/newsfirstlive-kannada/media/post_attachments/wp-content/uploads/2024/10/kiccha9.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಹೊಸ ಅಧ್ಯಾಯ ಬಿಗ್ಬಾಸ್ ಸೀಸನ್ 11ರಲ್ಲಿ ದಿನದಿಂದ ದಿನಕ್ಕೆ ಬದಲಾವಣೆಗಳು ಕಾಣುತ್ತಿವೆ. ಸೀಸನ್ 1ರಿಂದ 10ರವೆರೆಗೂ ಕಿಚ್ಚ ಸುದೀಪ್ ಅವರ ಸಾರಥ್ಯದಲ್ಲಿ ಬಿಗ್ಬಾಸ್ ಮೂಡಿ ಬರುತ್ತಿತ್ತು. ಆದ್ರೆ ಈ ವಾರ ಬಿಗ್ಬಾಸ್ ಶೋನಲ್ಲಿ ನಿರೂಪಕರು ಬದಲಾಗಿದ್ದಾರೆ.
ಇದನ್ನೂ ಓದಿ:BBK11: ಬೆಂಗಳೂರು ನಗರ ಪೊಲೀಸ್ ಕಮಿಷನರ್ಗೆ ಲಾಯರ್ ಜಗದೀಶ್ ಮನವಿ; ಕಾರಣವೇನು?
ಹೌದು, ಇದೇ ಮೊಟ್ಟ ಮೊದಲ ಬಾರಿಗೆ ಬಿಗ್ಬಾಸ್ ಸೀಸನ್ 11ರಲ್ಲಿ ಇಬ್ಬರು ಶೋ ನಿರೂಪಣೆ ಮಾಡಲಿದ್ದಾರೆ. ಪ್ರತಿ ವಿಕೇಂಡ್ನಲ್ಲೂ ಬಿಗ್ಬಾಸ್ ಶೋ ನಡೆಸಿಕೊಡಲು ಕಿಚ್ಚ ಸುದೀಪ್ ಅವರು ಬರುತ್ತಿದ್ದರು. ಆದರೆ ಮೂಲಗಳು ಪ್ರಕಾರ ಶನಿವಾರ ಎಪಿಸೋಡ್ ಅನ್ನು ನಿರ್ದೇಶಕ ಯೋಗರಾಜ್ ಭಟ್, ಹಾಗೂ ಭಾನುವಾರ ಎಪಿಸೋಡ್ ಅನ್ನು ನಟ ಸೃಜನ್ ಲೋಕೇಶ್ ನಡೆಸಿಕೊಡಲಿದ್ದಾರಂತೆ.
ಇತ್ತೀಚೆಗಷ್ಟೇ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರ ತಾಯಿ ನಿಧನರಾಗಿದ್ದರು. ಸದ್ಯ ಕಿಚ್ಚ ಸುದೀಪ್ ಅವರು ಅನುಪಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರ ಜಾಗಕ್ಕೆ ಈ ಇಬ್ಬರು ಸೆಲೆಬ್ರೆಟಿಗಳಿಂದ ವೀಕೆಂಡ್ ಶೋವನ್ನು ನಡೆಸಿಕೊಡಲಾಗುತ್ತಿದೆ. ಶನಿವಾರ ನಿರ್ದೇಶಕ ಯೋಗರಾಜ್ ಭಟ್ ಮತ್ತು ಭಾನುವಾರ ಸೃಜನ್ ಶೋ ನಿರೂಪಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ