/newsfirstlive-kannada/media/post_attachments/wp-content/uploads/2024/12/bigg-boss1.jpg)
ಕನ್ನಡ ಬಿಗ್ಬಾಸ್ 12ವಾರಕ್ಕೆ ಕಾಲಿಡಲು ಸಜ್ಜಾಗಿದೆ. ಇದೇ ಹೊತ್ತಲ್ಲಿ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ಒಟ್ಟು 8 ಮಂದಿ ನಾಮಿನೇಟ್ ಆಗಿದ್ದಾರೆ. 8 ಮಂದಿಯಲ್ಲಿ ಈ ವಾರ ಓರ್ವ ಸ್ಪರ್ಧಿಗೆ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ಬಾಗಿಲು ಓಪನ್ ಆಗಲಿದೆ.
ಇದನ್ನೂ ಓದಿ: ಮೆಹಂದಿ ಮಾಸುವ ಮುನ್ನವೇ ಶೂಟಿಂಗ್ ಸೆಟ್ಗೆ ಬಂದ ಚಿನ್ನುಮರಿ ಜಾಹ್ನವಿ; ಫ್ಯಾನ್ಸ್ ಫುಲ್ ಖುಷ್
ನೋಡ ನೋಡುತ್ತಿದ್ದಂತೆ ಬಿಗ್ಬಾಸ್ ಸೀಸನ್ 11, 75ನೇ ದಿನಕ್ಕೆ ಕಲಿಟ್ಟಿದೆ. ಶನಿವಾರದ ಪಂಜಾಯ್ತಿಗೆ ಕಿಚ್ಚ ಸುದೀಪ ಎಂಟ್ರಿಗಾಗಿ ಅಭಿಮಾನಿಗಳು ಹಾಗೂ ಸ್ಪರ್ಧಿಗಳು ಕಾಯುತ್ತಿದ್ದಾರೆ. ಈ ವಾರ ಸೇಫ್ ಆಗಿರೋ ಸ್ಪರ್ಧಿಗಳ ಹೆಸರನ್ನು ಕಿಚ್ಚ ಸುದೀಪ್ ಘೋಷಣೆ ಮಾಡಲಿದ್ದಾರೆ. ಭಾನುವಾರದ ಸಂಚಿಕೆಯಲ್ಲಿ ಓರ್ವ ಸ್ಪರ್ಧಿಯನ್ನು ಬಿಗ್ಬಾಸ್ ಮನೆಯಿಂದ ಆಚೆ ಕಳುಹಿಸಲಿದ್ದಾರೆ.
ಈ ವಾರ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ಭವ್ಯಾ ಗೌಡ, ಶಿಶಿರ್, ತ್ರಿವಿಕ್ರಮ್, ರಜತ್, ಧನರಾಜ್ ಆಚಾರ್ಯ, ಹನುಮಂತ ಹಾಗೂ ಚೈತ್ರಾ ಕುಂದಾಪುರ ನಾಮಿನೇಟ್ ಆಗಿದ್ದಾರೆ. ಜೊತೆಗೆ ಕ್ಯಾಪ್ಟನ್ ಗೌತಮಿ ಜಾಧವ್ ನೇರವಾಗಿ ಮೋಕ್ಷಿತಾ ಪೈ ನಾಮಿನೇಟ್ ಆಗಿದ್ದಾರೆ.
View this post on Instagram
ಈ ವಾರ ನಾಮಿನೇಷನ್ ಪ್ರಕ್ರಿಯೆ ನಡೆಸಿಕೊಡಲು ಸೀಸನ್ 10ರ ಸ್ಪರ್ಧಿಗಳಾದ ಡ್ರೋನ್ ಪ್ರತಾಪ್, ತನಿಷಾ, ತುಕಾಲಿ ಸಂತೋಷ್, ವರ್ತೂರು ಸಂತೋಷ್, ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಗೌಡ ಬಿಗ್ಬಾಸ್ ಮನೆಗೆ ಬಂದಿದ್ದರು. ಸ್ಪರ್ಧಿಗಳಿಗೆ ಒಂದೊಂದು ಟಾಸ್ಕ್ ಕೊಟ್ಟು ನಾಮಿನೇಷನ್ ಪ್ರಕ್ರಿಯೆ ಪೂರ್ಣ ಮಾಡಿದ್ದಾರೆ.
ಇದಾದ ಬಳಿಕ ಬಿಗ್ಬಾಸ್ ಮನೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಗೆಳತಿ.. ಗೆಳತಿ ಅಂದುಕೊಂಡಿದ್ದ ಮಂಜು ಹಾಗೂ ಗೌತಮಿ ಮಧ್ಯೆ ಬಿರುಕು ಮೂಡಿದೆ. ಮತ್ತೊಂದು ಕಡೆ ವೈಲ್ಡ್ ಕಾರ್ಡ್ ಸ್ಪರ್ಧಿ ರಜತ್ ಏಕಾಏಕಿ ಧನರಾಜ್ ಆಚಾರ್ಯ ಮೇಲೆ ಕೈ ಮಾಡಲು ಹೋಗಿದ್ದರು. ಕಳೆದ ವಾರ ನಾಮಿನೇಷನ್ನಿಂದ ಸೇಫ್ ಆಗಿದ್ದ ಚೈತ್ರಾ ಕುಂದಾಪುರ ಈ ಬಾರಿ ಏನಾಗ್ತಾರೆ ಅಂತ ಇಂದಿನ ವಾರದ ಕತೆ ಕಿಚ್ಚನ ಪಂಜಾಯ್ತಿಯಲ್ಲಿ ತಿಳಿದು ಬರಲಿದೆ. ಅಲ್ಲದೇ ಕಿಚ್ಚ ಸುದೀಪ್ ತಮ್ಮ ಪಂಚಾಯ್ತಿಯಲ್ಲಿ ಯಾವೆಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡ್ತಾರೆ. ಹಾಗೆಯೇ ತಪ್ಪು ಮಾಡಿದ ಯಾವ ಸ್ಪರ್ಧಿಗೆ ಕ್ಲಾಸ್ ತೆಗೆದುಕೊಳ್ತಾರೆ ಅಂತಾ ತಿಳಿದುಕೊಳ್ಳಲು ವೀಕ್ಷಕರು ಎಕ್ಸೈಟ್ ಆಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ