ವಿಧಾನಪರಿಷತ್ ಚುನಾವಣೆಗೆ ಮೂರು ಬಿಜೆಪಿ ಟಿಕೆಟ್ ಘೋಷಣೆ
ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ
ಪಕ್ಷದ ನಿಷ್ಠಾವಂತ ನಾಯಕರಿಗೆ ಮಣೆ ಹಾಕಿದ ಬಿಜೆಪಿ ಹೈಕಮಾಂಡ್
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿರುವಾಗ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಇದನ್ನೂ ಓದಿ: ವಿಧಾನಪರಿಷತ್ ಕದನಕ್ಕೆ ಕಲಿಗಳ ಆಯ್ಕೆಯೇ ದೊಡ್ಡ ಟೆನ್ಷನ್; ಟಿಕೆಟ್ ವಿಚಾರದಲ್ಲಿ ಸಿಎಂ ಎಚ್ಚರಿಕೆ.. ಏನದು?
ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ. ಎಂಎಲ್ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದರು ಅಂತಿಮವಾಗಿ ಬಿಜೆಪಿ ವರಿಷ್ಠರು ಮೂವರ ಹೆಸರು ಅಂತಿಮಗೊಳಿಸಿದ್ದಾರೆ.
ಮೂರು ಸ್ಥಾನಗಳಲ್ಲಿ ಒಕ್ಕಲಿಗ ಸಮುದಾಯದಿಂದ ಸಿ.ಟಿ ರವಿ, ಒಬಿಸಿ ವರ್ಗದಲ್ಲಿ ಎನ್. ರವಿಕುಮಾರ್ ಹಾಗೂ ಎಂ.ಜಿ ಮುಳೆ ಅವರಿಗೆ ಸ್ಥಾನ ನೀಡಲಾಗಿದೆ. ಎಂ.ಜಿ ಮೂಳೆ ಅವರು ಬಸವ ಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮತ್ತು ಮರಾಠಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಆಗಿದ್ದರು. ಮೂಳೆ ಅವರು ಈ ಮೊದಲು ಜೆಡಿಎಸ್ನಲ್ಲಿದ್ದು, ಕಳೆದ ಉಪಚುನಾವಣೆಯಲ್ಲಿ ಬಿಜೆಪಿ ಸೇರಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಿಧಾನಪರಿಷತ್ ಚುನಾವಣೆಗೆ ಮೂರು ಬಿಜೆಪಿ ಟಿಕೆಟ್ ಘೋಷಣೆ
ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ
ಪಕ್ಷದ ನಿಷ್ಠಾವಂತ ನಾಯಕರಿಗೆ ಮಣೆ ಹಾಕಿದ ಬಿಜೆಪಿ ಹೈಕಮಾಂಡ್
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿರುವಾಗ ಬಿಜೆಪಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಇದನ್ನೂ ಓದಿ: ವಿಧಾನಪರಿಷತ್ ಕದನಕ್ಕೆ ಕಲಿಗಳ ಆಯ್ಕೆಯೇ ದೊಡ್ಡ ಟೆನ್ಷನ್; ಟಿಕೆಟ್ ವಿಚಾರದಲ್ಲಿ ಸಿಎಂ ಎಚ್ಚರಿಕೆ.. ಏನದು?
ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ. ಎಂಎಲ್ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದರು ಅಂತಿಮವಾಗಿ ಬಿಜೆಪಿ ವರಿಷ್ಠರು ಮೂವರ ಹೆಸರು ಅಂತಿಮಗೊಳಿಸಿದ್ದಾರೆ.
ಮೂರು ಸ್ಥಾನಗಳಲ್ಲಿ ಒಕ್ಕಲಿಗ ಸಮುದಾಯದಿಂದ ಸಿ.ಟಿ ರವಿ, ಒಬಿಸಿ ವರ್ಗದಲ್ಲಿ ಎನ್. ರವಿಕುಮಾರ್ ಹಾಗೂ ಎಂ.ಜಿ ಮುಳೆ ಅವರಿಗೆ ಸ್ಥಾನ ನೀಡಲಾಗಿದೆ. ಎಂ.ಜಿ ಮೂಳೆ ಅವರು ಬಸವ ಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮತ್ತು ಮರಾಠಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಆಗಿದ್ದರು. ಮೂಳೆ ಅವರು ಈ ಮೊದಲು ಜೆಡಿಎಸ್ನಲ್ಲಿದ್ದು, ಕಳೆದ ಉಪಚುನಾವಣೆಯಲ್ಲಿ ಬಿಜೆಪಿ ಸೇರಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ