/newsfirstlive-kannada/media/post_attachments/wp-content/uploads/2023/06/BMTC-Bus.jpg)
ಬೆಂಗಳೂರು: ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಬಸ್ ದರ ಶೇ.15ರಷ್ಟು ಏರಿಕೆ ಮಾಡಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಲು ಸಾಲು ಬೆಲೆ ಏರಿಕೆಯಿಂದ ತತ್ತರಿಸಿರೋ ಜನರಿಗೆ ಗಾಯದ ಮೇಲೆ ಬರೆ ಎಳೆಯುವ ನಿರ್ಧಾರ ಕೈಗೊಂಡಿತ್ತು. ಇನ್ನು ಈ ಬಗ್ಗೆ ಖುದ್ದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸುದ್ದಿಗೋಷ್ಠಿ ನಡೆಸಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಸಮಜಾಯಿಷಿ ನೀಡಿದರು.
ಈಗ ಕೆಎಸ್ಆರ್ಟಿಸಿ ಮಾತ್ರವಲ್ಲ ಬಿಎಂಟಿಸಿ ಪ್ರಯಾಣಿಕರಿಗೂ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಬಿಎಂಟಿಸಿ ಟಿಕೆಟ್ ದರದಲ್ಲೂ ಬೆಲೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಇಂದು ಮಧ್ಯರಾತ್ರಿ 12 ಗಂಟೆಯಿಂದಲೇ ಈ ಆದೇಶ ಅನ್ವಯ ಆಗಲಿದೆ ಎಂದು ತಿಳಿದು ಬಂದಿದೆ.
ನಾಳೆಯಿಂದ ಎಲ್ಲಿಗೆ ಎಷ್ಟೆಷ್ಟು ಬಸ್ ಚಾರ್ಜ್?
ಇನ್ನು, ನಾಳೆಯಿಂದಲೇ ಈ ಆದೇಶ ಜಾರಿಗೆ ಬರಲಿದೆ. ಸದ್ಯ ಮೆಜೆಸ್ಟಿಕ್ನಿಂದ ಜಯನಗರಕ್ಕೆ 20 ರೂಪಾಯಿ ಇದೆ. ದರ ಏರಿಕೆ ಬಳಿಕ 23 ರೂಪಾಯಿ ಆಗಿದೆ. ಮೆಜೆಸ್ಟಿಕ್ನಿಂದ ಸರ್ಜಾಪುರಕ್ಕೂ 25 ರೂಪಾಯಿ ಇದ್ದು, ದರ ಏರಿಕೆ ಬಳಿಕ 28 ರೂ. ಆಗಿದೆ. ಮೆಜೆಸ್ಟಿಕ್ ಟು ಅತ್ತಿಬೆಲೆಗೆ ಸದ್ಯದ ಪ್ರಯಾಣ ದರ 25 ರೂಪಾಯಿ ಇದ್ದು, ಈಗ 28 ರೂಪಾಯಿ ಆಗಿದೆ.
ಇನ್ನು, ಮೆಜೆಸ್ಟಿಕ್ನಿಂದ ಹಾರೋಹಳ್ಳಿಗೆ 28.75 ರೂ., ಮೆಜೆಸ್ಟಿಕ್ನಿಂದ ಬನಶಂಕರಿಗೆ 23 ರೂ., ಮೆಜೆಸ್ಟಿಕ್ನಿಂದ ಏರ್ಪೋರ್ಟ್ಗೆ 270 ರೂಪಾಯಿ ಆಗಿದೆ. ಎಲ್ಲಾ ಏರಿಯಾಗಳಿಗೆ ಹೋಗುವ ಬಸ್ ದರ ಹೆಚ್ಚಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ