newsfirstkannada.com

ಬೆಂಗಳೂರಲ್ಲಿ ಮತ್ತೊಂದು ಹಿಟ್​ ಅಂಡ್ ರನ್ ಕೇಸ್; ಬೈಕ್ ಸವಾರನ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು

Share :

16-11-2023

    ಅಪಘಾತ ಮಾಡಿ ಪರಾರಿಯಾಗಿರುವ ವಾಹನ ಸವಾರ

    ಪೊಲೀಸರಿಂದ ಆರೋಪಿ ಬಂಧನಕ್ಕೆ ಕಾರ್ಯಾಚರಣೆ

    ಹಿಂಬದಿಯಿಂದ ವೇಗವಾಗಿ ಬಂದ ವಾಹನ ಬೈಕ್​​ಗೆ ಡಿಕ್ಕಿ

ಬೆಂಗಳೂರು: ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಹಿಟ್ ಅಂಡ್ ರನ್​ ನಡೆದಿದೆ. ಅಪಘಾತ ಪ್ರಕರಣದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

37 ವರ್ಷದ ಪ್ರಸನ್ನ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ. ತುಮಕೂರು ರಸ್ತೆ ಕಡೆಯಿಂದ ಹೊಸೂರು ರಸ್ತೆ ಕಡೆ ಬೈಕ್​ನಲ್ಲಿ ಪ್ರಸನ್ನ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದಿದ್ದ ವಾಹನ ಬೈಕ್​ನ ಹ್ಯಾಂಡಲ್​​ಗೆ ಡಿಕ್ಕಿ ಹೊಡೆದಿದೆ.

ಬೈಕ್​ನಿಂದ ಕೆಳಗೆ ಬಿದ್ದಿದ್ದ ಪ್ರಸನ್ನ ಮೇಲೆ ವಾಹನದ ಚಕ್ರ ಹರಿದಿದೆ. ಬಳಿಕ ವಾಹನ ಸಮೇತ ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ಮತ್ತೊಂದು ಹಿಟ್​ ಅಂಡ್ ರನ್ ಕೇಸ್; ಬೈಕ್ ಸವಾರನ ಮೇಲೆ ಚಕ್ರ ಹರಿದು ಸ್ಥಳದಲ್ಲೇ ಸಾವು

https://newsfirstlive.com/wp-content/uploads/2023/09/BIKE_ACCIDENT-1.jpg

    ಅಪಘಾತ ಮಾಡಿ ಪರಾರಿಯಾಗಿರುವ ವಾಹನ ಸವಾರ

    ಪೊಲೀಸರಿಂದ ಆರೋಪಿ ಬಂಧನಕ್ಕೆ ಕಾರ್ಯಾಚರಣೆ

    ಹಿಂಬದಿಯಿಂದ ವೇಗವಾಗಿ ಬಂದ ವಾಹನ ಬೈಕ್​​ಗೆ ಡಿಕ್ಕಿ

ಬೆಂಗಳೂರು: ಕೆಂಗೇರಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಹಿಟ್ ಅಂಡ್ ರನ್​ ನಡೆದಿದೆ. ಅಪಘಾತ ಪ್ರಕರಣದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

37 ವರ್ಷದ ಪ್ರಸನ್ನ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ. ತುಮಕೂರು ರಸ್ತೆ ಕಡೆಯಿಂದ ಹೊಸೂರು ರಸ್ತೆ ಕಡೆ ಬೈಕ್​ನಲ್ಲಿ ಪ್ರಸನ್ನ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದಿದ್ದ ವಾಹನ ಬೈಕ್​ನ ಹ್ಯಾಂಡಲ್​​ಗೆ ಡಿಕ್ಕಿ ಹೊಡೆದಿದೆ.

ಬೈಕ್​ನಿಂದ ಕೆಳಗೆ ಬಿದ್ದಿದ್ದ ಪ್ರಸನ್ನ ಮೇಲೆ ವಾಹನದ ಚಕ್ರ ಹರಿದಿದೆ. ಬಳಿಕ ವಾಹನ ಸಮೇತ ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More