ಬಿಗ್ಬಾಸ್ ಸೀಸನ್ 9 ವಿನ್ನರ್ ರೂಪೇಶ್ ಶೆಟ್ಟಿ ಈಗ ನಟ!
ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ‘ಅಧಿಪತ್ರ’ಗೆ ಮುಹೂರ್ತ
ಈ ಚಿತ್ರಕ್ಕೆ ಗಿಚ್ಚಿ ಗಿಲಿಗಿಲಿ ಖ್ಯಾತಿಯ ನಿರೂಪಕಿ ಜಾಹ್ನವಿ ನಟಿ
ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾದ ಮುಹೂರ್ತ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಮಾತಾಡಿದ ನಟ ರೂಪೇಶ್ ಶೆಟ್ಟಿ, ಬಿಗ್ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು.
ಬಿಗ್ಬಾಸ್ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ ಕೆಲಸ ತುಂಬಾ ಇತ್ತು. ಈ ಚಿತ್ರದ ಕೆಲಸ ಮುಗಿಸಿ ಬೇರೆ ಸಿನಿಮಾ ಒಪ್ಪಿಕೊಳ್ಳಬೇಕು ಎಂದು ತೀರ್ಮಾನ ಮಾಡಿದ್ದೆ. ದೇವರ ದಯೆಯಿಂದ ಆ ಚಿತ್ರ ಹಿಟ್ ಆಗಿದೆ. 150 ಥಿಯೇಟರ್ಗಳಲ್ಲಿ ಓಡಿದೆ. ಅಧಿಪತ್ರ ಸಿನಿಮಾ ನಿರ್ದೇಶಕರು ಕಥೆ ಹೇಳಿದಾಗ ಇಂಟ್ರೆಸ್ಟ್ ಎನಿಸಿತು. ಅವರ ಮೊದಲ ಸಿನಿಮಾವಾದರೂ ಸ್ಕ್ರೀನ್ ಪ್ಲೇ ವಿವರಿಸಿದಾಗ ಎಷ್ಟು ತಯಾರಾಗಿದ್ದರೂ ಎಂದರೆ ಪ್ರತಿ ಸೀನ್ ಡ್ರಾಯಿಂಗ್ ಮಾಡಿಕೊಂಡಿದ್ದರು. ನನಗೆ ಅದನ್ನು ನೋಡಿ ತುಂಬಾ ಧೈರ್ಯ ಬಂತು. ಅವರಿಗೆ ಒಂದು ವಿಷನ್ ಇದೆ. ಈ ಕಾರಣದಿಂದ ಅಧಿಪತ್ರ ಸಿನಿಮಾ ಒಪ್ಪಿಕೊಂಡಿದ್ದೇನೆ. ಸದ್ಯದಲ್ಲಿ ಈ ಚಿತ್ರಕ್ಕಾಗಿ ನನ್ನ ಗೆಟಪ್ ಬದಲಾಗಲಿದೆ ಎಂದರು.
ಇನ್ನು ಸುದ್ದಿ ನಿರೂಪಕಿ, ನಟಿ ಜಾಹ್ನವಿ ಮಾತನಾಡಿ, ಅಧಿಪತ್ರ ಸಿನಿಮಾ ಈಗ ಶುರುವಾಗಿದೆ. ಇವತ್ತು ಮುಹೂರ್ತ ಆಗಿದೆ. ಈ ರೀತಿ ಒಂದು ಸಿನಿಮಾ ಬರ್ತಿದೆ ಅಂದಾಗಲೇ ತುಂಬಾ ಚೆನ್ನಾಗಿ ಪ್ರಮೋಷನ್ ಸಿಕ್ತಿದೆ. ಟೈಟಲ್ ತುಂಬಾ ಕ್ಯಾಚಿಯಾಗಿದೆ. ನನ್ನ ಪಾತ್ರದ ಹೆಸರು ಬೃಹತಿ. ನನ್ನ ಪಾತ್ರದ ಹೆಸರು ಕೂಡ ವಿಭಿನ್ನವಾಗಿದೆ. ಈ ಸಿನಿಮಾ ತುಂಬಾ ಪಾಸಿಟಿವ್ ಆಗಿದೆ ಎಂದರು. ನಿರ್ದೇಶಕ ಚಹನ್ ಶೆಟ್ಟಿ ಅವರು ರೂಪೇಶ್ ಶೆಟ್ಟಿ ಹುಟ್ಟಹಬ್ಬಕ್ಕೆ ಟೈಟಲ್ ಅನೌನ್ಸ್ ಮಾಡಿದ್ದೆವು. ಆ ದಿನವೇ ನಮಗೆ ಒಳ್ಳೆ ಪ್ರೋತ್ಸಾಹ ಸಿಕ್ಕಿದೆ. ರೂಪೇಶ್ ಶೆಟ್ಟಿ ಅವರ ಹಿಂದಿನ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ವಿಭಿನ್ನ ಪಾತ್ರ ನಿರ್ವಹಿಸಲಿದ್ದಾರೆ. ಗಣೇಶ್ ಹಬ್ಬದ ಬಳಿಕ ಶೂಟಿಂಗ್ ಶುರುವಾಗಲಿದೆ. ಚಿತ್ರದಲ್ಲಿ ಎರಡು ಹಾಡುಗಳು ಇರಲಿವೆ ಎಂದರು.
View this post on Instagram
ತುಳು ಸಿನಿಮಾ ರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಗಳಲ್ಲಿ ಕೆಲಸ ಕೂಡ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡು ಕೊಂಡಿದ್ದಾರೆ. ಬಿಗ್ಬಾಸ್ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಿಗ್ಬಾಸ್ ಸೀಸನ್ 9 ವಿನ್ನರ್ ರೂಪೇಶ್ ಶೆಟ್ಟಿ ಈಗ ನಟ!
ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ‘ಅಧಿಪತ್ರ’ಗೆ ಮುಹೂರ್ತ
ಈ ಚಿತ್ರಕ್ಕೆ ಗಿಚ್ಚಿ ಗಿಲಿಗಿಲಿ ಖ್ಯಾತಿಯ ನಿರೂಪಕಿ ಜಾಹ್ನವಿ ನಟಿ
ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾದ ಮುಹೂರ್ತ ನೆರವೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಮಾತಾಡಿದ ನಟ ರೂಪೇಶ್ ಶೆಟ್ಟಿ, ಬಿಗ್ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು.
ಬಿಗ್ಬಾಸ್ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ ಕೆಲಸ ತುಂಬಾ ಇತ್ತು. ಈ ಚಿತ್ರದ ಕೆಲಸ ಮುಗಿಸಿ ಬೇರೆ ಸಿನಿಮಾ ಒಪ್ಪಿಕೊಳ್ಳಬೇಕು ಎಂದು ತೀರ್ಮಾನ ಮಾಡಿದ್ದೆ. ದೇವರ ದಯೆಯಿಂದ ಆ ಚಿತ್ರ ಹಿಟ್ ಆಗಿದೆ. 150 ಥಿಯೇಟರ್ಗಳಲ್ಲಿ ಓಡಿದೆ. ಅಧಿಪತ್ರ ಸಿನಿಮಾ ನಿರ್ದೇಶಕರು ಕಥೆ ಹೇಳಿದಾಗ ಇಂಟ್ರೆಸ್ಟ್ ಎನಿಸಿತು. ಅವರ ಮೊದಲ ಸಿನಿಮಾವಾದರೂ ಸ್ಕ್ರೀನ್ ಪ್ಲೇ ವಿವರಿಸಿದಾಗ ಎಷ್ಟು ತಯಾರಾಗಿದ್ದರೂ ಎಂದರೆ ಪ್ರತಿ ಸೀನ್ ಡ್ರಾಯಿಂಗ್ ಮಾಡಿಕೊಂಡಿದ್ದರು. ನನಗೆ ಅದನ್ನು ನೋಡಿ ತುಂಬಾ ಧೈರ್ಯ ಬಂತು. ಅವರಿಗೆ ಒಂದು ವಿಷನ್ ಇದೆ. ಈ ಕಾರಣದಿಂದ ಅಧಿಪತ್ರ ಸಿನಿಮಾ ಒಪ್ಪಿಕೊಂಡಿದ್ದೇನೆ. ಸದ್ಯದಲ್ಲಿ ಈ ಚಿತ್ರಕ್ಕಾಗಿ ನನ್ನ ಗೆಟಪ್ ಬದಲಾಗಲಿದೆ ಎಂದರು.
ಇನ್ನು ಸುದ್ದಿ ನಿರೂಪಕಿ, ನಟಿ ಜಾಹ್ನವಿ ಮಾತನಾಡಿ, ಅಧಿಪತ್ರ ಸಿನಿಮಾ ಈಗ ಶುರುವಾಗಿದೆ. ಇವತ್ತು ಮುಹೂರ್ತ ಆಗಿದೆ. ಈ ರೀತಿ ಒಂದು ಸಿನಿಮಾ ಬರ್ತಿದೆ ಅಂದಾಗಲೇ ತುಂಬಾ ಚೆನ್ನಾಗಿ ಪ್ರಮೋಷನ್ ಸಿಕ್ತಿದೆ. ಟೈಟಲ್ ತುಂಬಾ ಕ್ಯಾಚಿಯಾಗಿದೆ. ನನ್ನ ಪಾತ್ರದ ಹೆಸರು ಬೃಹತಿ. ನನ್ನ ಪಾತ್ರದ ಹೆಸರು ಕೂಡ ವಿಭಿನ್ನವಾಗಿದೆ. ಈ ಸಿನಿಮಾ ತುಂಬಾ ಪಾಸಿಟಿವ್ ಆಗಿದೆ ಎಂದರು. ನಿರ್ದೇಶಕ ಚಹನ್ ಶೆಟ್ಟಿ ಅವರು ರೂಪೇಶ್ ಶೆಟ್ಟಿ ಹುಟ್ಟಹಬ್ಬಕ್ಕೆ ಟೈಟಲ್ ಅನೌನ್ಸ್ ಮಾಡಿದ್ದೆವು. ಆ ದಿನವೇ ನಮಗೆ ಒಳ್ಳೆ ಪ್ರೋತ್ಸಾಹ ಸಿಕ್ಕಿದೆ. ರೂಪೇಶ್ ಶೆಟ್ಟಿ ಅವರ ಹಿಂದಿನ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ವಿಭಿನ್ನ ಪಾತ್ರ ನಿರ್ವಹಿಸಲಿದ್ದಾರೆ. ಗಣೇಶ್ ಹಬ್ಬದ ಬಳಿಕ ಶೂಟಿಂಗ್ ಶುರುವಾಗಲಿದೆ. ಚಿತ್ರದಲ್ಲಿ ಎರಡು ಹಾಡುಗಳು ಇರಲಿವೆ ಎಂದರು.
View this post on Instagram
ತುಳು ಸಿನಿಮಾ ರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಗಳಲ್ಲಿ ಕೆಲಸ ಕೂಡ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡು ಕೊಂಡಿದ್ದಾರೆ. ಬಿಗ್ಬಾಸ್ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ