/newsfirstlive-kannada/media/post_attachments/wp-content/uploads/2025/03/tejasvi-surya-sivasri-skandaprasad-4.jpg)
ಚಿಕ್ಕಮಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಂಪತಿ ಹೊರನಾಡಿಗೆ ಭೇಟಿ ನೀಡಿ ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ತೇಜಸ್ವಿ ಸೂರ್ಯ ದಂಪತಿಗೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು.
ಇದನ್ನೂ ಓದಿ: ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ; ಟಾಪ್ ಫೋಟೋಸ್ ಇಲ್ಲಿವೆ!
ಹೊರನಾಡು ಧರ್ಮಕರ್ತ ಭೀಮೇಶ್ವರ ಜೋಶಿ ಅವರು ತೇಜಸ್ವಿ ಸೂರ್ಯ ದಂಪತಿಗೆ ಆಶೀರ್ವಾದ ನೀಡಿದರು.
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಸಂಸದ ತೇಜಸ್ವಿ ಸೂರ್ಯ ಕುಟುಂಬ ಸಮೇತ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಳೆದ ಮಾರ್ಚ್ 6ರಂದು ಬೆಂಗಳೂರು ಹೆಸರಘಟ್ಟ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ತೇಜಸ್ವಿ ಸೂರ್ಯ ಹಾಗೂ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ