/newsfirstlive-kannada/media/post_attachments/wp-content/uploads/2025/04/rajath-kishan1.jpg)
ಬೆಂಗಳೂರು: ನ್ಯಾಯಾಲಯದಿಂದ ಬಿಗ್​​ಬಾಸ್​ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ನಗರದ 24ನೇ ಎಸಿಜೆಎಂ ಕೋರ್ಟ್​ ರಜತ್ ಕಿಶನ್​​ಗೆ ಜಾಮೀನು ಮಂಜೂರು ಮಾಡಿದೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರನ್ನು ಪೊಲೀಸರು ನಿನ್ನೆ ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಿದ್ದರು. ಈ ವೇಳೆ ಕೋರ್ಟ್​ ರಜತ್ ಕಿಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದರ ಬೆನ್ನಲ್ಲೇ ರಜತ್ ಕಿಶನ್ ಅವರಿಗೆ ಇಂದು ಜಾಮೀನು ಮಂಜೂರು ಮಾಡಲಾಗಿದೆ.
ಇದನ್ನೂ ಓದಿ: ತನ್ನ ಗರಡಿಯಲ್ಲಿ ಆಡಿದ ಮಾಜಿ ಆಟಗಾರರೇ RCBಗೆ ವಿರೋಧಿಗಳು ಆಗ್ತಾರಾ.. ಹೇಗೆ ಗೊತ್ತಾ?
/newsfirstlive-kannada/media/post_attachments/wp-content/uploads/2025/03/rajath-vinay3.jpg)
ಈ ರೀಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ಗೆ ಮಾತ್ರ ವಾರೆಂಟ್ ಇತ್ತು. ವಿನಯ್ಗೌಡಗೆ ವಾರೆಂಟ್ ಇರಲಿಲ್ಲ. ಹೀಗಾಗಿ ವಿನಯ್ ಗೌಡ ಅವರಿಗೆ ನಿನ್ನೆಯೇ ರಿಲೀಫ್ ಸಿಕ್ಕಿತ್ತು. ರಜತ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ ರಜತ್ ಪರ ವಕೀಲರು ಕೋರ್ಟ್​ಗೆ ನಿನ್ನೆಯೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ಮಾಡಿ ಆದೇಶ ಇಂದಿಗೆ ಕಾಯ್ದಿರಿಸಿತ್ತು. ಅದರಂತೆ 24ನೇ ಎಸಿಜೆಎಂ ನ್ಯಾಯಾಲಯ ಜಾಮೀನು ನೀಡಿದೆ.
ಬಸವೇಶ್ವರ ನಗರ ಪೊಲೀಸರು ರಜತ್ರನ್ನು ನಿನ್ನೆ ಕೋರ್ಟ್ಗೆ ಹಾಜರುಪಡಿಸಿದ್ದರು. ಕೋರ್ಟ್​ನಲ್ಲಿ ಈ ವೇಳೆ ರಜತ್ ಪರ ವಕೀಲರು ವಿಚಾರಣೆಗೆ ಅಂತ ಪೊಲೀಸ್ ಠಾಣೆಗೆ ಹೋಗಿದ್ದಾಗ ಬಂಧಿಸಲಾಗಿದೆ ಎಂದು ಹೇಳಿದ್ದರು. ಆಗ ಆರೋಪಿ ಪರ ವಕೀಲರು ಸ್ವಾಮಿ ಅದು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಇನ್ನು ಮುಂದೆ ಈ ರೀತಿ ಆಗಲ್ಲ ಸ್ವಾಮಿ. ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ. ವಾರೆಂಟ್ ರೀ ಕಾಲ್ ಮಾಡಿಕೊಡಿ ಸ್ವಾಮಿ ಎಂದು ಕೋರ್ಟ್​​ಗೆ ಮನವಿ ಮಾಡಿದ್ದರು. ಅದರಂತೆ ಕೋರ್ಟ್​ ವಾದ-ಪ್ರತಿವಾದ ಆಲಿಸಿ ಇಂದು ಜಾಮೀನು ಮಂಜೂರು ಮಾಡಿದೆ. ಇದರಿಂದ ಪ್ರಕರಣದಲ್ಲಿ ರಜತ್​ ಕಿಶನ್​ಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us