newsfirstkannada.com

ಬೈಕ್ ಚಾಲಕನ ಮೇಲೆ ಹರಿದ ಬಿಎಂಟಿಸಿ ಬಸ್.. ಸೆಕ್ಯುರಿಟಿ ಗಾರ್ಡ್‌ ಆಗಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Share :

17-08-2023

    ಕಿಲ್ಲರ್‌ ಬಿಎಂಟಿಸಿ ಬಸ್​​ಗೆ ಮತ್ತೊಂದು ಜೀವ ಬಲಿ

    ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಅಪಘಾತ

    ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್​​ಗೆ ಮತ್ತೊಂದು ಬಡಜೀವ ಬಲಿಯಾಗಿರೋ ದಾರುಣ ಘಟನೆ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ದಾಸಪ್ಪ (42) ಮೃತ ವ್ಯಕ್ತಿ.

ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾಸಪ್ಪ ಸಾವನ್ನಪ್ಪಿದ್ದಾನೆ. ಸರ್ವಿಸ್ ರಸ್ತೆಯಲ್ಲಿ ಕಾರೊಂದು ಪಾರ್ಕ್ ಮಾಡಿತ್ತು. ಕಾರಿನ ಬಲಬದಿಗೆ ಬೈಕ್​ ಡಿಕ್ಕಿ ಹೊಡೆದು ದಾಸಪ್ಪ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ದಾಸಪ್ಪನ ಮೇಲೆ ಹರಿದಿದೆ. ಬಸ್‌ ಗುದ್ದಿದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೈಕ್ ಚಾಲಕನ ಮೇಲೆ ಹರಿದ ಬಿಎಂಟಿಸಿ ಬಸ್.. ಸೆಕ್ಯುರಿಟಿ ಗಾರ್ಡ್‌ ಆಗಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

https://newsfirstlive.com/wp-content/uploads/2023/08/accident-9.jpg

    ಕಿಲ್ಲರ್‌ ಬಿಎಂಟಿಸಿ ಬಸ್​​ಗೆ ಮತ್ತೊಂದು ಜೀವ ಬಲಿ

    ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಅಪಘಾತ

    ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್​​ಗೆ ಮತ್ತೊಂದು ಬಡಜೀವ ಬಲಿಯಾಗಿರೋ ದಾರುಣ ಘಟನೆ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ದಾಸಪ್ಪ (42) ಮೃತ ವ್ಯಕ್ತಿ.

ಬಿಎಂಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾಸಪ್ಪ ಸಾವನ್ನಪ್ಪಿದ್ದಾನೆ. ಸರ್ವಿಸ್ ರಸ್ತೆಯಲ್ಲಿ ಕಾರೊಂದು ಪಾರ್ಕ್ ಮಾಡಿತ್ತು. ಕಾರಿನ ಬಲಬದಿಗೆ ಬೈಕ್​ ಡಿಕ್ಕಿ ಹೊಡೆದು ದಾಸಪ್ಪ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್ ದಾಸಪ್ಪನ ಮೇಲೆ ಹರಿದಿದೆ. ಬಸ್‌ ಗುದ್ದಿದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More