13 ಜನರಿದ್ದ ಬೊಲೊರೊ ವಾಹನ ಅಪಘಾತ
ಮಕ್ಕಳು, ಮಹಿಳೆಯರು ಸೇರಿ ಅಪಘಾತದಲ್ಲಿ ಸಾವು
ದೇವಸ್ಥಾನಕ್ಕೆ ತೆರಳಿ ಹಿಂತಿರುಗುವಾಗ ನಡೆದ ಅಪಘಾತ
ರಾಜಸ್ಥಾನ: ಬೊಲೆರೊ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕರೌಲಿ ಮತ್ತು ಮಂದರಯಾಲ್ ರಸ್ತೆಯ ದುಂಡಾಪುರ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಕರೌಲಿ ಜಿಲ್ಲಿಯ ಕಿಯೋಲಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೊಲೊರೊ ವಾಹನಕ್ಕೆ ಟ್ರಕ್ ಗುದ್ದಿದೆ. ಬೊಲೊರೊದಲ್ಲಿ 13 ಜನರಿದ್ದರು. ಅದರಲ್ಲಿ 9 ಜನರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: Newsfirst Impact: ಮುಡಾ ಅಕ್ರಮದ ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ.. ಆಯುಕ್ತ, ಕಾರ್ಯದರ್ಶಿ, ಇಂಜಿನಿಯರ್ ಎತ್ತಂಗಡಿ
ಇನ್ನು ಅಪಘಾತದಲ್ಲಿ ಬೊಲೊರೊ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸಮಯದಲ್ಲಿ ದೊಡ್ಡ ಶಬ್ಧ ಏರ್ಪಟ್ಟಿದ್ದು, ಸ್ಥಳಕ್ಕೆ ಸ್ಥಳೀಯರು ಆಗಮಿಸಿದ್ದಾರೆ. ತಕ್ಷಣ ಪೊಲೀಸರಿಗೆ ಮತ್ತು ಆ್ಯಂಬುಲೆನ್ಸ್ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ತುಂಬಿದ ಕೃಷ್ಣ ನದಿ, ಮಳೆಯಿಂದಾಗಿ ಉರುಳಿ ಬಿದ್ದ ಬಸ್.. ರಾಜ್ಯದಲ್ಲಿ ವರುಣಾರ್ಭಟಕ್ಕೆ ಸಾಲು ಸಾಲು ಅವಾಂತರ
ಮೃತರಲ್ಲಿ ಕೆಲವರು ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯವರು ಎಂದು ಗುರುತಿಸಲಾಗಿದೆ. ಇನ್ನಿತರರು ರಾಜಸ್ಥಾನ್ ಕರೌಲಿಯ ಮುಂಡ್ರಾಯಲ್ ಖಿರ್ಕನ್ ಗ್ರಾಮದವರು ಎಂದು ತಿಳಿದುಬಂದಿದೆ. ಅತ್ತ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
13 ಜನರಿದ್ದ ಬೊಲೊರೊ ವಾಹನ ಅಪಘಾತ
ಮಕ್ಕಳು, ಮಹಿಳೆಯರು ಸೇರಿ ಅಪಘಾತದಲ್ಲಿ ಸಾವು
ದೇವಸ್ಥಾನಕ್ಕೆ ತೆರಳಿ ಹಿಂತಿರುಗುವಾಗ ನಡೆದ ಅಪಘಾತ
ರಾಜಸ್ಥಾನ: ಬೊಲೆರೊ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕರೌಲಿ ಮತ್ತು ಮಂದರಯಾಲ್ ರಸ್ತೆಯ ದುಂಡಾಪುರ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಕರೌಲಿ ಜಿಲ್ಲಿಯ ಕಿಯೋಲಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೊಲೊರೊ ವಾಹನಕ್ಕೆ ಟ್ರಕ್ ಗುದ್ದಿದೆ. ಬೊಲೊರೊದಲ್ಲಿ 13 ಜನರಿದ್ದರು. ಅದರಲ್ಲಿ 9 ಜನರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: Newsfirst Impact: ಮುಡಾ ಅಕ್ರಮದ ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ.. ಆಯುಕ್ತ, ಕಾರ್ಯದರ್ಶಿ, ಇಂಜಿನಿಯರ್ ಎತ್ತಂಗಡಿ
ಇನ್ನು ಅಪಘಾತದಲ್ಲಿ ಬೊಲೊರೊ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸಮಯದಲ್ಲಿ ದೊಡ್ಡ ಶಬ್ಧ ಏರ್ಪಟ್ಟಿದ್ದು, ಸ್ಥಳಕ್ಕೆ ಸ್ಥಳೀಯರು ಆಗಮಿಸಿದ್ದಾರೆ. ತಕ್ಷಣ ಪೊಲೀಸರಿಗೆ ಮತ್ತು ಆ್ಯಂಬುಲೆನ್ಸ್ಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ತುಂಬಿದ ಕೃಷ್ಣ ನದಿ, ಮಳೆಯಿಂದಾಗಿ ಉರುಳಿ ಬಿದ್ದ ಬಸ್.. ರಾಜ್ಯದಲ್ಲಿ ವರುಣಾರ್ಭಟಕ್ಕೆ ಸಾಲು ಸಾಲು ಅವಾಂತರ
ಮೃತರಲ್ಲಿ ಕೆಲವರು ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯವರು ಎಂದು ಗುರುತಿಸಲಾಗಿದೆ. ಇನ್ನಿತರರು ರಾಜಸ್ಥಾನ್ ಕರೌಲಿಯ ಮುಂಡ್ರಾಯಲ್ ಖಿರ್ಕನ್ ಗ್ರಾಮದವರು ಎಂದು ತಿಳಿದುಬಂದಿದೆ. ಅತ್ತ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ