ಚಾಂಪಿಯನ್ಸ್​ ಟ್ರೋಫಿ; ಟೀಮ್​ ಇಂಡಿಯಾಗೆ ಭರ್ಜರಿ ಗುಡ್​ನ್ಯೂಸ್​ ಕೊಟ್ಟ ಬುಮ್ರಾ

author-image
Ganesh Nachikethu
Updated On
ಟೀಮ್​ ಇಂಡಿಯಾದಿಂದಲೇ ಹೊರಬಿದ್ದ ಸ್ಟಾರ್​ ವೇಗಿ ಬುಮ್ರಾ; ಅಸಲಿಗೆ ಆಗಿದ್ದೇನು?
Advertisment
  • 2025ರ ಚಾಂಪಿಯನ್ಸ್​ ಟ್ರೋಫಿಯ ಮಹತ್ವದ ಪಂದ್ಯ
  • ಟೀಮ್​​​ ಇಂಡಿಯಾ, ಬಾಂಗ್ಲಾದೇಶ ತಂಡ ಮುಖಾಮುಖಿ
  • ಈ ಹೊತ್ತಲ್ಲೇ ಟೀಮ್​ ಇಂಡಿಯಾಗೆ ಭರ್ಜರಿ ಗುಡ್​ನ್ಯೂಸ್​​

ಇಂದು ನಡೆಯುತ್ತಿರೋ 2025ರ ಚಾಂಪಿಯನ್ಸ್​ ಟ್ರೋಫಿಯ ಮಹತ್ವದ ಪಂದ್ಯದಲ್ಲಿ ಟೀಮ್​​​ ಇಂಡಿಯಾ, ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಿವೆ. ಭಾನುವಾರ ಟೀಮ್​ ಇಂಡಿಯಾ ಪಾಕ್​ ವಿರುದ್ಧ ಸೆಣಸಲಿದೆ. ಇದರ ಮಧ್ಯೆ ಟೀಮ್​ ಇಂಡಿಯಾಗೆ ಭರ್ಜರಿ ಗುಡ್​ನ್ಯೂಸ್​ ಸಿಕ್ಕಿದೆ.

ಟೀಮ್ ಇಂಡಿಯಾದ ಯಾರ್ಕರ್ ಸ್ಪೇಷಲಿಸ್ಟ್‌ ಜಸ್ಪ್ರಿತ್ ಬುಮ್ರಾ. ಇವರು ಗಾಯದ ಸಮಸ್ಯೆಯಿಂದ ಚಾಂಪಿಯನ್ಸ್ ಟ್ರೋಫಿಯಿಂದ ಹೊರ ನಡೆದಿದ್ರು. ಈಗ ಬುಮ್ರಾ ಚೇತರಿಕೆ ಕಾಣುತ್ತಿದ್ದಾರೆ ಎಂದು ಪತ್ನಿ ಸಂಜನಾ ಗಣೇಶನ್‌ ಮಾಹಿತಿ ನೀಡಿದ್ದಾರೆ. ಕ್ರೀಡಾ ನಿರೂಪಕಿ ಆಗಿರೋ ಸಂಜನಾ ಗಣೇಶನ್‌, ಬಾಂಗ್ಲಾದ ಸ್ಟಾರ್​ ಕ್ರಿಕೆಟರ್​ ಜತೆಗೆ ಮಾತಾಡುವ ವೇಳೆ ಈ ವಿಚಾರ ಬಹಿರಂಗ ಮಾಡಿದ್ದಾರೆ.

ಸಂಜನಾ ಗಣೇಶನ್‌ ಏನಂದ್ರು?

ಈ ಬಗ್ಗೆ ಮಾತಾಡಿದ ಸಂಜನಾ ಗಣೇಶನ್​ ಅವರು, ಜಸ್ಪ್ರಿತ್‌ ಬುಮ್ರಾ ರಾಷ್ಟ್ರೀಯ ಕ್ರಿಕೆಟ್‌ ಅಕಡಾಮಿನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಅವರು ಚೇತರಿಸಿಕೊಂಡಿದ್ದಾರೆ. ಅವರು ಎನ್‌ಸಿಎನಲ್ಲೇ ಇದ್ದು, ಆದಷ್ಟು ಬೇಗ ಟೀಮ್​ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದರು.

ಬುಮ್ರಾ ಇತ್ತೀಚಿಗೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು ಬಾರ್ಡರ್‌ ಗವಾಸ್ಕರ್‌ ಸರಣಿಯಲ್ಲಿ ಆಡಿದ ಐದು ಪಂದ್ಯಗಳಲ್ಲಿ 32 ವಿಕೆಟ್‌ ಕಬಳಿಸಿ ಮಿಂಚಿದ್ದಾರೆ. ಸಿಡ್ನಿಯಲ್ಲಿ ನಡೆದ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಇಂಜುರಿಗೆ ಒಳಗಾದರು.

ಇದನ್ನೂ ಓದಿ:ಟೀಮ್​ ಇಂಡಿಯಾ, ಪಾಕ್​ ಮಧ್ಯೆ ರೋಚಕ ಪಂದ್ಯ; ಬಿಗ್​ ಶಾಕ್​ ಕೊಟ್ಟ ಸ್ಟಾರ್​ ಪ್ಲೇಯರ್!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment