newsfirstkannada.com

ನಗರತ್ ಪೇಟೆ ಗಲ್ಲಿ, ಗಲ್ಲಿಯಲ್ಲೂ ಕೇಸರಿ ಘರ್ಜನೆ.. ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಖಾಕಿ ವಶ

Share :

Published March 19, 2024 at 2:54pm

    ನಗರತ್ ಪೇಟೆಯ ಗಲ್ಲಿ, ಗಲ್ಲಿಯಲ್ಲೂ ಕೇಸರಿ ಪಡೆ ಮೆರವಣಿಗೆ

    ಬಿಜೆಪಿ ಮೆರವಣಿಗೆಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಭಾಗಿ

    ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿ 40ಕ್ಕೂ ಹೆಚ್ಚು ಜನ ಪೊಲೀಸ್ ವಶ

ಬೆಂಗಳೂರು: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಖಂಡಿಸಿ ನಗರತ್ ಪೇಟೆಯ ಗಲ್ಲಿ, ಗಲ್ಲಿಯಲ್ಲೂ ಕೇಸರಿ ಪಡೆ ಘರ್ಜಿಸಿದೆ. ಯುವಕನ ಮೇಲೆ ನಡೆದ ಹಲ್ಲೆ ಖಂಡಿಸಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಶಾಂತಿ ಮೆರವಣಿಗೆ ಹಮ್ಮಿಕೊಂಡಿದ್ದರು. ಮೆರವಣಿಗೆಯಲ್ಲಿ ಕೇಸರಿ ಬಾವುಟ, ಭಗವದ್ವಾಜ ನಗರತ್ ಪೇಟೆಯಲ್ಲಿ ರಾರಾಜಿಸಿದೆ.

 

ಬಿಜೆಪಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ನೂರಾರು ಹಿಂದೂ ಕಾರ್ಯಕರ್ತರು ಆಗಮಿಸಿದ್ದರು. ಮೆರವಣಿಗೆಯಲ್ಲಿ ಭಾಗಿಯಾದ ಬಿಜೆಪಿ ನಾಯಕರನ್ನು ಪೊಲೀಸರು ತಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿ‌ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಗಲ್ಲಿ ಗಲ್ಲಿಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಜಮಾಯಿಸಿದ್ದ ಹಿನ್ನೆಲೆಯಲ್ಲಿ ‌ಜನರನ್ನು ಚದುರಿಸಲು‌ ಪೊಲೀಸರ ಹರಸಾಹಸ ಪಟ್ಟರು. ಮೆರವಣಿಗೆ ನಿಲ್ಲಿಸುವಂತೆ ಪೊಲೀಸರು ಕರೆ ಕೊಟ್ಟರು ಕ್ಯಾರೇ ಎನ್ನದ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ನಗರತ್‌ ಪೇಟೆ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ, ಸಪ್ತಗಿರಿ ಗೌಡ, ತೇಜಸ್ವಿ ಸೂರ್ಯ ಸೇರಿದಂತೆ ನಲವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯುವಾಗ ಪೊಲೀಸ್ ಜೀಪ್ ಅಡ್ಡ ನಿಂತು ಘೋಷಣೆ ಕೂಗಿದರು. ಕೆಲ ಕಾಲ ಸ್ಥಳದಲ್ಲಿ ಹೈಡ್ರಾಮಾವೇ ನಡೆದಿದ್ದು ಹಿಂದೂ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಗರತ್ ಪೇಟೆ ಗಲ್ಲಿ, ಗಲ್ಲಿಯಲ್ಲೂ ಕೇಸರಿ ಘರ್ಜನೆ.. ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಖಾಕಿ ವಶ

https://newsfirstlive.com/wp-content/uploads/2024/03/Bangalore-Nagarpete.jpg

    ನಗರತ್ ಪೇಟೆಯ ಗಲ್ಲಿ, ಗಲ್ಲಿಯಲ್ಲೂ ಕೇಸರಿ ಪಡೆ ಮೆರವಣಿಗೆ

    ಬಿಜೆಪಿ ಮೆರವಣಿಗೆಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಭಾಗಿ

    ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿ 40ಕ್ಕೂ ಹೆಚ್ಚು ಜನ ಪೊಲೀಸ್ ವಶ

ಬೆಂಗಳೂರು: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಖಂಡಿಸಿ ನಗರತ್ ಪೇಟೆಯ ಗಲ್ಲಿ, ಗಲ್ಲಿಯಲ್ಲೂ ಕೇಸರಿ ಪಡೆ ಘರ್ಜಿಸಿದೆ. ಯುವಕನ ಮೇಲೆ ನಡೆದ ಹಲ್ಲೆ ಖಂಡಿಸಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಶಾಂತಿ ಮೆರವಣಿಗೆ ಹಮ್ಮಿಕೊಂಡಿದ್ದರು. ಮೆರವಣಿಗೆಯಲ್ಲಿ ಕೇಸರಿ ಬಾವುಟ, ಭಗವದ್ವಾಜ ನಗರತ್ ಪೇಟೆಯಲ್ಲಿ ರಾರಾಜಿಸಿದೆ.

 

ಬಿಜೆಪಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ನೂರಾರು ಹಿಂದೂ ಕಾರ್ಯಕರ್ತರು ಆಗಮಿಸಿದ್ದರು. ಮೆರವಣಿಗೆಯಲ್ಲಿ ಭಾಗಿಯಾದ ಬಿಜೆಪಿ ನಾಯಕರನ್ನು ಪೊಲೀಸರು ತಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿ‌ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ಗಲ್ಲಿ ಗಲ್ಲಿಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಜಮಾಯಿಸಿದ್ದ ಹಿನ್ನೆಲೆಯಲ್ಲಿ ‌ಜನರನ್ನು ಚದುರಿಸಲು‌ ಪೊಲೀಸರ ಹರಸಾಹಸ ಪಟ್ಟರು. ಮೆರವಣಿಗೆ ನಿಲ್ಲಿಸುವಂತೆ ಪೊಲೀಸರು ಕರೆ ಕೊಟ್ಟರು ಕ್ಯಾರೇ ಎನ್ನದ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ನಗರತ್‌ ಪೇಟೆ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ, ಸಪ್ತಗಿರಿ ಗೌಡ, ತೇಜಸ್ವಿ ಸೂರ್ಯ ಸೇರಿದಂತೆ ನಲವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯುವಾಗ ಪೊಲೀಸ್ ಜೀಪ್ ಅಡ್ಡ ನಿಂತು ಘೋಷಣೆ ಕೂಗಿದರು. ಕೆಲ ಕಾಲ ಸ್ಥಳದಲ್ಲಿ ಹೈಡ್ರಾಮಾವೇ ನಡೆದಿದ್ದು ಹಿಂದೂ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More