂಧಿರಿಂದ ಮಧ್ಯಸ್ಥಿಕೆದಾರರನ್ನು ನೇಮಿಸಲು ಮನವಿ ಮಾಡಲಾಗಿತ್ತು. ಆದರೆ ಇದನ್ನು ಒಪ್ಪದ ಐಎಎಸ್ ಅಧಿಕಾರಿ, ಎಲ್ಲವನ್ನೂ ಸಾರ್ವಜನಿಕ ಅವಗಾಹನೆಯಲ್ಲಿಟ್ಟು, ಮಾತುಕತೆಯ ಮಾತುಗಳನಾಡುತ್ತೀದ್ದೀರಿ. ಕೇಸ್ ಅನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸಿಕೊಳ್ಳಲು ಆಸಕ್ತಿ ಇಲ್ಲ. ಮೆರಿಟ್ ಮೇಲೆ ಕೇಸ್ ವಿಚಾರಣೆ ನಡೆಯಲಿ ಎಂದು ತಿಳಿಸಿದ್ದಾರೆ.

ರೋಹಿಣಿ ಸಿಂಧೂರಿ ಅವರ ಈ ನಡೆಯಿಂದ ಇದರಿಂದಾಗಿ ಸುಪ್ರೀಂಕೋರ್ಟ್‌ಗೆ ಕೇಸ್ ರದ್ದುಪಡಿಸಲು ಕೋರಿದ್ದ ಅರ್ಜಿಯನ್ನು ರೂಪಾ ಅವರು ವಾಪಸ್ ಪಡೆದಿದ್ದಾರೆ. ಇದೀಗ ಬೆಂಗಳೂರಿನ ಕೆಳ ನ್ಯಾಯಾಲಯದಲ್ಲಿ ಮಾನನಷ್ಟ ಕೇಸ್ ವಿಚಾರಣೆ ಮುಂದುವರಿಯಲಿದೆ.

ಸುಪ್ರೀಂಕೋರ್ಟ್ ಬುದ್ಧಿವಾದಕ್ಕೂ ಬಗ್ಗಿಲ್ಲ!
ರೋಹಿಣಿ ಸಿಂಧೂರಿ ಮತ್ತು ಡಿ.ರೂಪಾ ನಡುವಿನ ಈ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಈ ಹಿಂದೆಯೇ​ ಬುದ್ಧಿವಾದ ಹೇಳಿತ್ತು. ಕೇಸ್ ಇತ್ಯರ್ಥ ಮಾಡಿಕೊಳ್ಳುವಂತೆ ಸಲಹೆಯನ್ನು ನೀಡಿತ್ತು.
ಇಂದು ಮತ್ತೊಮ್ಮೆ ಸುಪ್ರೀಂಕೋರ್ಟ್‌ ಮಾನನಷ್ಟ ಕೇಸ್ ಮುಂದುವರಿಕೆಯಿಂದ ಇಬ್ಬರ ಕೆರಿಯರ್‌ಗೂ ತೊಂದರೆಯಾಗಲಿದೆ. ಕಚೇರಿಯಲ್ಲಿ ಕೆಲಸ ಮಾಡುವ ಬದಲು ವಕೀಲರ ಕಚೇರಿಯಲ್ಲಿ ಕಾಲ ಕಳೆಯುತ್ತಿದ್ದೀರಿ ಎನ್ನಲಾಗಿದೆ. ಆದರೂ ಐಪಿಎಸ್ ಆಫೀಸರ್​ ವರ್ಸಸ್ ಐಎಎಸ್ ಆಫೀಸರ್​ ಯುದ್ಧ ಮತ್ತೆ ಕೋರ್ಟ್‌ ಅಂಗಳಕ್ಕೆ ತಲುಪಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment