ಬಿಗ್​​ಬಾಸ್ ರಜತ್ ಕಿಶನ್‌ಗೆ ಬಿಗ್ ರಿಲೀಫ್​.. ಜೈಲಿಗೆ ಹೋದ ಬೆನ್ನಲ್ಲೇ ಬಿಡುಗಡೆ; ಆಗಿದ್ದೇನು?

author-image
Bheemappa
Updated On
ವಾರ್ನಿಂಗ್‌ ಕೊಟ್ರು ಬುದ್ಧಿ ಕಲಿಯದ ಬುಜ್ಜಿ.. ರಜತ್ ಕಿಶನ್ ಮತ್ತೆ ಮಾಡಿಕೊಂಡ ಯಡವಟ್ಟು ಏನು?
Advertisment
  • ವಿಚಾರಣೆಗೆ ಠಾಣೆಗೆ ಹೋಗಿದ್ದಾಗ ರಜತ್​ನನ್ನ ಬಂಧಿಸಲಾಗಿತ್ತು
  • ​2ನೇ ಬಾರಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ರಜತ್ ಕಿಶನ್
  • ವಿನಯ್ ಗೌಡಗೆ ರಿಲೀಫ್ ಸಿಕ್ಕ ಬೆನ್ನಲ್ಲೇ ರಜತ್ ಕಿಶನ್ ಜಾಮೀನು

ಬೆಂಗಳೂರು: ನ್ಯಾಯಾಲಯದಿಂದ ಬಿಗ್​​ಬಾಸ್​ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ನಗರದ 24ನೇ ಎಸಿಜೆಎಂ ಕೋರ್ಟ್​ ರಜತ್ ಕಿಶನ್‌​​ಗೆ ಜಾಮೀನು ಮಂಜೂರು ಮಾಡಿದೆ.

ಮಚ್ಚು ಹಿಡಿದು ರೀಲ್ಸ್‌ ಮಾಡಿದ ಪ್ರಕರಣದಲ್ಲಿ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ಕಿಶನ್‌ ಅವರನ್ನು ಪೊಲೀಸರು ನಿನ್ನೆ ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಿದ್ದರು. ಈ ವೇಳೆ ಕೋರ್ಟ್​ ರಜತ್‌ ಕಿಶನ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದರ ಬೆನ್ನಲ್ಲೇ ರಜತ್ ಕಿಶನ್ ಅವರಿಗೆ ಇಂದು ಜಾಮೀನು ಮಂಜೂರು ಮಾಡಲಾಗಿದೆ.

ಇದನ್ನೂ ಓದಿ:ತನ್ನ ಗರಡಿಯಲ್ಲಿ ಆಡಿದ ಮಾಜಿ ಆಟಗಾರರೇ RCBಗೆ ವಿರೋಧಿಗಳು ಆಗ್ತಾರಾ.. ಹೇಗೆ ಗೊತ್ತಾ?

publive-image

ಈ ರೀಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮಾತ್ರ ವಾರೆಂಟ್ ಇತ್ತು. ವಿನಯ್‌ಗೌಡಗೆ ವಾರೆಂಟ್ ಇರಲಿಲ್ಲ. ಹೀಗಾಗಿ ವಿನಯ್ ಗೌಡ ಅವರಿಗೆ ನಿನ್ನೆಯೇ ರಿಲೀಫ್ ಸಿಕ್ಕಿತ್ತು. ರಜತ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ ರಜತ್ ಪರ ವಕೀಲರು ಕೋರ್ಟ್​ಗೆ ನಿನ್ನೆಯೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ಮಾಡಿ ಆದೇಶ ಇಂದಿಗೆ ಕಾಯ್ದಿರಿಸಿತ್ತು. ಅದರಂತೆ 24ನೇ ಎಸಿಜೆಎಂ ನ್ಯಾಯಾಲಯ ಜಾಮೀನು ನೀಡಿದೆ.

ಬಸವೇಶ್ವರ ನಗರ ಪೊಲೀಸರು ರಜತ್‌ರನ್ನು ನಿನ್ನೆ ಕೋರ್ಟ್‌ಗೆ ಹಾಜರುಪಡಿಸಿದ್ದರು. ಕೋರ್ಟ್​ನಲ್ಲಿ ಈ ವೇಳೆ ರಜತ್ ಪರ ವಕೀಲರು ವಿಚಾರಣೆಗೆ ಅಂತ ಪೊಲೀಸ್ ಠಾಣೆಗೆ ಹೋಗಿದ್ದಾಗ ಬಂಧಿಸಲಾಗಿದೆ ಎಂದು ಹೇಳಿದ್ದರು. ಆಗ ಆರೋಪಿ ಪರ ವಕೀಲರು ಸ್ವಾಮಿ ಅದು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಇನ್ನು ಮುಂದೆ ಈ ರೀತಿ ಆಗಲ್ಲ ಸ್ವಾಮಿ. ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ. ವಾರೆಂಟ್ ರೀ ಕಾಲ್ ಮಾಡಿಕೊಡಿ ಸ್ವಾಮಿ ಎಂದು ಕೋರ್ಟ್​​ಗೆ ಮನವಿ ಮಾಡಿದ್ದರು. ಅದರಂತೆ ಕೋರ್ಟ್​ ವಾದ-ಪ್ರತಿವಾದ ಆಲಿಸಿ ಇಂದು ಜಾಮೀನು ಮಂಜೂರು ಮಾಡಿದೆ. ಇದರಿಂದ ಪ್ರಕರಣದಲ್ಲಿ ರಜತ್​ ಕಿಶನ್​ಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.

ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment