ಉತ್ತರ ಪ್ರದೇಶದ ಚಂದೌಲಿ ತಲುಪಿರುವ ಭಾರತ್ ಜೋಡೋ ಯಾತ್ರೆ
ರಾಹುಲ್ ಗಾಂಧಿ-ಪ್ರಿಯಾಂಕ ಗಾಂಧಿ ಮಧ್ಯೆ ಎಲ್ಲವೂ ಸರಿಯಾಗಿಲ್ವಾ?
ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ
ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರ ಪ್ರದೇಶ ತಲುಪಿದೆ. ಆದರೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಪ್ರಿಯಾಂಕ ಗಾಂಧಿಯವರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ಯುಪಿ ಬಿಜೆಪಿ, ಇದು ಸಹೋದರ, ಸಹೋದರಿ ನಡುವಿನ ವೈಮನಸು ಸೂಚಿಸುತ್ತದೆ ಎಂದು ಆರೋಪಿಸಿದೆ.
‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಉತ್ತರ ಪ್ರದೇಶದ ಚಂದೌಲಿಗೆ ತಲುಪಿದ್ದು ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಯುಪಿ ಕಾಂಗ್ರೆಸ್ ನಾಯಕರು ಮಾಡಿದ್ದಾರೆ. ಆದರೆ ಈ ಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೇಳಿದ್ದು ಅನಾರೋಗ್ಯದ ಕಾರಣ ನಾನು ಆಸ್ಪತ್ರೆಗೆ ದಾಖಲು ಆಗಿದ್ದೇನೆ. ಶೀಘ್ರದಲ್ಲೇ ಅನಾರೋಗ್ಯದಿಂದ ಚೇರಿಸಿಕೊಂಡು ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಯಾತ್ರೆಗಾಗಿ ಎಲ್ಲ ಕಾರ್ಯಗಳನ್ನು ವ್ಯವಸ್ಥಿತವಾಗಿ ಮಾಡಿರುವ ಯುಪಿಯ ಕಾಂಗ್ರೆಸ್ ಮುಖಂಡರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
I was really looking forward to receiving the BJNY in UP today but unfortunately, have ended up admitted to hospital. I will be there as soon as I am better! Meanwhile wishing all the yatris, my colleagues in UP who have worked hard towards making arrangements for the yatra and…
— Priyanka Gandhi Vadra (@priyankagandhi) February 16, 2024
ಯಾವಾಗ ಯಾತ್ರೆ ಯುಪಿಯನ್ನು ತಲುಪಿತೋ ಅವಾಗಲೇ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಕಾಂಗ್ರೆಸ್ ನಾಯಕರ ಮಧ್ಯದ ಭಿನ್ನಾಭಿಪ್ರಾಯ, ಬಿರುಕು ಮೂಡಿದೆ ಎಂಬುದು ಹೇಳುತ್ತದೆ. ಸಹೋದರ-ಸಹೋದರಿ ಮಧ್ಯೆ ಕಿತ್ತಾಟವಿದೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವು ಸರಿಯಾಗಿಲ್ಲ ಎಂದು ಯುಪಿಯ ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಉತ್ತರ ಪ್ರದೇಶದ ಚಂದೌಲಿ ತಲುಪಿರುವ ಭಾರತ್ ಜೋಡೋ ಯಾತ್ರೆ
ರಾಹುಲ್ ಗಾಂಧಿ-ಪ್ರಿಯಾಂಕ ಗಾಂಧಿ ಮಧ್ಯೆ ಎಲ್ಲವೂ ಸರಿಯಾಗಿಲ್ವಾ?
ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ
ಲಖನೌ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಉತ್ತರ ಪ್ರದೇಶ ತಲುಪಿದೆ. ಆದರೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಪ್ರಿಯಾಂಕ ಗಾಂಧಿಯವರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ಯುಪಿ ಬಿಜೆಪಿ, ಇದು ಸಹೋದರ, ಸಹೋದರಿ ನಡುವಿನ ವೈಮನಸು ಸೂಚಿಸುತ್ತದೆ ಎಂದು ಆರೋಪಿಸಿದೆ.
‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಉತ್ತರ ಪ್ರದೇಶದ ಚಂದೌಲಿಗೆ ತಲುಪಿದ್ದು ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಯುಪಿ ಕಾಂಗ್ರೆಸ್ ನಾಯಕರು ಮಾಡಿದ್ದಾರೆ. ಆದರೆ ಈ ಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೇಳಿದ್ದು ಅನಾರೋಗ್ಯದ ಕಾರಣ ನಾನು ಆಸ್ಪತ್ರೆಗೆ ದಾಖಲು ಆಗಿದ್ದೇನೆ. ಶೀಘ್ರದಲ್ಲೇ ಅನಾರೋಗ್ಯದಿಂದ ಚೇರಿಸಿಕೊಂಡು ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಯಾತ್ರೆಗಾಗಿ ಎಲ್ಲ ಕಾರ್ಯಗಳನ್ನು ವ್ಯವಸ್ಥಿತವಾಗಿ ಮಾಡಿರುವ ಯುಪಿಯ ಕಾಂಗ್ರೆಸ್ ಮುಖಂಡರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
I was really looking forward to receiving the BJNY in UP today but unfortunately, have ended up admitted to hospital. I will be there as soon as I am better! Meanwhile wishing all the yatris, my colleagues in UP who have worked hard towards making arrangements for the yatra and…
— Priyanka Gandhi Vadra (@priyankagandhi) February 16, 2024
ಯಾವಾಗ ಯಾತ್ರೆ ಯುಪಿಯನ್ನು ತಲುಪಿತೋ ಅವಾಗಲೇ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಕಾಂಗ್ರೆಸ್ ನಾಯಕರ ಮಧ್ಯದ ಭಿನ್ನಾಭಿಪ್ರಾಯ, ಬಿರುಕು ಮೂಡಿದೆ ಎಂಬುದು ಹೇಳುತ್ತದೆ. ಸಹೋದರ-ಸಹೋದರಿ ಮಧ್ಯೆ ಕಿತ್ತಾಟವಿದೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವು ಸರಿಯಾಗಿಲ್ಲ ಎಂದು ಯುಪಿಯ ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ