/newsfirstlive-kannada/media/post_attachments/wp-content/uploads/2025/01/BBK11_TRIVIKRAM.jpg)
ಕನ್ನಡದ ಬಿಗ್ ಬಾಸ್ ಶೋನಲ್ಲಿ ಕಳೆದ ವಾರ ಯಾರನ್ನೂ ಮನೆಯಿಂದ ಆಚೆ ಕಳಿಸಿಲ್ಲ. ಆದರೆ ಈ ವಾರ 9 ಸ್ಪರ್ಧಿಗಳಲ್ಲಿ ಯಾರದರೂ ಗೇಟ್ ಪಾಸ್ ಪಡೆದುಕೊಳ್ಳುತ್ತಾರೆ. ಅದು ಯಾರು ಎಂಬುದೇ ಪ್ರೇಕ್ಷಕರ ಕುತೂಹಲವಾಗಿತ್ತದೆ. ಹೀಗಾಗಿಯೇ ವಾರದ ಕೊನೆಯಲ್ಲಿ ಕಿಚ್ಚ ಸುದೀಪ್ ಅವರು ಸ್ಪರ್ಧಿಯನ್ನು ಹೊರಗೆ ಕಳಿಸಿಕೊಡುತ್ತಾರೆ. ಗ್ರ್ಯಾಂಡ್ ಫಿನಾಲೆ ಸಮೀಪಿಸುತ್ತಿದ್ದು ಸ್ಪರ್ಧಿಗಳಿಗೆ ಒತ್ತಡ ಹೆಚ್ಚಾಗಿದೆ. ಇದರ ಜೊತೆ ಟಾಸ್ಕ್ಗಳಲ್ಲೂ ಗೆಲುವು ಪಡೆಯಬೇಕಾಗಿದೆ.
ಮನೆಯಲ್ಲಿನ ಸದಸ್ಯರಿಗೆ ಇಂದು ನೀಡಿರುವ ಟಾಸ್ಕ್ನಲ್ಲಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದೆ ಹೆಚ್ಚು ಕಾಣುತ್ತದೆ. ಟಾಸ್ಕ್ ಪ್ರಕಾರ ಒಂದು ಕೈಯಲ್ಲಿ ಪೋಲ್ ಮತ್ತೊಂದು ಕೈಯಲ್ಲಿ ಬಣ್ಣದ ನೀರಿನ ಬಾಟಲ್ ಕೊಟ್ಟಿರುತ್ತಾರೆ. ಒಂದು ಬಾರಿಗೆ ಇಬ್ಬರು ಸ್ಪರ್ಧಿಗಳು ಆಡಬೇಕು. ಕೈಯಲ್ಲಿರುವ ಪೋಲ್ನಿಂದ ಹೊಡೆದು ಬಾಟಲ್ ಒಳಗಿನ ಬಣ್ಣದ ನೀರಿನ್ನು ಚೆಲ್ಲಬೇಕು. ಯಾರ ನೀರು ಹೆಚ್ಚಿಗೆ ಚೆಲ್ಲುತ್ತಾವೋ ಅವರು ಸೋತಂತೆ. ಒಂದು ವೇಳೆ ಬಾಟಲ್ ಕೆಳಗೆ ಬಿದ್ದರೂ ಸ್ಪರ್ಧಿ ಸೋತಾಗೆ.
ಇದನ್ನೂ ಓದಿ:BBK11; ಟಾಸ್ಕ್ನಲ್ಲಿ ತ್ರಿವಿಕ್ರಮ್- ಮಂಜು ಮಧ್ಯೆ ಹೊಡೆದಾಟ.. ರೂಲ್ಸ್ ಬ್ರೇಕ್ ಮಾಡಿದ್ರಾ?
ಸದ್ಯ ಈ ರೀತಿಯ ಗೇಮ್ ಆಡುವಾಗ ತ್ರಿವಿಕ್ರಮ್ ಮುಖ, ಮುಖಕ್ಕೆ ಮಂಜು ಪೋಲ್ನಿಂದ ಹೊಡೆದರು. ಹೆಂಗೆ ಬಿತ್ತು, ಹೇಗೆ ಬಿತ್ತು ಎಂದು ಹೇಳಿದರೆ, ಹೀಗೆ ಹೊಡೆದರೆ ಹೆಂಗೆ?. ನಾನು ಹೊಡೆಯುತ್ತೇನೆ ಎಂದು 2 ಸೆಕೆಂಡ್ಗೆ ಮಂಜು ಕೈಯಲ್ಲಿನ ಬಾಟಲ್ ಬೀಳಿಸುತ್ತೇನೆ ಎಂದು ಚಾಲೆಂಜ್ ಹಾಕಿದ್ದಾರೆ. ಪೋಲ್ನಿಂದ ತ್ರಿವಿಕ್ರಮ್ ಹೊಡೆದಿರುವುದು ವಿಡಿಯೋದಲ್ಲಿದೆ. ಆದರೆ ಮಂಜು ಕೈಯಿಂದ ಬಾಟಲ್ ಕೆಳಗೆ ಬಿದ್ದಿಲ್ಲ. ಆಡುವಾಗ ಎಲ್ಲ ಸ್ಪರ್ಧಿಗಳು ನಿಯಮ ಮೀರಿದ್ದಾರೆ ಎನ್ನಲಾಗಿದೆ. ಆದರೆ ಈ ಟಾಸ್ಕ್ನಲ್ಲಿ ಯಾರು ಗೆದ್ದಿದಾರೆ ಎನ್ನುವುದು ಕುತೂಹಲ ವಿದೆ.
ಇನ್ನು ತ್ರಿವಿಕ್ರಮ್ ಹಾಗೂ ಮಂಜು ನಡುವೆ ಮಾತಿನ ಸಮರ ನಡೆದಿದ್ದು ಟಾಸ್ಕ್ನಲ್ಲೂ ಇಬ್ಬರು ಕೋಪದಲ್ಲೇ ಆಡಿದ್ದಾರೆ. ಮನೆ ಕ್ಯಾಪ್ಟನ್ ಆಗಿರುವ ರಜತ್ ಅವರು ಏನು ಮಾಡೋಕೆ ಆಗಲ್ಲ ಗುರು, ಕಾಪಾಡಿಕೋ ಎಂದು ಮಂಜುಗೆ ಹೇಳಿದ್ದಾರೆ. ಬಿಗ್ಬಾಸ್ ಪ್ರಕಾರ ಯಾರು ಟಾಸ್ಕ್ ಚೆನ್ನಾಗಿ ಪೂರ್ಣಗೊಳಿಸಿ ಗೆಲವು ಪಡೆಯುತ್ತಾರೋ ಅವರಿಗೆ ಫಿನಾಲೆ ಟಿಕೆಟ್ ನೀಡುವುದಾಗಿ ಹೇಳಿದ್ದಾರೆ. ಹೀಗಾಗಿ ಯಾರು ಆ ಅದೃಷ್ಣಶಾಲಿಗಳು ಎನ್ನುವುದು ಶೀಘ್ರದಲ್ಲೇ ಗೊತ್ತಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ