ಕರ್ನಾಟಕ ಬೈ ಎಲೆಕ್ಷನ್​​​; ಚನ್ನಪಟ್ಟಣ ಟಿಕೆಟ್​​ ಸಸ್ಪೆನ್ಸ್​​​; ಎರಡು ಕ್ಷೇತ್ರಗಳಿಗೆ BJP ಅಭ್ಯರ್ಥಿಗಳ​ ಘೋಷಣೆ

author-image
Ganesh Nachikethu
Updated On
ಕರ್ನಾಟಕ ಬೈ ಎಲೆಕ್ಷನ್​​​; ಚನ್ನಪಟ್ಟಣ ಟಿಕೆಟ್​​ ಸಸ್ಪೆನ್ಸ್​​​; ಎರಡು ಕ್ಷೇತ್ರಗಳಿಗೆ BJP ಅಭ್ಯರ್ಥಿಗಳ​ ಘೋಷಣೆ
Advertisment
  • ಕರ್ನಾಟಕ ರಾಜ್ಯ ವಿಧಾನಸಭಾ ಉಪಚುನಾವಣೆ!
  • ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ
  • ಚನ್ನಪಟ್ಟಣ ಕ್ಷೇತ್ರ ಬಾಕಿ ಉಳಿಸಿಕೊಂಡಿದ್ದೇಕೆ ಬಿಜೆಪಿ?

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಈಗ ಜಟಿಲಗೊಂಡಿದೆ. ಕಾಂಗ್ರೆಸ್​​, ಬಿಜೆಪಿ ಮತ್ತು ಜೆಡಿಎಸ್​​ ಯಾರಿಗೆ ಟಿಕೆಟ್​ ನೀಡಬೇಕು ಎಂದು ಯೋಚನೆಯಲ್ಲಿ ತೊಡಗಿವೆ. ಆಕಾಂಕ್ಷಿಗಳ ಒತ್ತಡದಿಂದ ಇಂಥ ಸನ್ನಿವೇಶವೊಂದು ನಿರ್ಮಾಣವಾಗಿದೆ. ಇದರ ಮಧ್ಯೆಯೂ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಮಾಡಿದೆ.

ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ. ಶಿಗ್ಗಾವಿಯಿಂದ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಪುತ್ರ ಭರತ್​​ ಅವರು ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸಂಡೂರಿನಿಂದ ಜನಾರ್ದನ್​ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್​​ ನೀಡಲಾಗಿದೆ.

ಚನ್ನಪಟ್ಟಣ ಬಾಕಿ ಉಳಿಸಿಕೊಂಡಿದ್ದೇಕೆ ಬಿಜೆಪಿ?

ಇನ್ನು, ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಹೋದರ ಡಿ.ಕೆ. ಸುರೇಶ್‌ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಅತ್ತ ಎನ್‌ಡಿಎ ಮೈತ್ರಿಕೂಟದಿಂದ ಜೆಡಿಎಸ್​​ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಟಿಕೆಟ್‌ಗೆ ಸಿ.ಪಿ ಯೋಗೇಶ್ವರ್‌ ಪ್ರಯತ್ನಿಸಿದ್ರೂ ಈ ಕ್ಷೇತ್ರದಲ್ಲಿ ಜೆಡಿಎಸ್‌ಗೇ ಅವಕಾಶ ಹೆಚ್ಚು ಎನ್ನುವ ಸುದ್ದಿ ಹೊರಬಿದ್ದಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment