newsfirstkannada.com

‘ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ’- BY ವಿಜಯೇಂದ್ರ ಕೆಂಡಾಮಂಡಲ

Share :

Published May 2, 2024 at 11:44am

    ‘ಮೋದಿ ಸತ್ತರೇ ಈ ದೇಶದಲ್ಲಿ ಯಾರೂ ಪ್ರಧಾನಿ ಆಗುವುದೇ ಇಲ್ಲವೇ’

    ಕಾಂಗ್ರೆಸ್​​ನ ರಾಜು ಕಾಗೆ ನೀಡಿದ ಹೇಳಿಕೆಗೆ ಕಿಡಿಕಾರಿದ ಬಿ.ವೈ ವಿಜಯೇಂದ್ರ

    ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಕಾಂಗ್ರೆಸ್​ನವರ ಸಂಸ್ಕೃತಿ

ಬೆಂಗಳೂರು: ನರೇಂದ್ರ ಮೋದಿ ಸತ್ತರೇ ಈ ದೇಶದಲ್ಲಿ ಯಾರೂ ಪ್ರಧಾನಿ ಆಗುವುದೇ ಇಲ್ಲವೇ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಪ್ರಶ್ನಿಸಿದ್ದರು. ಈ ವಿವಾದಾತ್ಮಕ ಹೇಳಿಕೆ ಕೋಲಾಹಲ ಸೃಷ್ಟಿಸಿದ್ದು, ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪುಟಗಟ್ಟಲೇ ಮಾಹಿತಿಯನ್ನು ಹಂಚಿಕೊಂಡಿದ್ದು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಕಾಂಗ್ರೆಸ್​ನವರ ಹೀನ ಸಂಸ್ಕೃತಿಯ ದ್ಯೋತಕವಾಗಿದೆ. ಸಾವುಗಳನ್ನು ಆಧರಿಸಿ ಅಧಿಕಾರವನ್ನು ಗಳಿಸಿದ ಹಿನ್ನಲೆ ಕಾಂಗ್ರೆಸ್​​ನವರದ್ದು ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ವಿಜೃಂಭಣೆಯ ಬ್ರಹ್ಮೋತ್ಸವ.. ಇಸ್ಕಾನ್​ನ ಮೂಲ ವಿಗ್ರಹಗಳಿಗೆ ಮಹಾ ಕುಂಭಾಭಿಷೇಕ; ಇಂದು ಏನೇನು ನಡೆಯಲಿದೆ? 

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್​; ಇದು ದುರದೃಷ್ಟಕರ.. ಇನ್ನೇನು ಹೇಳಿದರು ನಟಿ ಶ್ರುತಿ?

ಬಿ.ವೈ ವಿಜಯೇಂದ್ರ ಅವರು ಪ್ರಧಾನಿ ಮೋದಿಯವರ ಸಾವನ್ನು ಕಾಂಗ್ರೆಸ್ ಏಕೆ ಭಯಸುತ್ತಿದೆ ಎಂದು ಎನ್​ಡಿಎ ಸರ್ಕಾರದಲ್ಲಿ ಆದ ಕೆಲವು ಅಭಿವೃದ್ಧಿಗಳನ್ನು ಕೆಲಸಗಳನ್ನು ಬರೆದುಕೊಂಡಿದ್ದಾರೆ. ಮೋದಿ ದೇಶಕ್ಕಾಗಿ ಪಾರದರ್ಶಕ ಆಡಳಿತ ನೀಡುತ್ತಿರುವುದಕ್ಕಾಗಿ ಕಾಂಗ್ರೆಸ್​ನವರು ಅವರ ಸಾವು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

  • ಆರ್ಟಿಕಲ್ 370 ರದ್ದುಗೊಳಿಸಿ, ಭಾರತದ ಕಿರೀಟ ಕಾಶ್ಮೀರವನ್ನು ಉಳಿಸಿದ್ದಕ್ಕಾಗಿಯೇ?
  • 5 ಶತಮಾನಗಳ ಭಾರತೀಯರ ಕನಸು ಈಡೇರಿಸಲು ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದ ಕಾರಣಕ್ಕಾಗಿಯೇ?
  • ದೇಶವನ್ನು ಮುಕ್ಕಿ ತಿನ್ನುತ್ತಿದ್ದ ಭಯೋತ್ಪಾದಕತೆಯನ್ನು ಬೇರು ಸಮೇತ ಕಿತ್ತೊಗೆದು ರಾಷ್ಟ್ರವನ್ನು ರಕ್ಷಿಸಿದ ಕಾರಣಕ್ಕಾಗಿಯೇ?
  • ವಿಶ್ವದಲ್ಲಿ ಭಾರತವನ್ನು ಆರ್ಥಿಕವಾಗಿ 5ನೇ ಸ್ಥಾನಕ್ಕೇರಿಸಿ ಶಕ್ತಿಶಾಲಿ ರಾಷ್ಟ್ರ ನಿರ್ಮಿಸಿದ ಕಾರಣಕ್ಕಾಗಿಯೇ?
  • ಅಭಿವೃದ್ಧಿಯ ಓಟದಲ್ಲಿ ಜಾಗತಿಕ ಪೈಪೋಟಿಯ ನಡುವೆ ಭಾರತ ಮುಂಚೂಣಿ ಸ್ಥಾನದಲ್ಲಿ ತಂದು ನಿಲ್ಲಿಸಿದ ಕಾರಣಕ್ಕಾಗಿಯೇ?
  • ದೇಶದ ಕಟ್ಟಕಡೆಯ ಪ್ರಜೆಯು ಸ್ವಾಭಿಮಾನದ ಬದುಕು ರೂಪಿಸಲು ಹತ್ತು ಹಲವು ಯೋಜನೆಗಳನ್ನು ಸಮರ್ಪಿಸಿದ ಕಾರಣಕ್ಕಾಗಿಯೇ?
  • ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡಿ ಕಪ್ಪು ಚುಕ್ಕೆ ಇಲ್ಲದ ಪರಿಶುಭ್ರ ಆಡಳಿತ ನೀಡಿ ಜನರಿಂದ ‘ಸೈ’ ಅನಿಸಿಕೊಂಡ ಕಾರಣಕ್ಕಾಗಿಯೇ?

ದೇಶವನ್ನ ಬಲಿಷ್ಠ ಗೊಳಿಸಿದ ಮಹಾನ್ ನೇತಾರ ಮೋದಿ

ಬಿಜೆಪಿ ವ್ಯಕ್ತಿ ಆಧಾರಿತ ಬೆಳೆದುದ್ದಲ್ಲ, ಸಿದ್ಧಾಂತ, ತತ್ವಗಳನ್ನು ಆಧರಿಸಿ ರಾಷ್ಟ್ರ ಭಕ್ತ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಬೆಳೆದು ನಿಂತಿರುವ ಬೃಹತ್ ರಾಜಕೀಯ ವೃಕ್ಷ. ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮುರುಳಿ ಮನೋಹರ್ ಜೋಶಿ ಅವರಂತ ಸಾಲು ಸಾಲು ನಾಯಕರನ್ನು ದೇಶಕ್ಕೆ ಸಮರ್ಪಣೆ ಮಾಡಿದ ಪಕ್ಷ, ಈ ನಿಟ್ಟಿನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಗಟ್ಟಿಯಾಗಿ ಪಡಿಮೂಡಿದ ಮೋದಿ ಜೀ, ಸಮರ್ಥ ಆಡಳಿತಗಾರನಾಗಿ ದೇಶವನ್ನು ಬಲಿಷ್ಠ ಗೊಳಿಸಿದ ಮಹಾನ್ ನೇತಾರ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್ ನಿವಾಸದ ಮೇಲೆ ಫೈರಿಂಗ್ ಮಾಡಿದ್ದ ಓರ್ವ ವ್ಯಕ್ತಿ ಜೈಲಲ್ಲಿ ಆತ್ಮಹತ್ಯೆ.. ಏನಾಯಿತು ಗೊತ್ತಾ? 

ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್​​ಗೆ ಬಿಗ್ ಶಾಕ್​.. ಬೆಂಗಳೂರಿನ ಆಪ್ತನ ಮನೆ ಮೇಲೆ IT ದಾಳಿ​

ಇದಕ್ಕಾಗೇ ದೇಶದ ಜನ ಮತ್ತೊಮ್ಮೆ ಅವರ ನಾಯಕತ್ವವನ್ನು ಬಯಸಿ ಪ್ರಧಾನಿಯನ್ನಾಗಿಸಲು ಸಂಕಲ್ಪ ತೊಟ್ಟಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್ಸಿಗರ ಬಾಯಲ್ಲಿ ಹತಾಶೆ, ಅಪಶಕುನದ ಮಾತುಗಳಲ್ಲದೇ ಇನ್ನೇನು ಬರಲು ಸಾಧ್ಯ. ಕೊಳಕು ಮನಸ್ಸುಗಳು ಮಾತ್ರ ವಿಕೃತಿಯ ಮಾತನಾಡಲು ಸಾಧ್ಯ, ಅಂತದ್ದೇ ಸಾಲಿಗೆ ಸೇರಿರುವ ಶಾಸಕ ರಾಜು ಕಾಗೆ ಬಾಯಿಂದ ಮೋದಿಯವರ ಕುರಿತು ಕಾಂಗ್ರೆಸ್ಸಿಗರು ಅಪಶಕುನವನ್ನು ಉಗುಳಿಸಿದ್ದಾರೆ. ಇದಕ್ಕೆಲ್ಲ ಈ ಸಲದ ಚುನಾವಣೆಯ ಫಲಿತಾಂಶ ಉತ್ತರ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ’- BY ವಿಜಯೇಂದ್ರ ಕೆಂಡಾಮಂಡಲ

https://newsfirstlive.com/wp-content/uploads/2024/05/MODI_RAHUL.jpg

    ‘ಮೋದಿ ಸತ್ತರೇ ಈ ದೇಶದಲ್ಲಿ ಯಾರೂ ಪ್ರಧಾನಿ ಆಗುವುದೇ ಇಲ್ಲವೇ’

    ಕಾಂಗ್ರೆಸ್​​ನ ರಾಜು ಕಾಗೆ ನೀಡಿದ ಹೇಳಿಕೆಗೆ ಕಿಡಿಕಾರಿದ ಬಿ.ವೈ ವಿಜಯೇಂದ್ರ

    ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಕಾಂಗ್ರೆಸ್​ನವರ ಸಂಸ್ಕೃತಿ

ಬೆಂಗಳೂರು: ನರೇಂದ್ರ ಮೋದಿ ಸತ್ತರೇ ಈ ದೇಶದಲ್ಲಿ ಯಾರೂ ಪ್ರಧಾನಿ ಆಗುವುದೇ ಇಲ್ಲವೇ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಪ್ರಶ್ನಿಸಿದ್ದರು. ಈ ವಿವಾದಾತ್ಮಕ ಹೇಳಿಕೆ ಕೋಲಾಹಲ ಸೃಷ್ಟಿಸಿದ್ದು, ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪುಟಗಟ್ಟಲೇ ಮಾಹಿತಿಯನ್ನು ಹಂಚಿಕೊಂಡಿದ್ದು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಕಾಂಗ್ರೆಸ್​ನವರ ಹೀನ ಸಂಸ್ಕೃತಿಯ ದ್ಯೋತಕವಾಗಿದೆ. ಸಾವುಗಳನ್ನು ಆಧರಿಸಿ ಅಧಿಕಾರವನ್ನು ಗಳಿಸಿದ ಹಿನ್ನಲೆ ಕಾಂಗ್ರೆಸ್​​ನವರದ್ದು ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ವಿಜೃಂಭಣೆಯ ಬ್ರಹ್ಮೋತ್ಸವ.. ಇಸ್ಕಾನ್​ನ ಮೂಲ ವಿಗ್ರಹಗಳಿಗೆ ಮಹಾ ಕುಂಭಾಭಿಷೇಕ; ಇಂದು ಏನೇನು ನಡೆಯಲಿದೆ? 

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್​; ಇದು ದುರದೃಷ್ಟಕರ.. ಇನ್ನೇನು ಹೇಳಿದರು ನಟಿ ಶ್ರುತಿ?

ಬಿ.ವೈ ವಿಜಯೇಂದ್ರ ಅವರು ಪ್ರಧಾನಿ ಮೋದಿಯವರ ಸಾವನ್ನು ಕಾಂಗ್ರೆಸ್ ಏಕೆ ಭಯಸುತ್ತಿದೆ ಎಂದು ಎನ್​ಡಿಎ ಸರ್ಕಾರದಲ್ಲಿ ಆದ ಕೆಲವು ಅಭಿವೃದ್ಧಿಗಳನ್ನು ಕೆಲಸಗಳನ್ನು ಬರೆದುಕೊಂಡಿದ್ದಾರೆ. ಮೋದಿ ದೇಶಕ್ಕಾಗಿ ಪಾರದರ್ಶಕ ಆಡಳಿತ ನೀಡುತ್ತಿರುವುದಕ್ಕಾಗಿ ಕಾಂಗ್ರೆಸ್​ನವರು ಅವರ ಸಾವು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.

  • ಆರ್ಟಿಕಲ್ 370 ರದ್ದುಗೊಳಿಸಿ, ಭಾರತದ ಕಿರೀಟ ಕಾಶ್ಮೀರವನ್ನು ಉಳಿಸಿದ್ದಕ್ಕಾಗಿಯೇ?
  • 5 ಶತಮಾನಗಳ ಭಾರತೀಯರ ಕನಸು ಈಡೇರಿಸಲು ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದ ಕಾರಣಕ್ಕಾಗಿಯೇ?
  • ದೇಶವನ್ನು ಮುಕ್ಕಿ ತಿನ್ನುತ್ತಿದ್ದ ಭಯೋತ್ಪಾದಕತೆಯನ್ನು ಬೇರು ಸಮೇತ ಕಿತ್ತೊಗೆದು ರಾಷ್ಟ್ರವನ್ನು ರಕ್ಷಿಸಿದ ಕಾರಣಕ್ಕಾಗಿಯೇ?
  • ವಿಶ್ವದಲ್ಲಿ ಭಾರತವನ್ನು ಆರ್ಥಿಕವಾಗಿ 5ನೇ ಸ್ಥಾನಕ್ಕೇರಿಸಿ ಶಕ್ತಿಶಾಲಿ ರಾಷ್ಟ್ರ ನಿರ್ಮಿಸಿದ ಕಾರಣಕ್ಕಾಗಿಯೇ?
  • ಅಭಿವೃದ್ಧಿಯ ಓಟದಲ್ಲಿ ಜಾಗತಿಕ ಪೈಪೋಟಿಯ ನಡುವೆ ಭಾರತ ಮುಂಚೂಣಿ ಸ್ಥಾನದಲ್ಲಿ ತಂದು ನಿಲ್ಲಿಸಿದ ಕಾರಣಕ್ಕಾಗಿಯೇ?
  • ದೇಶದ ಕಟ್ಟಕಡೆಯ ಪ್ರಜೆಯು ಸ್ವಾಭಿಮಾನದ ಬದುಕು ರೂಪಿಸಲು ಹತ್ತು ಹಲವು ಯೋಜನೆಗಳನ್ನು ಸಮರ್ಪಿಸಿದ ಕಾರಣಕ್ಕಾಗಿಯೇ?
  • ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡಿ ಕಪ್ಪು ಚುಕ್ಕೆ ಇಲ್ಲದ ಪರಿಶುಭ್ರ ಆಡಳಿತ ನೀಡಿ ಜನರಿಂದ ‘ಸೈ’ ಅನಿಸಿಕೊಂಡ ಕಾರಣಕ್ಕಾಗಿಯೇ?

ದೇಶವನ್ನ ಬಲಿಷ್ಠ ಗೊಳಿಸಿದ ಮಹಾನ್ ನೇತಾರ ಮೋದಿ

ಬಿಜೆಪಿ ವ್ಯಕ್ತಿ ಆಧಾರಿತ ಬೆಳೆದುದ್ದಲ್ಲ, ಸಿದ್ಧಾಂತ, ತತ್ವಗಳನ್ನು ಆಧರಿಸಿ ರಾಷ್ಟ್ರ ಭಕ್ತ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಬೆಳೆದು ನಿಂತಿರುವ ಬೃಹತ್ ರಾಜಕೀಯ ವೃಕ್ಷ. ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮುರುಳಿ ಮನೋಹರ್ ಜೋಶಿ ಅವರಂತ ಸಾಲು ಸಾಲು ನಾಯಕರನ್ನು ದೇಶಕ್ಕೆ ಸಮರ್ಪಣೆ ಮಾಡಿದ ಪಕ್ಷ, ಈ ನಿಟ್ಟಿನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಗಟ್ಟಿಯಾಗಿ ಪಡಿಮೂಡಿದ ಮೋದಿ ಜೀ, ಸಮರ್ಥ ಆಡಳಿತಗಾರನಾಗಿ ದೇಶವನ್ನು ಬಲಿಷ್ಠ ಗೊಳಿಸಿದ ಮಹಾನ್ ನೇತಾರ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್ ನಿವಾಸದ ಮೇಲೆ ಫೈರಿಂಗ್ ಮಾಡಿದ್ದ ಓರ್ವ ವ್ಯಕ್ತಿ ಜೈಲಲ್ಲಿ ಆತ್ಮಹತ್ಯೆ.. ಏನಾಯಿತು ಗೊತ್ತಾ? 

ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್​​ಗೆ ಬಿಗ್ ಶಾಕ್​.. ಬೆಂಗಳೂರಿನ ಆಪ್ತನ ಮನೆ ಮೇಲೆ IT ದಾಳಿ​

ಇದಕ್ಕಾಗೇ ದೇಶದ ಜನ ಮತ್ತೊಮ್ಮೆ ಅವರ ನಾಯಕತ್ವವನ್ನು ಬಯಸಿ ಪ್ರಧಾನಿಯನ್ನಾಗಿಸಲು ಸಂಕಲ್ಪ ತೊಟ್ಟಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್ಸಿಗರ ಬಾಯಲ್ಲಿ ಹತಾಶೆ, ಅಪಶಕುನದ ಮಾತುಗಳಲ್ಲದೇ ಇನ್ನೇನು ಬರಲು ಸಾಧ್ಯ. ಕೊಳಕು ಮನಸ್ಸುಗಳು ಮಾತ್ರ ವಿಕೃತಿಯ ಮಾತನಾಡಲು ಸಾಧ್ಯ, ಅಂತದ್ದೇ ಸಾಲಿಗೆ ಸೇರಿರುವ ಶಾಸಕ ರಾಜು ಕಾಗೆ ಬಾಯಿಂದ ಮೋದಿಯವರ ಕುರಿತು ಕಾಂಗ್ರೆಸ್ಸಿಗರು ಅಪಶಕುನವನ್ನು ಉಗುಳಿಸಿದ್ದಾರೆ. ಇದಕ್ಕೆಲ್ಲ ಈ ಸಲದ ಚುನಾವಣೆಯ ಫಲಿತಾಂಶ ಉತ್ತರ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More