/newsfirstlive-kannada/media/post_attachments/wp-content/uploads/2024/04/Boat-Odisha.jpg)
50 ಮಂದಿ ಸಂಚರಿಸುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಒಡಿಶಾದ ಝಾರ್ಸುಗುಡಾ ಜಿಲ್ಲೆಯ ಮಹಾನದಿಯಲ್ಲಿ ಸಂಭವಿಸಿದೆ. ಪಥರ್ಸೇನಿ ಕುಡಾದಿಂದ ಬರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಸ್ಥಳೀಯ ಮೀನುಗಾರರು 35 ಮಂದಿಯನ್ನು ರಕ್ಷಿಸಿದ್ದಾರೆ. ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಏಳು ಪ್ರಯಾಣಿಕರನ್ನು ಕಾಪಾಡಿದ್ದಾರೆ.
ಇದನ್ನೂ ಓದಿ: ಕಾರು-ಟ್ರಕ್​ ನಡುವೆ ಭೀಕರ ಅಪಘಾತ.. 10 ಮಂದಿ ದಾರುಣ ಸಾವು
ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಐವರು ಮುಳುಗುತಜ್ಞರಿಂದ ಏಳು ಮಂದಿಗಾಗಿ ಹುಡುಕಾಟ ನಡೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us