newsfirstkannada.com

BREAKING: ಬಾಲಿವುಡ್ ನಟ ಅಮಿತಾಬ್ ಬಚ್ಚನ್‌ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

Share :

Published March 15, 2024 at 1:31pm

Update March 15, 2024 at 1:32pm

    ಬಾಲಿವುಡ್ ನಟ ಅಮಿತಾಬ್‌ ಬಚ್ಚನ್‌ ಅವರಿಗೆ ಮತ್ತೆ ಕಷ್ಟದ ಕಾಲ

    ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ಬಿಗ್ ಬಿ

    ಬಚ್ಚನ್‌ ಅನಾರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಜಯಾ ಬಚ್ಚನ್!

ಬಾಲಿವುಡ್ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಅನಾರೋಗ್ಯಕ್ಕೆ ತುತ್ತಾಗಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಇಂದು ಬೆಳಗ್ಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆಂದು ಅಮಿತಾಬ್ ಬಚ್ಚನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಅಮಿತಾಬ್ ಬಚ್ಚನ್ ಅವರಿಗೆ ಈಗ 81 ವರ್ಷ ವಯಸ್ಸಾಗಿದೆ. ಅವರಿಗೆ ಈ ಹಿಂದೆಯೂ ಸರ್ಜರಿಯಾಗಿದ್ದು ಚೇತರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಅನಾರೋಗ್ಯಕ್ಕೆ ಅಮಿತಾಬ್ ಬಚ್ಚನ್ ಗುರಿಯಾಗಿರೋದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ಅವರ ಪತ್ನಿ ಜಯಾ ಬಚ್ಚನ್ ಅವರು ಬಿಗ್‌ ಬಿ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಅಮಿತಾಬ್ ಬಚ್ಚನ್ ಅವರಿಗೆ ಇದು ಸವಾಲಿನ ಸಮಯ. ಕಷ್ಟದ ಕಾಲದಲ್ಲಿ ಅವರೊಂದಿಗೆ ಮೌನವಾಗಿ ಇರಬೇಕು ಎಂದು ಭಾವುಕರಾಗಿ ಮಾತನಾಡಿದ್ದರು.

ಇದನ್ನೂ ಓದಿ: BIG BREAKING: ನಾಳೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ; ಕರ್ನಾಟಕದಲ್ಲಿ 2 ಹಂತದ ಮತದಾನ?

ಅಮಿತಾಬ್ ಬಚ್ಚನ್ ಅವರ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನ ಎದುರಿಸಿದ್ದು, ಈಗ ಮತ್ತೊಂದು ಕಷ್ಟದ ಕಾಲದಲ್ಲಿದ್ದಾರೆ. ಅಮಿತಾಬ್‌ ಬಚ್ಚನ್‌ ಅನಾರೋಗ್ಯದ ಸುದ್ದಿ ಅವರ ಅಭಿಮಾನಿಗಳಿಗೆ ಆತಂಕವನ್ನು ಹೆಚ್ಚಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಬಾಲಿವುಡ್ ನಟ ಅಮಿತಾಬ್ ಬಚ್ಚನ್‌ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2024/02/AMITAB_BACHAN.jpg

    ಬಾಲಿವುಡ್ ನಟ ಅಮಿತಾಬ್‌ ಬಚ್ಚನ್‌ ಅವರಿಗೆ ಮತ್ತೆ ಕಷ್ಟದ ಕಾಲ

    ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ಬಿಗ್ ಬಿ

    ಬಚ್ಚನ್‌ ಅನಾರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಜಯಾ ಬಚ್ಚನ್!

ಬಾಲಿವುಡ್ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಅನಾರೋಗ್ಯಕ್ಕೆ ತುತ್ತಾಗಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಇಂದು ಬೆಳಗ್ಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆಂದು ಅಮಿತಾಬ್ ಬಚ್ಚನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಅಮಿತಾಬ್ ಬಚ್ಚನ್ ಅವರಿಗೆ ಈಗ 81 ವರ್ಷ ವಯಸ್ಸಾಗಿದೆ. ಅವರಿಗೆ ಈ ಹಿಂದೆಯೂ ಸರ್ಜರಿಯಾಗಿದ್ದು ಚೇತರಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ಅನಾರೋಗ್ಯಕ್ಕೆ ಅಮಿತಾಬ್ ಬಚ್ಚನ್ ಗುರಿಯಾಗಿರೋದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಇತ್ತೀಚೆಗಷ್ಟೇ ಅಮಿತಾಬ್ ಬಚ್ಚನ್ ಅವರ ಪತ್ನಿ ಜಯಾ ಬಚ್ಚನ್ ಅವರು ಬಿಗ್‌ ಬಿ ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಅಮಿತಾಬ್ ಬಚ್ಚನ್ ಅವರಿಗೆ ಇದು ಸವಾಲಿನ ಸಮಯ. ಕಷ್ಟದ ಕಾಲದಲ್ಲಿ ಅವರೊಂದಿಗೆ ಮೌನವಾಗಿ ಇರಬೇಕು ಎಂದು ಭಾವುಕರಾಗಿ ಮಾತನಾಡಿದ್ದರು.

ಇದನ್ನೂ ಓದಿ: BIG BREAKING: ನಾಳೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ; ಕರ್ನಾಟಕದಲ್ಲಿ 2 ಹಂತದ ಮತದಾನ?

ಅಮಿತಾಬ್ ಬಚ್ಚನ್ ಅವರ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನ ಎದುರಿಸಿದ್ದು, ಈಗ ಮತ್ತೊಂದು ಕಷ್ಟದ ಕಾಲದಲ್ಲಿದ್ದಾರೆ. ಅಮಿತಾಬ್‌ ಬಚ್ಚನ್‌ ಅನಾರೋಗ್ಯದ ಸುದ್ದಿ ಅವರ ಅಭಿಮಾನಿಗಳಿಗೆ ಆತಂಕವನ್ನು ಹೆಚ್ಚಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More