ಬಿಕ್ಲು ಶಿವನ ಕೇಸ್​​ಗೆ ಟ್ವಿಸ್ಟ್​​​.. ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಸಂಕಷ್ಟ

author-image
Veena Gangani
Updated On
ಬಿಕ್ಲು ಶಿವನ ಕೇಸ್​​ಗೆ ಟ್ವಿಸ್ಟ್​​​.. ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಸಂಕಷ್ಟ
Advertisment
  • ವಿಚಾರಣೆ ವೇಳೆಯೇ ಅರೆಸ್ಟ್​ ಆಗ್ತಾರಾ ಮಾಜಿ ಸಚಿವ?
  • ಇಂದು ವಿಚಾರಣೆಗೆ ಹಾಜರಾಗಲು ಹೈಕೋರ್ಟ್​ ಸೂಚನೆ
  • ಬೈರತಿ ಬಸವರಾಜ್​ ವಿಚಾರಣೆ ಆಯಾಮದಲ್ಲಿ ಚರ್ಚೆ

ರೌಡಿ ಶೀಟರ್​ ಬಿಕ್ಲು ಶಿವನ ಹತ್ಯೆ ಕೇಸ್​ನಲ್ಲಿ ಬಿಜೆಪಿ ಶಾಸಕನಗೆ ಬಂಧನ ಭೀತಿ ಶುರುವಾಗಿದೆ. ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್​ ನಿರಾಕರಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಿದೆ. ಬೈರತಿ ಬಸವರಾಜ್​ರ ವಿಚಾರಣೆಗೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​ ನೀಡ್ತಿದ್ದಂತೆ ಹಿರಿಯ ಪೊಲೀಸರು ಅಲರ್ಟ್​ ಆಗಿದ್ದು, ತನಿಖಾ ತಂಡದ ಜೊತೆ ರಾತ್ರಿ ದಿಢೀರ್​ ಸಭೆ ನಡೆಸಿದ್ದಾರೆ.

ಇದನ್ನೂ ಓದಿ: ಕನ್ನಡದ ಸ್ಟಾರ್ ನಿರೂಪಕಿ ಮದುವೆ.. ಅನುಶ್ರೀ ಆಗ್ತಾ ಇರೋದು ಲವ್​..? ಅರೇಂಜ್ ಮ್ಯಾರೇಜ್​..?

publive-image

ರೌಡಿ ಶೀಟರ್​ ಶಿವಪ್ರಕಾಶ್​ ಅಲಿಯಾಸ್​ ಬಿಕ್ಲು ಶಿವನ ಪ್ರಕರಣ, ಮಾಜಿ ಸಚಿವ ಬೈರತಿ ಬಸವರಾಜ್​ಗೆ ಸಂಕಷ್ಟತಂದೊಡ್ಡಿದೆ. ಇದರ ನಡುವೆ ತಮ್ಮ ವಿರುದ್ಧದ ಎಫ್​ಐಆರ್​ ರದ್ದು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದ ಬಿಜೆಪಿ ಶಾಸಕನಿಗೆ ಹಿನ್ನಡೆಯಾಗಿದ್ದು, ಪೊಲೀಸರ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಇದರಿಂದ ಮಾಜಿ ಸಚಿವ ಬೈರತಿ ಬಸವರಾಜ್​ ಅಡಕತ್ತರಿಗೆ ಸಿಲುಕಿದ್ದು, ಬಂಧನ ಭೀತಿಯಲ್ಲಿದ್ದಾರೆ.

ರೌಡಿಶೀಟರ್​ ಶಿವಪ್ರಕಾಶ್​ ಪ್ರಕರಣದಲ್ಲಿ ದಾಖಲಾಗಿರುವ ಎಫ್​ಐಆರ್​ ಮತ್ತು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್​ ರದ್ದು ಕೋರಿ ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್​, ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್​ ಅವರಿದ್ದ ಪೀಠ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದೆ. ಅಲ್ಲದೆ ಕಾನೂನು ಪ್ರಕಾರ ತನಿಖೆ ನಡೆಸುವಂತೆ ಹೈಕೋರ್ಟ್​ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ‌. ಅರ್ಜಿದಾರರಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್​ 35(3)ರ ಅಡಿಯಲ್ಲಿ ನೋಟಿಸ್​ ಜಾರಿ ಮಾಡಲಾಗಿದೆ. ಅದರಂತೆ ವಿಚಾರಣೆ ನಡೆಸಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೂ ಇಂದು ಬೆಳಗ್ಗೆ 11.30ಕ್ಕೆ ಪೊಲೀಸರ ವಿಚಾರಣೆಗೆ ಹಾಜರಾಗಲು ನಿರ್ದೇಶನವನ್ನು ನೀಡಿದೆ. ಹೀಗಾಗಿ ತನಿಖಾಧಿಕಾರಿ ಕೆಜಿಹಳ್ಳಿ ಎಸಿಪಿ ಪ್ರಕಾಶ್ ರಾಥೋಡ್ ಮುಂದೆ ಹಾಜರಾಗುವ ಅನಿವಾರ್ಯತೆ ಎದುರಾಗಿದೆ.

publive-image

ಹೈಕೋರ್ಟ್‌ನಿಂದ ಆದೇಶ ಹೊರಬೀಳ್ತಿದ್ದಂತೆ ಹಿರಿಯ ಪೊಲೀಸ್​ ಅಧಿಕಾರಿಗಳು ಫುಲ್​ ಅಲರ್ಟ್​ ಆಗಿದ್ದಾರೆ. ಪುಲಕೇಶಿನಗರ ಠಾಣೆಗೆ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ದೇವರಾಜ್, ಎಸಿಪಿ ಗೀತಾ ಠಾಣೆಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ರಾತ್ರೋ ರಾತ್ರಿ ತನಿಖಾ ತಂಡದ ಜೊತೆ ಹಿರಿಯ ಅಧಿಕಾರಿಗಳು ದಿಢೀರ್ ಸಭೆ ಕೂಡ ನಡೆಸಿದ್ದಾರೆ. ಈ ವೇಳೆ ಶಾಸಕ ಬೈರತಿ ಬಸವರಾಜ್ ವಿಚಾರಣೆಗೆ ಸಂಬಂಧ ಕೆಲವೊಂದು ಅಗತ್ಯ ಸಲಹೆ ಸೂಚನೆಗಳನ್ನು ತನಿಖಾಧಿಕಾರಿಗಳಿಗೆ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೊಲೆಯಾದ ಶಿವಪ್ರಕಾಶ್ ಮತ್ತು ಬೈರತಿ ಬಸವರಾಜ್​ ನಡುವಿನ ಸಂಬಂಧದ ಬಗ್ಗೆ ಪ್ರಶ್ನಿಸುವ ಸಾಧ್ಯತೆ ಇದೆ. ಸದ್ಯ ಪ್ರಕರಣದಲ್ಲಿ ದೊರೆತಿರುವ ಸಾಕ್ಷ್ಯಗಳನ್ನ ಮುಂದಿಟ್ಟು ಮಾಜಿ ಸಚಿವ ಬೈರತಿ ಬಸವರಾಜ್​ ಅವರ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಒಟ್ಟಾರೆಯಾಗಿ ಹೈಕೋರ್ಟ್​ ನಿರ್ದೇಶನದಿಂದ ಶಾಸಕ ಬೈರತಿ ಬಸವರಾಜ್​ ಅಡಕತ್ತರಿಗೆ ಸಿಲುಕಿತ್ತು. ಇಂದು ಬೆಳಗ್ಗೆ 11.30ಕ್ಕೆ ವಿಚಾರಣೆಗೆ ಹಾಜರಾಗಬೇಕಾದ ಅನಿರ್ವಾಯತೆ ಎದುರಾಗಿದೆ. ಒಂದ್ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಮೂರನೇ ನೋಟಿಸ್ ನಂತರ ಪೊಲೀಸರು ಬಂಧನ ಮಾಡುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment