ಬೆಳ್ಳಂಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅನಾಹುತ
ದುರ್ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ತನಿಖೆ ಆರಂಭ
ಚಿತ್ರದುರ್ಗ: ಚಿನ್ನಯ್ಯನಹಟ್ಟಿ ಬಳಿ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚಿನ್ನಯ್ಯನಗಟ್ಟಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ.
ಶಿವಾನಂದ (50) ಮೃತ ದುರ್ದೈವಿ. ಮೃತ ಶಿವಾನಂದ ಹಿರಿಯೂರು ತಾಲೂಕಿನ ಜಡಗೊಂಡನಹಳ್ಳಿ ನಿವಾಸಿಯಾಗಿದ್ದಾರೆ. ಮಾರುಕಟ್ಟೆಗೆ ಹೂ ತರಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಮೃತದೇಹ ಛಿದ್ರಗೊಂಡಿದೆ.
ಅಪಘಾತದ ತೀವ್ರತೆಗೆ ಬೈಕ್ ಕೂಡ ಜಖಂಗೊಂಡಿದೆ. ಇನ್ನು ಮೃತ ದೇಹದ ಕೆಲವು ಭಾಗಗಳು ರಸ್ತೆ ತುಂಬಾ ಬಿದ್ದಿದೆ. ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆಳ್ಳಂಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅನಾಹುತ
ದುರ್ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ತನಿಖೆ ಆರಂಭ
ಚಿತ್ರದುರ್ಗ: ಚಿನ್ನಯ್ಯನಹಟ್ಟಿ ಬಳಿ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚಿನ್ನಯ್ಯನಗಟ್ಟಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ.
ಶಿವಾನಂದ (50) ಮೃತ ದುರ್ದೈವಿ. ಮೃತ ಶಿವಾನಂದ ಹಿರಿಯೂರು ತಾಲೂಕಿನ ಜಡಗೊಂಡನಹಳ್ಳಿ ನಿವಾಸಿಯಾಗಿದ್ದಾರೆ. ಮಾರುಕಟ್ಟೆಗೆ ಹೂ ತರಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಮೃತದೇಹ ಛಿದ್ರಗೊಂಡಿದೆ.
ಅಪಘಾತದ ತೀವ್ರತೆಗೆ ಬೈಕ್ ಕೂಡ ಜಖಂಗೊಂಡಿದೆ. ಇನ್ನು ಮೃತ ದೇಹದ ಕೆಲವು ಭಾಗಗಳು ರಸ್ತೆ ತುಂಬಾ ಬಿದ್ದಿದೆ. ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ