BBK11; ಕಿಚ್ಚನಿಂದ ಚಪ್ಪಾಳೆ ಗಿಟ್ಟಿಸಿಕೊಂಡ ಬೆನ್ನಲ್ಲೇ ಐಶ್ವರ್ಯ ಮುಖಕ್ಕೆ ಟೀ ಚೆಲ್ಲಿದ ಭವ್ಯಗೌಡ

author-image
Bheemappa
Updated On
BBK11; ಕಿಚ್ಚನಿಂದ ಚಪ್ಪಾಳೆ ಗಿಟ್ಟಿಸಿಕೊಂಡ ಬೆನ್ನಲ್ಲೇ ಐಶ್ವರ್ಯ ಮುಖಕ್ಕೆ ಟೀ ಚೆಲ್ಲಿದ ಭವ್ಯಗೌಡ
Advertisment
  • ಬಿಗ್​ಬಾಸ್​ನಲ್ಲಿ ದಿನದಿಂದ ದಿನಕ್ಕೆ ಟಾಸ್ಕ್ ರಿಸ್ಕ್ ಆಗುತ್ತಿವೆಯಾ?
  • ಈ ಸ್ಪರ್ಧಿಗಳೆಲ್ಲಾ ಮನೆಯಲ್ಲಿ ಎಚ್ಚೆತ್ತುಕೊಂಡು ಆಟ ಆಡಬೇಕು
  • ಮನೆಯಲ್ಲಿ ಸ್ಪರ್ಧಿಗಳ ಮುಖಕ್ಕೆ ಚಹಾ ಚೆಲ್ಲಿರುವುದು ಯಾಕೆ..?

ಕಿಚ್ಚ ಸುದೀಪ್ ಅವರು ನಡೆಸಿಕೊಡುವ ಕನ್ನಡದ ಬಿಗ್​ಬಾಸ್​ ಸೀಸನ್​ 11 ಯಶಸ್ವಿಯಾಗಿ ಸಾಗುತ್ತಿದ್ದು 14ನೇ ವಾರಕ್ಕೆ ಎಂಟ್ರಿಕೊಟ್ಟಿದೆ. ಬಿಗ್​ಬಾಸ್​ ಕೊನೆ ಹಂತಕ್ಕೆ ಬರುವುದರಿಂದ ಸ್ಪರ್ಧಿಗಳಲ್ಲಿ ಪೈಪೋಟಿ ಹೆಚ್ಚಾಗಿ ನಡೆದಿದೆ. ಒಬ್ಬರ ಮೇಲೆ ಒಬ್ಬರು ಕುದಿಯುತ್ತಿದ್ದು ತಮ್ಮನ್ನು ತಾವು ಎಚ್ಚರಿಸಿಕೊಳ್ಳಬೇಕಿದೆ. ಸೂಪರ್ ಸಂಡೇಯಲ್ಲಿ ಕಿಚ್ಚನಿಂದ ಭವ್ಯಗೌಡ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಐಶ್ವರ್ಯ ಮುಖಕ್ಕೆ ಭವ್ಯ ಟೀ ಚೆಲ್ಲಿದ್ದಾರೆ.

ಬಿಗ್​ಬಾಸ್​ ಮನೆಯಲ್ಲಿ ಎಚ್ಚೆತ್ತಿಕೊಳ್ಳಿ ಎಂದು ಟಾಸ್ಕ್ ಶುರುವಾಗಿದ್ದು ಸ್ಪರ್ಧಿಗಳ ಮುಖಕ್ಕೆ ಟೀ ಅನ್ನು ಹಾಕಲಾಗಿದೆ. ಇದರಲ್ಲಿ ಕೇವಲ ಐಶ್ವರ್ಯ ಮುಖಕ್ಕೆ ಭವ್ಯ ಮಾತ್ರ ಟೀ ಚೆಲ್ಲಿಲ್ಲ. ಇದೇ ರೀತಿ ಎಚ್ಚೆತ್ತುಕೊಳ್ಳಿ ಎಂದು ಹನುಮಂತು ಮುಖಕ್ಕೆ ಧನರಾಜ್, ಗೌತಮಿ ಮುಖಕ್ಕೆ ರಜತ್, ಚೈತ್ರಾ ಮುಖಕ್ಕೆ ಮಂಜು, ಮಂಜು ಮುಖಕ್ಕೆ ಗೌತಮಿ, ಮೋಕ್ಷಿತಾ ಮುಖಕ್ಕೂ ಚಹಾ ಚೆಲ್ಲಲಾಗಿದೆ. ಅಂದರೆ ಇವರೆಲ್ಲಾ ಮನೆಯಲ್ಲಿ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಲಾಗಿದೆ.

publive-image

ಇದನ್ನೂ ಓದಿ:BBK11: ಅಬ್ಬಬ್ಬಾ.. ಈ ವಾರದ ಕಿಚ್ಚನಿಂದ ಚಪ್ಪಾಳೆ ಗಿಟ್ಟಿಸಿಕೊಂಡ ಸ್ಪರ್ಧಿ ಇವರೇ ನೋಡಿ

ಮನೆಯಲ್ಲಿ ಸದಸ್ಯರ ಪೈಕಿ ಎಚ್ಚೆತ್ತುಕೊಳ್ಳಬೇಕಿರುವ ಸದಸ್ಯ ಯಾರು ಎಂದು ಘೋಷಿಸಬೇಕಿದೆ. ಇದು ಬಿಗ್ ಬಾಸ್ ಆರ್ಡರ್ ಆಗಿದೆ. ಈ ಹಿನ್ನೆಲೆಯಲ್ಲಿ ಗೌತಮಿ, ಹನುಮಂತು, ಚೈತ್ರಾ, ಮೋಕ್ಷಿತಾ, ಮಂಜು ಇವರು ಇನ್ನಷ್ಟು ಎಚ್ಚೆತ್ತುಕೊಂಡು ಸ್ಪರ್ಧೆ ಮಾಡಬೇಕಿದೆ. ನೀವು ಟಾಸ್ಕ್​ನಲ್ಲಿ ಇನ್ನಷ್ಟು ಸುಧಾರಿಸಿಕೊಳ್ಳಬೇಕು ಎಂದು ಟೀ ಚೆಲ್ಲಲಾಗಿದೆ. ಗೌತಮಿಗೆ ಹೆದರಿಕೊಂಡು ಮಂಜು ಮಾತನಾಡಲ್ಲ ಎನ್ನಲಾಗಿದೆ.

ಚೈತ್ರಾ ಕುಂದಾಪುರ ಹಾಗೂ ಐಶ್ವರ್ಯ ನಡುವೆ ಮಾತಿನ ಸಮರ ನಡೆದಿದೆ. ನಿಮ್ಮ ಆಟಗಳಿಗೆ ಈ ವಾರ ನಾನು ಬಲಿಪಶು ಆದೆ ಎಂದು ಚೈತ್ರಾಗೆ, ಐಶ್ವರ್ಯ ಕೋಪದಲ್ಲಿ ಚೀರಿಕೊಂಡು ಹೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ವಾಕ್ಸಮರ ನಡೆದಿದ್ದು ಕಿಚ್ಚು ಬಿದ್ದಂತೆ ಆಗಿದೆ. ನೀನು ಯಾವಳೇ ಎ.. ಅನ್ನೋಕೆ ಎಂದು ಚೈತ್ರಾ ಏಕವಚನದಲ್ಲೇ ಮಾತನಾಡಿದ್ದಾರೆ. ಬಾಯಿ ಮುಚ್ಚೆ ಸಾಕು ಎಂದು ಐಶ್ವರ್ಯ ತಿರುಗೇಟು ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment