/newsfirstlive-kannada/media/post_attachments/wp-content/uploads/2024/07/Bumrah_Rohit.jpg)
ಇಂದು ನಡೆಯುತ್ತಿರೋ 2025ರ ಚಾಂಪಿಯನ್ಸ್​ ಟ್ರೋಫಿಯ ಮಹತ್ವದ ಪಂದ್ಯದಲ್ಲಿ ಟೀಮ್​​​ ಇಂಡಿಯಾ, ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಿವೆ. ಭಾನುವಾರ ಟೀಮ್​ ಇಂಡಿಯಾ ಪಾಕ್​ ವಿರುದ್ಧ ಸೆಣಸಲಿದೆ. ಇದರ ಮಧ್ಯೆ ಟೀಮ್​ ಇಂಡಿಯಾಗೆ ಭರ್ಜರಿ ಗುಡ್​ನ್ಯೂಸ್​ ಸಿಕ್ಕಿದೆ.
ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ. ಇವರು ಗಾಯದ ಸಮಸ್ಯೆಯಿಂದ ಚಾಂಪಿಯನ್ಸ್ ಟ್ರೋಫಿಯಿಂದ ಹೊರ ನಡೆದಿದ್ರು. ಈಗ ಬುಮ್ರಾ ಚೇತರಿಕೆ ಕಾಣುತ್ತಿದ್ದಾರೆ ಎಂದು ಪತ್ನಿ ಸಂಜನಾ ಗಣೇಶನ್ ಮಾಹಿತಿ ನೀಡಿದ್ದಾರೆ. ಕ್ರೀಡಾ ನಿರೂಪಕಿ ಆಗಿರೋ ಸಂಜನಾ ಗಣೇಶನ್, ಬಾಂಗ್ಲಾದ ಸ್ಟಾರ್​ ಕ್ರಿಕೆಟರ್​ ಜತೆಗೆ ಮಾತಾಡುವ ವೇಳೆ ಈ ವಿಚಾರ ಬಹಿರಂಗ ಮಾಡಿದ್ದಾರೆ.
ಸಂಜನಾ ಗಣೇಶನ್ ಏನಂದ್ರು?
ಈ ಬಗ್ಗೆ ಮಾತಾಡಿದ ಸಂಜನಾ ಗಣೇಶನ್​ ಅವರು, ಜಸ್ಪ್ರಿತ್ ಬುಮ್ರಾ ರಾಷ್ಟ್ರೀಯ ಕ್ರಿಕೆಟ್ ಅಕಡಾಮಿನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಅವರು ಚೇತರಿಸಿಕೊಂಡಿದ್ದಾರೆ. ಅವರು ಎನ್ಸಿಎನಲ್ಲೇ ಇದ್ದು, ಆದಷ್ಟು ಬೇಗ ಟೀಮ್​ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದರು.
ಬುಮ್ರಾ ಇತ್ತೀಚಿಗೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಆಡಿದ ಐದು ಪಂದ್ಯಗಳಲ್ಲಿ 32 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಸಿಡ್ನಿಯಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಜುರಿಗೆ ಒಳಗಾದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us