ಮೋದಿ 3ನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸ್ತೇನೆ
AAP ನಾಯಕನ ಪ್ರತಿಜ್ಞೆಯನ್ನು ಅಣಕಿಸಿದ ಬಿಜೆಪಿ ಕಾರ್ಯಕರ್ತರು
ರಾಜೀನಾಮೆ ಕೊಡ್ತೇನೆ ಎಂದಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್
ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಮತ್ತೆ ಗದ್ದುಗೆ ಏರಿದೆ. ದೆಹಲಿಯಲ್ಲಿ ಎಲ್ಲಾ 7 ಲೋಕಸಭಾ ಕ್ಷೇತಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆದರೆ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ವ್ಯಕ್ತಿಯೊಬ್ಬನ ತಲೆ ಬೋಳಿಸಿದ್ದಾರೆ. ಆ ಮೂಲಕ ಆಮ್ ಆದ್ಮಿ ಪಕ್ಷದ ನಾಯಕ ಸೋಮನಾಥ್ ಭಾರ್ತಿ ನೀಡಿದ ಹೇಳಿಕೆಯನ್ನು ಅಣಕಿಸಿದ್ದಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ದೃಶ್ಯ ವೈರಲ್ ಆಗಿದೆ. ನವದೆಹಲಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದಂತೆ ಕಾರ್ಯಕರ್ತರು ವ್ಯಕ್ತಿಯ ತಲೆ ಬೋಳಿಸುವ ಮೂಲಕ ಸೋಮನಾಥ್ ಭಾರ್ತಿ ಹೇಳಿದ ಪ್ರತಿಜ್ಞೆಯನ್ನು ಅಣಕಿಸಿದ್ದಾರೆ.
ಇದನ್ನೂ ಓದಿ: VIDEO: ತಲೆಕೆಳಗಾದ ಚುನಾವಣಾ ಫಲಿತಾಂಶದ ಅಂಕಿ ಅಂಶ.. ಲೈವ್ನಲ್ಲೇ ಗಳಗಳನೆ ಅತ್ತ ಪ್ರದೀಪ್ ಗುಪ್ತಾ
ತಲೆ ಬೋಳಿಸ್ತೇನೆ ಎಂದಿದ್ದ ಸೋಮನಾಥ್ ಭಾರ್ತಿ
ಜೂನ್ 1ರಂದು ಆಮ್ ಆದ್ಮಿ ಪಕ್ಷದ ನಾಯಕ ಸೋಮನಾಥ್ ಭಾರ್ತಿಯವರು, ನರೇಂದ್ರ ಮೋದಿ ಅವರು ಪ್ರಧಾನಿ ಸ್ಥಾನವನ್ನು ಉಳಿಸಿಕೊಂಡರೆ ತಲೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದರು. “ಮೋದಿ 3ನೇ ಬಾರಿಗೆ ಪ್ರಧಾನಿಯಾದರೆ ನಾನು ನನ್ನ ತಲೆ ಬೋಳಿಸಿಕೊಳ್ಳುತ್ತೇನೆ. ನನ್ನ ಮಾತನ್ನು ನೆನಪಿಟ್ಟುಕೊಳ್ಳಿ. ಎಲ್ಲಾ ಎಕ್ಸಿಟ್ ಪೋಲ್ಗಳು ಜೂನ್ 4 ರಂದು ತಪ್ಪಾಗುತ್ತವೆ ಮತ್ತು ಮೋದಿ ಜಿ 3ನೇ ಬಾರಿಗೆ ಪ್ರಧಾನಿಯಾಗುವುದಿಲ್ಲ” ಎಂದು ಹೇಳಿದ್ದರು.
ಇದನ್ನೂ ಓದಿ: ‘ನನ್ನ ಅಣ್ಣ ಗೆದ್ದು ಬಿಟ್ಟ’.. ಯೂಸುಫ್ ಪಠಾಣ್ ಗೆಲುವಿನ ಸಂತಸವನ್ನು ಕೊಂಡಾಡಿದ ಇರ್ಫಾನ್
ಆದರೆ ಇಂದು ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸೋಮನಾಥ್ ಭಾರ್ತಿ ನೀಡಿರುವ ಹೇಳಿಕೆಯನ್ನು ನೆನಪಿಸಿದ್ದಾರೆ. ನೀವು ತಲೆ ಬೋಳಿಸಬೇಕು ಎಂದು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ರಾಜೀನಾಮೆ ಕೊಡ್ತೇನೆ ಎಂದ ಪ್ರದೀಪ್ ಈಶ್ವರ್
ಚಿಕ್ಕಬಳ್ಲಾಪುರದ ಶಾಸಕ ಪ್ರದೀಪ್ ಈಶ್ವರ್ ಕೂಡ ಇದೇ ರೀತಿಯ ಪ್ರತಿಜ್ಞೆ ಮಾಡಿ ಸೋತಿದ್ದಾರೆ. ಬಿಜೆಪಿಯಲ್ಲಿ ಸ್ಪರ್ಧಿಸಿದ್ದ ಡಾ. ಸುಧಾಕರ್ಗೆ ಒಂದು ಮತ ಹೆಚ್ಚಿಗೆ ಬಂದರು ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು. ಆದರೆ ಡಾ. ಸುಧಾಕರ್ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ ನಾಯಕರುಗಳು ಪ್ರದೀಪ್ ಈಶ್ವರ್ ಹೇಳಿಕೆಯನ್ನು ನೆನಪಿಸಿದ್ದಾರೆ. ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೋದಿ 3ನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸ್ತೇನೆ
AAP ನಾಯಕನ ಪ್ರತಿಜ್ಞೆಯನ್ನು ಅಣಕಿಸಿದ ಬಿಜೆಪಿ ಕಾರ್ಯಕರ್ತರು
ರಾಜೀನಾಮೆ ಕೊಡ್ತೇನೆ ಎಂದಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್
ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಮತ್ತೆ ಗದ್ದುಗೆ ಏರಿದೆ. ದೆಹಲಿಯಲ್ಲಿ ಎಲ್ಲಾ 7 ಲೋಕಸಭಾ ಕ್ಷೇತಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆದರೆ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ವ್ಯಕ್ತಿಯೊಬ್ಬನ ತಲೆ ಬೋಳಿಸಿದ್ದಾರೆ. ಆ ಮೂಲಕ ಆಮ್ ಆದ್ಮಿ ಪಕ್ಷದ ನಾಯಕ ಸೋಮನಾಥ್ ಭಾರ್ತಿ ನೀಡಿದ ಹೇಳಿಕೆಯನ್ನು ಅಣಕಿಸಿದ್ದಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ದೃಶ್ಯ ವೈರಲ್ ಆಗಿದೆ. ನವದೆಹಲಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದಂತೆ ಕಾರ್ಯಕರ್ತರು ವ್ಯಕ್ತಿಯ ತಲೆ ಬೋಳಿಸುವ ಮೂಲಕ ಸೋಮನಾಥ್ ಭಾರ್ತಿ ಹೇಳಿದ ಪ್ರತಿಜ್ಞೆಯನ್ನು ಅಣಕಿಸಿದ್ದಾರೆ.
ಇದನ್ನೂ ಓದಿ: VIDEO: ತಲೆಕೆಳಗಾದ ಚುನಾವಣಾ ಫಲಿತಾಂಶದ ಅಂಕಿ ಅಂಶ.. ಲೈವ್ನಲ್ಲೇ ಗಳಗಳನೆ ಅತ್ತ ಪ್ರದೀಪ್ ಗುಪ್ತಾ
ತಲೆ ಬೋಳಿಸ್ತೇನೆ ಎಂದಿದ್ದ ಸೋಮನಾಥ್ ಭಾರ್ತಿ
ಜೂನ್ 1ರಂದು ಆಮ್ ಆದ್ಮಿ ಪಕ್ಷದ ನಾಯಕ ಸೋಮನಾಥ್ ಭಾರ್ತಿಯವರು, ನರೇಂದ್ರ ಮೋದಿ ಅವರು ಪ್ರಧಾನಿ ಸ್ಥಾನವನ್ನು ಉಳಿಸಿಕೊಂಡರೆ ತಲೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದರು. “ಮೋದಿ 3ನೇ ಬಾರಿಗೆ ಪ್ರಧಾನಿಯಾದರೆ ನಾನು ನನ್ನ ತಲೆ ಬೋಳಿಸಿಕೊಳ್ಳುತ್ತೇನೆ. ನನ್ನ ಮಾತನ್ನು ನೆನಪಿಟ್ಟುಕೊಳ್ಳಿ. ಎಲ್ಲಾ ಎಕ್ಸಿಟ್ ಪೋಲ್ಗಳು ಜೂನ್ 4 ರಂದು ತಪ್ಪಾಗುತ್ತವೆ ಮತ್ತು ಮೋದಿ ಜಿ 3ನೇ ಬಾರಿಗೆ ಪ್ರಧಾನಿಯಾಗುವುದಿಲ್ಲ” ಎಂದು ಹೇಳಿದ್ದರು.
ಇದನ್ನೂ ಓದಿ: ‘ನನ್ನ ಅಣ್ಣ ಗೆದ್ದು ಬಿಟ್ಟ’.. ಯೂಸುಫ್ ಪಠಾಣ್ ಗೆಲುವಿನ ಸಂತಸವನ್ನು ಕೊಂಡಾಡಿದ ಇರ್ಫಾನ್
ಆದರೆ ಇಂದು ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಸೋಮನಾಥ್ ಭಾರ್ತಿ ನೀಡಿರುವ ಹೇಳಿಕೆಯನ್ನು ನೆನಪಿಸಿದ್ದಾರೆ. ನೀವು ತಲೆ ಬೋಳಿಸಬೇಕು ಎಂದು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ರಾಜೀನಾಮೆ ಕೊಡ್ತೇನೆ ಎಂದ ಪ್ರದೀಪ್ ಈಶ್ವರ್
ಚಿಕ್ಕಬಳ್ಲಾಪುರದ ಶಾಸಕ ಪ್ರದೀಪ್ ಈಶ್ವರ್ ಕೂಡ ಇದೇ ರೀತಿಯ ಪ್ರತಿಜ್ಞೆ ಮಾಡಿ ಸೋತಿದ್ದಾರೆ. ಬಿಜೆಪಿಯಲ್ಲಿ ಸ್ಪರ್ಧಿಸಿದ್ದ ಡಾ. ಸುಧಾಕರ್ಗೆ ಒಂದು ಮತ ಹೆಚ್ಚಿಗೆ ಬಂದರು ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು. ಆದರೆ ಡಾ. ಸುಧಾಕರ್ ಜಯಭೇರಿ ಬಾರಿಸಿದ್ದಾರೆ. ಬಿಜೆಪಿ ನಾಯಕರುಗಳು ಪ್ರದೀಪ್ ಈಶ್ವರ್ ಹೇಳಿಕೆಯನ್ನು ನೆನಪಿಸಿದ್ದಾರೆ. ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ