ನಡು ನೀರಿನಲ್ಲಿ ಪಲ್ಟಿ ಹೊಡೆದ 34 ಜನರನ್ನು ತುಂಬಿದ್ದ ದೋಣಿ
ಶಾಲಾ ಮಕ್ಕಳಿದ್ದ ದೋಣಿ ಅವಘಡ, 18 ಮಕ್ಕಳು ನಾಪತ್ತೆ
ನಾಪತ್ತೆಯಾದ ಮಕ್ಕಳಿಗಾಗಿ ನಡೆಯುತ್ತಿದೆ ಶೋಧ ಕಾರ್ಯ
ದೋಣಿ ಮಗುಚಿ 18 ಮಕ್ಕಳು ನಾಪತ್ತೆಯಾದ ಘಟನೆ ಬಿಹಾರದ ಜಿಲ್ಲೆಯ ಮುಜಾಫರ್ಪುರದ ಮಧುಪುರ್ ಪಟ್ಟಿ ಘಾಟ್ ಬಳಿ ಇರುವ ಭಾಗಮತಿ ನದಿಯಲ್ಲಿ ನಡೆದಿದೆ. ದೋಣಿಯಲ್ಲಿ ಒಟ್ಟು 34 ಜನರಿದ್ದು, ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿರುವಾಗ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ: ನೀನು ಹಳ್ಳಿ ಗುಗ್ಗು ಎಂದು ಕಾಟ ಕೊಟ್ಟ ಹೆಂಡತಿ; ರೋಸಿ ಹೋದ ಗಂಡ ಸಾವಿಗೆ ಶರಣು
ದೋಣಿ ದುರಂತದ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತನಾಡಿ, ಜಿಲ್ಲಾ ಮ್ಯಾಜಿಸ್ಟ್ರೇಟ್ ಸೇರಿದಂತೆ ಹಿರಿಯ ಜಿಲ್ಲಾಧಿಕಾರಿಗಳಿಗೆ ಅಪಘಾತ ಸ್ಥಳಕ್ಕೆ ತೆರಳಲು ಸೂಚನೆ ನೀಡಲಾಗಿದೆ. ಮಕ್ಕಳ ಕುಟುಂಬಗಳಿಗೆ ನೆರವು ಮತ್ತು ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾತನಾಡಿದ ಸಿಎಂ ನಿತೀಶ್ ಕುಮಾರ್ ಅವರು, ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ತುರ್ತಾಗಿ ಕೆಲಸ ಮಾಡುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗೆ ಹೇಳಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಎಲ್ಲಾ ನೆರವು ಸಿಗಲಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಡು ನೀರಿನಲ್ಲಿ ಪಲ್ಟಿ ಹೊಡೆದ 34 ಜನರನ್ನು ತುಂಬಿದ್ದ ದೋಣಿ
ಶಾಲಾ ಮಕ್ಕಳಿದ್ದ ದೋಣಿ ಅವಘಡ, 18 ಮಕ್ಕಳು ನಾಪತ್ತೆ
ನಾಪತ್ತೆಯಾದ ಮಕ್ಕಳಿಗಾಗಿ ನಡೆಯುತ್ತಿದೆ ಶೋಧ ಕಾರ್ಯ
ದೋಣಿ ಮಗುಚಿ 18 ಮಕ್ಕಳು ನಾಪತ್ತೆಯಾದ ಘಟನೆ ಬಿಹಾರದ ಜಿಲ್ಲೆಯ ಮುಜಾಫರ್ಪುರದ ಮಧುಪುರ್ ಪಟ್ಟಿ ಘಾಟ್ ಬಳಿ ಇರುವ ಭಾಗಮತಿ ನದಿಯಲ್ಲಿ ನಡೆದಿದೆ. ದೋಣಿಯಲ್ಲಿ ಒಟ್ಟು 34 ಜನರಿದ್ದು, ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿರುವಾಗ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ: ನೀನು ಹಳ್ಳಿ ಗುಗ್ಗು ಎಂದು ಕಾಟ ಕೊಟ್ಟ ಹೆಂಡತಿ; ರೋಸಿ ಹೋದ ಗಂಡ ಸಾವಿಗೆ ಶರಣು
ದೋಣಿ ದುರಂತದ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತನಾಡಿ, ಜಿಲ್ಲಾ ಮ್ಯಾಜಿಸ್ಟ್ರೇಟ್ ಸೇರಿದಂತೆ ಹಿರಿಯ ಜಿಲ್ಲಾಧಿಕಾರಿಗಳಿಗೆ ಅಪಘಾತ ಸ್ಥಳಕ್ಕೆ ತೆರಳಲು ಸೂಚನೆ ನೀಡಲಾಗಿದೆ. ಮಕ್ಕಳ ಕುಟುಂಬಗಳಿಗೆ ನೆರವು ಮತ್ತು ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಮಾತನಾಡಿದ ಸಿಎಂ ನಿತೀಶ್ ಕುಮಾರ್ ಅವರು, ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ತುರ್ತಾಗಿ ಕೆಲಸ ಮಾಡುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗೆ ಹೇಳಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಎಲ್ಲಾ ನೆರವು ಸಿಗಲಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ