ಇತ್ತೀಚಿಗಷ್ಟೇ ಹೊಸ ಕಾರನ್ನು ಖರೀದಿಸಿದ್ದ ತುಕಾಲಿ ಸಂತೋಷ್
ಆಟೋ ಡಿಕ್ಕಿಯಿಂದ ಅಪಘಾತಕ್ಕಿಡಾದ ಬಿಗ್ಬಾಸ್ ಸ್ಪರ್ಧಿ ಕಾರು
ಮದ್ಯ ಸೇವಿಸಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ಆಟೋ
ತುಮಕೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ಕಾರು ಅಪಘಾತಕ್ಕೀಡಾಗಿದೆ. ಈ ಘಟನೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ.
ಇದನ್ನು ಓದಿ: ಯದುವೀರ್ಗೆ ಬಿಜೆಪಿ ಟಿಕೆಟ್.. ಅಂದು ಘರ್ಜಿಸಿದ್ದ ಪ್ರತಾಪ್ ಸಿಂಹ ಇಂದು ಮಾಡಿದ್ದೇನು?
ಇತ್ತೀಚಿಗಷ್ಟೇ ತುಕಾಲಿ ಸಂತೋಷ್ ಹೊಸ ಕಾರನ್ನು ಖರೀದಿಸಿದ್ದರು. ಇದೀಗ ಅದೇ ಕಿಯಾ ಕಾರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ. ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿತ್ತು. ಅದೇ ಮಾರ್ಗದಲ್ಲಿ ಕುಣಿಗಲ್ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ಈ ವೇಳೆ ತುಕಾಲಿ ಸಂತೋಷ್ ಕಾರಿಗೆ ಆಟೋ ಚಾಲಕ ಜಗದೀಶ್ ಎಂಬಾತ ಡಿಕ್ಕಿ ಹೊಡೆದಿದ್ದಾನೆ. ಆಟೋ ಚಾಲನೆ ವೇಳೆ ಚಾಲಕ ಜಗದೀಶ್ ಮಧ್ಯೆ ಸೇವಿಸಿದ್ದ ಎನ್ನಲಾಗಿದೆ.
ಇನ್ನೂ ಅಪಘಾತಕ್ಕೀಡಾದ ಕಾರಿನಲ್ಲಿ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಮಾನಸ ಇದ್ದರು. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಆಟೋ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಚಾಲಕ ಜಗದೀಶ್ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಈ ಘಟನೆ ಸಂಬಂಧ ತುಕಾಲಿ ಸಂತೋಷ್ ಕಾರು ಹಾಗೂ ಆಟೋವನ್ನ ಕುಣಿಗಲ್ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇತ್ತೀಚಿಗಷ್ಟೇ ಹೊಸ ಕಾರನ್ನು ಖರೀದಿಸಿದ್ದ ತುಕಾಲಿ ಸಂತೋಷ್
ಆಟೋ ಡಿಕ್ಕಿಯಿಂದ ಅಪಘಾತಕ್ಕಿಡಾದ ಬಿಗ್ಬಾಸ್ ಸ್ಪರ್ಧಿ ಕಾರು
ಮದ್ಯ ಸೇವಿಸಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದ ಆಟೋ
ತುಮಕೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ಕಾರು ಅಪಘಾತಕ್ಕೀಡಾಗಿದೆ. ಈ ಘಟನೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ.
ಇದನ್ನು ಓದಿ: ಯದುವೀರ್ಗೆ ಬಿಜೆಪಿ ಟಿಕೆಟ್.. ಅಂದು ಘರ್ಜಿಸಿದ್ದ ಪ್ರತಾಪ್ ಸಿಂಹ ಇಂದು ಮಾಡಿದ್ದೇನು?
ಇತ್ತೀಚಿಗಷ್ಟೇ ತುಕಾಲಿ ಸಂತೋಷ್ ಹೊಸ ಕಾರನ್ನು ಖರೀದಿಸಿದ್ದರು. ಇದೀಗ ಅದೇ ಕಿಯಾ ಕಾರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ. ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿತ್ತು. ಅದೇ ಮಾರ್ಗದಲ್ಲಿ ಕುಣಿಗಲ್ನಿಂದ ಕುರುಡಿಹಳ್ಳಿಗೆ ಆಟೋ ಬರುತ್ತಿತ್ತು. ಈ ವೇಳೆ ತುಕಾಲಿ ಸಂತೋಷ್ ಕಾರಿಗೆ ಆಟೋ ಚಾಲಕ ಜಗದೀಶ್ ಎಂಬಾತ ಡಿಕ್ಕಿ ಹೊಡೆದಿದ್ದಾನೆ. ಆಟೋ ಚಾಲನೆ ವೇಳೆ ಚಾಲಕ ಜಗದೀಶ್ ಮಧ್ಯೆ ಸೇವಿಸಿದ್ದ ಎನ್ನಲಾಗಿದೆ.
ಇನ್ನೂ ಅಪಘಾತಕ್ಕೀಡಾದ ಕಾರಿನಲ್ಲಿ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಮಾನಸ ಇದ್ದರು. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಆಟೋ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಚಾಲಕ ಜಗದೀಶ್ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಈ ಘಟನೆ ಸಂಬಂಧ ತುಕಾಲಿ ಸಂತೋಷ್ ಕಾರು ಹಾಗೂ ಆಟೋವನ್ನ ಕುಣಿಗಲ್ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ