‘ಕಾಂಗ್ರೆಸ್ನಲ್ಲಿ ಆಂತರಿಕ ಜಗಳ ನಡೆಯುತ್ತಿದೆ’
‘ಡಿಕೆಶಿ ಇಲಾಖೆಯಲ್ಲೂ ಯತೀಂದ್ರ ಹಸ್ತಕ್ಷೇಪ’
ಬಿಜೆಪಿಯಿಂದ ಕಾಂಗ್ರೆಸ್ ಜಗಳದ ಬಗ್ಗೆ ಟ್ವೀಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪುತ್ರ ಯತೀಂದ್ರ ಸೂಪರ್ ಸಿಎಂ ಎಂದು ಈಗಾಗಲೇ ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಎಲ್ಲಾ ಇಲಾಖೆಗಳಲ್ಲೂ ಯತೀಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಈ ಮಧ್ಯೆ ಬಿಜೆಪಿ ಮಾಡಿದ ಟ್ವೀಟ್ವೊಂದು ಇದಕ್ಕೆ ಪುಷ್ಠಿ ನೀಡುವಂತೆ ಇದೆ.
ಈ ಸಂಬಂಧ ಟ್ವೀಟ್ ಮಾಡಿದ ಬಿಜೆಪಿ, ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ ರಾಜ್ಯದ ಎಟಿಎಂ ಸರ್ಕಾರದ ಒಳಗೆ ನಡೆಯುತ್ತಿದ್ದ ಆಂತರಿಕ ಸಮರಕ್ಕೆ ಮಹತ್ತರ ಸಾಕ್ಷಿ ಲಭಿಸಿದೆ. ಎಲ್ಲಾ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಶಾಡೋ ಸಿಎಂ ಯತೀಂದ್ರ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಬಿಟ್ಟಿಲ್ಲ. ಡಿ.ಕೆ ಶಿವಕುಮಾರ್ ಅವರ ಖಾತೆಗಳಲ್ಲೂ ಹಸ್ತಕ್ಷೇಪ ಮಾಡಿದ ಪರಿಣಾಮವೇ ಇದು ಎಂದು ಬರೆದುಕೊಂಡಿದ್ದಾರೆ.
ಯತೀಂದ್ರ ವಿರುದ್ಧ ಆರೋಪ
ಇತ್ತೀಚೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಧಾನಸಭಾ ಕಲಾಪದಲ್ಲಿ ಬಹಿರಂಗವಾಗಿ ಯತೀಂದ್ರ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕಾಗಿ ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್ ಎಂಬ ಕೋಡ್ ವರ್ಡ್ ಕೂಡ ಬಳಸಿದ್ದರು. ಈ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಆಂತರಿಕ ಜಗಳ ನಡೆದಿದೆ ಎನ್ನಲಾಗಿದೆ.
ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ, ರಾಜ್ಯದ #ATMSarkara ದೊಳಗೆ ನಡೆಯುತ್ತಿದ್ದ ಆಂತರಿಕ ಸಮರಕ್ಕೆ ಮಹತ್ತರ ಸಾಕ್ಷಿ ಲಭಿಸಿದೆ.
ಎಲ್ಲಾ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ #ShadowCM ಯತೀಂದ್ರ, ಡಿಸಿಎಂ @DKShivakumar ರವರ ಖಾತೆಗಳಲ್ಲಿಯೂ ಹಸ್ತಕ್ಷೇಪ ಮಾಡಿದ ಪರಿಣಾಮವೇ ಇದು ಇರಬಹುದು! pic.twitter.com/ROvOdvBrmb
— BJP Karnataka (@BJP4Karnataka) July 13, 2023
ನನ್ನ ಗಮನಕ್ಕೆ ಬಾರದೆ ಇಲಾಖೆಯಲ್ಲಿ ವರ್ಗಾವಣೆ ನಡೆಯುತ್ತಿದೆ. ಯಾವುದೇ ಅಧಿಕಾರಿ, ಸಿಬ್ಬಂದಿ ನೇಮಕ ಮಾಡುವಾಗ ನನ್ನ ಗಮನಕ್ಕೆ ತರಲೇಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
‘ಕಾಂಗ್ರೆಸ್ನಲ್ಲಿ ಆಂತರಿಕ ಜಗಳ ನಡೆಯುತ್ತಿದೆ’
‘ಡಿಕೆಶಿ ಇಲಾಖೆಯಲ್ಲೂ ಯತೀಂದ್ರ ಹಸ್ತಕ್ಷೇಪ’
ಬಿಜೆಪಿಯಿಂದ ಕಾಂಗ್ರೆಸ್ ಜಗಳದ ಬಗ್ಗೆ ಟ್ವೀಟ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪುತ್ರ ಯತೀಂದ್ರ ಸೂಪರ್ ಸಿಎಂ ಎಂದು ಈಗಾಗಲೇ ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಎಲ್ಲಾ ಇಲಾಖೆಗಳಲ್ಲೂ ಯತೀಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿವೆ. ಈ ಮಧ್ಯೆ ಬಿಜೆಪಿ ಮಾಡಿದ ಟ್ವೀಟ್ವೊಂದು ಇದಕ್ಕೆ ಪುಷ್ಠಿ ನೀಡುವಂತೆ ಇದೆ.
ಈ ಸಂಬಂಧ ಟ್ವೀಟ್ ಮಾಡಿದ ಬಿಜೆಪಿ, ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ ರಾಜ್ಯದ ಎಟಿಎಂ ಸರ್ಕಾರದ ಒಳಗೆ ನಡೆಯುತ್ತಿದ್ದ ಆಂತರಿಕ ಸಮರಕ್ಕೆ ಮಹತ್ತರ ಸಾಕ್ಷಿ ಲಭಿಸಿದೆ. ಎಲ್ಲಾ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಶಾಡೋ ಸಿಎಂ ಯತೀಂದ್ರ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಬಿಟ್ಟಿಲ್ಲ. ಡಿ.ಕೆ ಶಿವಕುಮಾರ್ ಅವರ ಖಾತೆಗಳಲ್ಲೂ ಹಸ್ತಕ್ಷೇಪ ಮಾಡಿದ ಪರಿಣಾಮವೇ ಇದು ಎಂದು ಬರೆದುಕೊಂಡಿದ್ದಾರೆ.
ಯತೀಂದ್ರ ವಿರುದ್ಧ ಆರೋಪ
ಇತ್ತೀಚೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಧಾನಸಭಾ ಕಲಾಪದಲ್ಲಿ ಬಹಿರಂಗವಾಗಿ ಯತೀಂದ್ರ ವರ್ಗಾವಣೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕಾಗಿ ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್ ಎಂಬ ಕೋಡ್ ವರ್ಡ್ ಕೂಡ ಬಳಸಿದ್ದರು. ಈ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಆಂತರಿಕ ಜಗಳ ನಡೆದಿದೆ ಎನ್ನಲಾಗಿದೆ.
ವರ್ಗಾವಣೆ ದಂಧೆಗೆ ಸಂಬಂಧಿಸಿದಂತೆ, ರಾಜ್ಯದ #ATMSarkara ದೊಳಗೆ ನಡೆಯುತ್ತಿದ್ದ ಆಂತರಿಕ ಸಮರಕ್ಕೆ ಮಹತ್ತರ ಸಾಕ್ಷಿ ಲಭಿಸಿದೆ.
ಎಲ್ಲಾ ಸಚಿವರ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ #ShadowCM ಯತೀಂದ್ರ, ಡಿಸಿಎಂ @DKShivakumar ರವರ ಖಾತೆಗಳಲ್ಲಿಯೂ ಹಸ್ತಕ್ಷೇಪ ಮಾಡಿದ ಪರಿಣಾಮವೇ ಇದು ಇರಬಹುದು! pic.twitter.com/ROvOdvBrmb
— BJP Karnataka (@BJP4Karnataka) July 13, 2023
ನನ್ನ ಗಮನಕ್ಕೆ ಬಾರದೆ ಇಲಾಖೆಯಲ್ಲಿ ವರ್ಗಾವಣೆ ನಡೆಯುತ್ತಿದೆ. ಯಾವುದೇ ಅಧಿಕಾರಿ, ಸಿಬ್ಬಂದಿ ನೇಮಕ ಮಾಡುವಾಗ ನನ್ನ ಗಮನಕ್ಕೆ ತರಲೇಬೇಕು ಎಂದು ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ