newsfirstkannada.com

ತುಕಾಲಿ ಸಂತೋಷ್​ ಕಾರಿಗೆ ಡಿಕ್ಕಿ ಹೊಡೆದ ಪ್ರಕರಣ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು

Share :

Published March 14, 2024 at 3:12pm

Update March 14, 2024 at 3:14pm

    ಹೊಸ ಕಾರನ್ನು ಖರೀದಿ ಮಾಡಿದ್ದ​ ತುಕಾಲಿ ಸಂತೋಪ್​ಗೆ ಆಘಾತ

    ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಸಾವು

    ಈ ಕೇಸ್​ ಸಂಬಂಧ ಕುಣಿಗಲ್ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲು

ತುಮಕೂರು: ಬಿಗ್​ಬಾಸ್​ ಸೀಸನ್​ 10ರ ಸ್ಪರ್ಧಿ ತುಕಾಲಿ ಸಂತೋಷ್​ ಕಾರು ಅಪಘಾತದಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ. ಜಗದೀಶ್ (44) ಮೃತ ಆಟೋ ಚಾಲಕ.

ಇದನ್ನು ಓದಿ: BREAKING: ಬಿಗ್​ಬಾಸ್​ ಸ್ಪರ್ಧಿ ತುಕಾಲಿ ಸಂತೋಷ್​ ಪ್ರಯಾಣಿಸುತ್ತಿದ್ದ ಕಾರಿಗೆ ಅಪಘಾತ

ತಡರಾತ್ರಿ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್​ ಕಾರಿಗೆ ಆಟೋ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್​​ ಇಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತ ಆಟೋ ಚಾಲಕ ಕುಣಿಗಲ್ ತಾಲೂಕು ಕೋಡಿಹಳ್ಳಿಪಾಳ್ಯ ನಿವಾಸಿ. ತಡರಾತ್ರಿ ತುಕಾಲಿ ಸಂತೋಷ್​ ಅವರು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿದ್ದರು. ಅದೇ ಮಾರ್ಗದಲ್ಲಿ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು.

ಈ ವೇಳೆ ತುಕಾಲಿ ಸಂತೋಷ್ ಕಾರಿಗೆ ಕುಡಿದ ಅಮಲಿನಲ್ಲಿ ಆಟೋ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಆದರೆ ಆಟೋ ಚಾಲಕನಿಗೆ ಗಂಭೀರವಾಗಿ ಗಾಯಗಳಾಗಿದ್ದವು. ಆ ಕೂಡಲೇ ಚಾಲಕ ಜಗದೀಶ್​ನನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಟೋ ಚಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತುಕಾಲಿ ಸಂತೋಷ್​ ಕಾರಿಗೆ ಡಿಕ್ಕಿ ಹೊಡೆದ ಪ್ರಕರಣ; ಚಿಕಿತ್ಸೆ ಫಲಿಸದೆ ಆಟೋ ಚಾಲಕ ಸಾವು

https://newsfirstlive.com/wp-content/uploads/2024/03/tukali-santhu-3.jpg

    ಹೊಸ ಕಾರನ್ನು ಖರೀದಿ ಮಾಡಿದ್ದ​ ತುಕಾಲಿ ಸಂತೋಪ್​ಗೆ ಆಘಾತ

    ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಸಾವು

    ಈ ಕೇಸ್​ ಸಂಬಂಧ ಕುಣಿಗಲ್ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲು

ತುಮಕೂರು: ಬಿಗ್​ಬಾಸ್​ ಸೀಸನ್​ 10ರ ಸ್ಪರ್ಧಿ ತುಕಾಲಿ ಸಂತೋಷ್​ ಕಾರು ಅಪಘಾತದಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ. ಜಗದೀಶ್ (44) ಮೃತ ಆಟೋ ಚಾಲಕ.

ಇದನ್ನು ಓದಿ: BREAKING: ಬಿಗ್​ಬಾಸ್​ ಸ್ಪರ್ಧಿ ತುಕಾಲಿ ಸಂತೋಷ್​ ಪ್ರಯಾಣಿಸುತ್ತಿದ್ದ ಕಾರಿಗೆ ಅಪಘಾತ

ತಡರಾತ್ರಿ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ತುಕಾಲಿ ಸಂತೋಷ್​ ಕಾರಿಗೆ ಆಟೋ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್​​ ಇಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತ ಆಟೋ ಚಾಲಕ ಕುಣಿಗಲ್ ತಾಲೂಕು ಕೋಡಿಹಳ್ಳಿಪಾಳ್ಯ ನಿವಾಸಿ. ತಡರಾತ್ರಿ ತುಕಾಲಿ ಸಂತೋಷ್​ ಅವರು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿದ್ದರು. ಅದೇ ಮಾರ್ಗದಲ್ಲಿ ಕುಣಿಗಲ್​ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು.

ಈ ವೇಳೆ ತುಕಾಲಿ ಸಂತೋಷ್ ಕಾರಿಗೆ ಕುಡಿದ ಅಮಲಿನಲ್ಲಿ ಆಟೋ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಆದರೆ ಆಟೋ ಚಾಲಕನಿಗೆ ಗಂಭೀರವಾಗಿ ಗಾಯಗಳಾಗಿದ್ದವು. ಆ ಕೂಡಲೇ ಚಾಲಕ ಜಗದೀಶ್​ನನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆಟೋ ಚಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More