/newsfirstlive-kannada/media/post_attachments/wp-content/uploads/2024/10/BBK11-1-1.jpg)
ಬಿಗ್ಬಾಸ್ ಮನೆಯಿಂದ ಲಾಯರ್ ಜಗದೀಶ್ ಹಾಗೂ ರಂಜಿತ್ ಹೊರ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯಲ್ಲಿ ಹೊಡೆದಾಡಿಕೊಂಡ ಹಿನ್ನೆಲೆಯಲ್ಲಿ ಇಬ್ಬರೂ ಔಟ್ ಆಗಿದ್ದಾರೆ ಎನ್ನಲಾಗುತ್ತಿದೆ.
ನಿನ್ನೆ ಎಪಿಸೋಡ್ನಲ್ಲೂ ಕೂಡ ದೊಡ್ಡ ಜಗಳವಾಗಿತ್ತು. ರಂಜಿತ್ ಮತ್ತು ಜಗದೀಶ್ ನಡುವೆ ನೇರಾನೇರ ಜಗಳ ಆಗಿತ್ತು. ಜಗದೀಶ್ ಮತ್ತು ಉಗ್ರಂ ಮಂಜು ನಡುವೆ ಜಗಳವಾಗಿತ್ತು. ಕೆಲವು ಪ್ರಾಥಮಿಕ ಮಾಹಿತಿ ಪ್ರಕಾರ ಮತ್ತೊಬ್ಬ ಸ್ಪರ್ಧಿ ಮಾನಸಾ ಅವರ ವಿಚಾರಕ್ಕೆ ಜಗಳ ಆಗಿದೆ ಎನ್ನಲಾಗಿದೆ. ಈ ಮೂಲಕ ಕನ್ನಡ ಬಿಗ್ಬಾಸ್ ಇತಿಹಾಸದಲ್ಲಿ ಜಗಳ ಆಡಿಕೊಂಡು ಸ್ಪರ್ಧಿಗಳು ಹೊರಬಿದ್ದ ಮೂರನೇ ಪ್ರಕರಣ ಇದಾಗಿದೆ. ಈ ಹಿಂದೆ ಹುಚ್ಚ ವೆಂಕಟ್, ಸಂಯುಕ್ತಾ ಹೆಗಡೆ ಬಿಗ್ಬಾಸ್ ಮನೆಯಿಂದ ಔಟ್ ಆಗಿದ್ದರು.
ಇದನ್ನೂ ಓದಿ:Breaking: ಬಿಗ್ ಬಾಸ್ನಲ್ಲಿ ಹೊಡೆದಾಡಿಕೊಂಡ ಸ್ಪರ್ಧಿಗಳು! ಜಗದೀಶ್ ಮತ್ತು ರಂಜಿತ್ ಔಟ್
ಜಗದೀಶ್ ಕಳೆದ ಮೂರ್ನಾಲ್ಕು ದಿನಗಳಿಂದ ತುಂಬಾ ಅಗ್ರೆಸೀವ್ ಆಗಿ ಆಟ ಆಡುತ್ತಿದ್ದರು. ಇತರೆ ಸ್ಪರ್ಧೆಗಳನ್ನು ಕೆರಳಿಸುವ ರೀತಿಯಲ್ಲಿ ಮಾತುಗಳನ್ನು ಆಡ್ತಿದ್ದಾರೆ ಅಂತಾ ಸ್ಪರ್ಧಿಗಳು ನೇರವಾಗಿ ಆರೋಪ ಮಾಡ್ತಿದ್ದರು. ಇದು ಅತಿರೇಕಕ್ಕೆ ಹೋಗಿ ಮನೆಯಿಂದನೇ ಹೊರ ಬೀಳುವ ಪರಿಸ್ಥಿತಿ ನಿರ್ಮಾಣ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ