ಕಾಂಗ್ರೆಸ್, ಬಿಜೆಪಿ ಮಧ್ಯೆ ತಾರಕಕ್ಕೇರಿದ ಅಕ್ಕಿ ಕ್ರೆಡಿಟ್ ಪಾಲಿಟಿಕ್ಸ್
'5 ಕೆಜಿ ಅಕ್ಕಿ ಮೋದಿ ಸರ್ಕಾರದ್ದು, ಲೇಬಲ್ ಸಿದ್ದರಾಮಯ್ಯದು'
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಬೆಂಗಳೂರು: ‘ಹಸಿವು ಮುಕ್ತ ಭಾರತ’ ಪ್ರಧಾನಿ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಪ್ರತಿಯೊಬ್ಬ ಭಾರತೀಯ ಹಸಿವಿನಿಂದ ಪರಿತಪಿಸಬಾರದು ಎಂಬ ಕಾರಣಕ್ಕೆ ‘ಗರೀಬ್ ಕಲ್ಯಾಣ್’ ಯೋಜನೆಯಡಿ ಪ್ರತಿ ತಿಂಗಳು, ಪಡಿತರದಾರರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ, ಆ 5 ಕೆಜಿ ಅಕ್ಕಿಗೆ ತಮ್ಮ ಲೇಬಲ್ ಅನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಅಂಟಿಸಿಕೊಂಡು ಮೂಲ ಕೊಡುಗೆದಾರರ ಹೆಸರನ್ನು ಮರೆಮಾಚಿದೆ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ ಕಾಲೆಳೆದಿದೆ.
'ಹಸಿವು ಮುಕ್ತ ಭಾರತ' ಪ್ರಧಾನಿ @narendramodi ಅವರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ.
ಪ್ರತಿಯೊಬ್ಬ ಭಾರತೀಯರು ಹಸಿವಿನಿಂದ ಪರಿತಪಿಸಬಾರದು ಎಂಬ ಕಾರಣಕ್ಕೆ 'ಗರೀಬ್ ಕಲ್ಯಾಣ್ ' ಯೋಜನೆಯಡಿ ಪ್ರತಿ ತಿಂಗಳು, ಪಡಿತರದಾರರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ.
ಆದರೆ, ಆ 5 ಕೆಜಿ ಅಕ್ಕಿಗೆ ತಮ್ಮ ಲೇಬಲ್ ಅನ್ನು @siddaramaiah… https://t.co/Z0FEXhhemA pic.twitter.com/lJmMWGDmOG
— BJP Karnataka (@BJP4Karnataka) July 10, 2023
ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ 10 ಕೆಜಿ ಅಕ್ಕಿಯ ಆಶ್ವಾಸನೆ ನೀಡಿದ್ದ ಕರ್ನಾಟಕ ಕಾಂಗ್ರೆಸ್ ಈಗ ನಾಡಿನ ಜನತೆಗೆ ನಂಬಿಕೆ ದ್ರೋಹ ಎಸಗಿದೆ. 5 ಕೆಜಿ ಅಕ್ಕಿಯ ಕನಿಷ್ಠ ದರವನ್ನು ನೀಡುತ್ತಿರುವುದನ್ನೇ ಮಹಾನ್ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದೆ. ಕಾಂಗ್ರೆಸ್ ನಿಜಕ್ಕೂ ನುಡಿದಂತೆ ನಡೆದಿದ್ದರೇ, 10 ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನು ಜನತೆಗೆ ನೀಡಬೇಕಾಗಿತ್ತು ಎಂದು ಕಿಡಿಕಾರಿದೆ.
ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನು ತನ್ನದು ಎಂದು ಹೇಳಿಕೊಂಡು, ಉಳಿದ 5 ಕೆಜಿ ಅಕ್ಕಿಯ ಕನಿಷ್ಠ ದರವನ್ನು ಜನತೆಗೆ ನೀಡುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ನಿಜಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಜನಪರ ಕಾಳಜಿ ಇದ್ದರೆ, ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನು ಹೊರತುಪಡಿಸಿ, ಉಳಿದ 10 ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನು ಫಲಾನುಭವಿಗಳಿಗೆ ವರ್ಗಾಯಿಸಬೇಕು. ಆದರೆ, ಇದೆಲ್ಲವನ್ನೂ ಬಿಟ್ಟು ಕೇವಲ ತೋರಿಕೆಗೆ, ಫಲಾನುಭವಿಗಳಿಗೆ ಹಣ ವರ್ಗಾಯಿಸುತ್ತೇವೆ ಎಂಬುದನ್ನು ನಾವು ಖಂಡಿಸುತ್ತೇವೆ ಎಂದು ಬಿಜೆಪಿ ಮತ್ತೊಂದು ಟ್ವೀಟ್ ಮಾಡಿದೆ.
ಕಾಂಗ್ರೆಸ್ ಟ್ವೀಟ್ನಲ್ಲಿ ಏನಿದೆ..?
ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ. ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಈಗ ಕಾಂಗ್ರೆಸ್ ಟ್ವೀಟ್ಗೆ ಬಿಜೆಪಿ ಕೌಂಟರ್ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾಂಗ್ರೆಸ್, ಬಿಜೆಪಿ ಮಧ್ಯೆ ತಾರಕಕ್ಕೇರಿದ ಅಕ್ಕಿ ಕ್ರೆಡಿಟ್ ಪಾಲಿಟಿಕ್ಸ್
'5 ಕೆಜಿ ಅಕ್ಕಿ ಮೋದಿ ಸರ್ಕಾರದ್ದು, ಲೇಬಲ್ ಸಿದ್ದರಾಮಯ್ಯದು'
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಬೆಂಗಳೂರು: ‘ಹಸಿವು ಮುಕ್ತ ಭಾರತ’ ಪ್ರಧಾನಿ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಪ್ರತಿಯೊಬ್ಬ ಭಾರತೀಯ ಹಸಿವಿನಿಂದ ಪರಿತಪಿಸಬಾರದು ಎಂಬ ಕಾರಣಕ್ಕೆ ‘ಗರೀಬ್ ಕಲ್ಯಾಣ್’ ಯೋಜನೆಯಡಿ ಪ್ರತಿ ತಿಂಗಳು, ಪಡಿತರದಾರರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ, ಆ 5 ಕೆಜಿ ಅಕ್ಕಿಗೆ ತಮ್ಮ ಲೇಬಲ್ ಅನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಅಂಟಿಸಿಕೊಂಡು ಮೂಲ ಕೊಡುಗೆದಾರರ ಹೆಸರನ್ನು ಮರೆಮಾಚಿದೆ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ ಕಾಲೆಳೆದಿದೆ.
'ಹಸಿವು ಮುಕ್ತ ಭಾರತ' ಪ್ರಧಾನಿ @narendramodi ಅವರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ.
ಪ್ರತಿಯೊಬ್ಬ ಭಾರತೀಯರು ಹಸಿವಿನಿಂದ ಪರಿತಪಿಸಬಾರದು ಎಂಬ ಕಾರಣಕ್ಕೆ 'ಗರೀಬ್ ಕಲ್ಯಾಣ್ ' ಯೋಜನೆಯಡಿ ಪ್ರತಿ ತಿಂಗಳು, ಪಡಿತರದಾರರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ.
ಆದರೆ, ಆ 5 ಕೆಜಿ ಅಕ್ಕಿಗೆ ತಮ್ಮ ಲೇಬಲ್ ಅನ್ನು @siddaramaiah… https://t.co/Z0FEXhhemA pic.twitter.com/lJmMWGDmOG
— BJP Karnataka (@BJP4Karnataka) July 10, 2023
ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ 10 ಕೆಜಿ ಅಕ್ಕಿಯ ಆಶ್ವಾಸನೆ ನೀಡಿದ್ದ ಕರ್ನಾಟಕ ಕಾಂಗ್ರೆಸ್ ಈಗ ನಾಡಿನ ಜನತೆಗೆ ನಂಬಿಕೆ ದ್ರೋಹ ಎಸಗಿದೆ. 5 ಕೆಜಿ ಅಕ್ಕಿಯ ಕನಿಷ್ಠ ದರವನ್ನು ನೀಡುತ್ತಿರುವುದನ್ನೇ ಮಹಾನ್ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದೆ. ಕಾಂಗ್ರೆಸ್ ನಿಜಕ್ಕೂ ನುಡಿದಂತೆ ನಡೆದಿದ್ದರೇ, 10 ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನು ಜನತೆಗೆ ನೀಡಬೇಕಾಗಿತ್ತು ಎಂದು ಕಿಡಿಕಾರಿದೆ.
ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನು ತನ್ನದು ಎಂದು ಹೇಳಿಕೊಂಡು, ಉಳಿದ 5 ಕೆಜಿ ಅಕ್ಕಿಯ ಕನಿಷ್ಠ ದರವನ್ನು ಜನತೆಗೆ ನೀಡುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆ. ನಿಜಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಜನಪರ ಕಾಳಜಿ ಇದ್ದರೆ, ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನು ಹೊರತುಪಡಿಸಿ, ಉಳಿದ 10 ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನು ಫಲಾನುಭವಿಗಳಿಗೆ ವರ್ಗಾಯಿಸಬೇಕು. ಆದರೆ, ಇದೆಲ್ಲವನ್ನೂ ಬಿಟ್ಟು ಕೇವಲ ತೋರಿಕೆಗೆ, ಫಲಾನುಭವಿಗಳಿಗೆ ಹಣ ವರ್ಗಾಯಿಸುತ್ತೇವೆ ಎಂಬುದನ್ನು ನಾವು ಖಂಡಿಸುತ್ತೇವೆ ಎಂದು ಬಿಜೆಪಿ ಮತ್ತೊಂದು ಟ್ವೀಟ್ ಮಾಡಿದೆ.
ಕಾಂಗ್ರೆಸ್ ಟ್ವೀಟ್ನಲ್ಲಿ ಏನಿದೆ..?
ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ. ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಈಗ ಕಾಂಗ್ರೆಸ್ ಟ್ವೀಟ್ಗೆ ಬಿಜೆಪಿ ಕೌಂಟರ್ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ