newsfirstkannada.com

BREAKING: ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ; ಸ್ಥಳಕ್ಕೆ ಪೊಲೀಸರು ದೌಡು

Share :

Published April 22, 2024 at 2:31pm

    ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ ಎಂದು ಬೆದರಿಕೆ

    ಈ ಹೊಟೇಲ್‌ನಲ್ಲಿ ಬಾಂಬ್ ಇಟ್ಟಿರುವುದು ನಾನೇ ಎಂದಿರುವ ಅನಾಮಿಕ

    ಮಧ್ಯಾಹ್ನ  11.45ಕ್ಕೆ ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಪೋಸ್ಟ್

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಘಟನೆ ಇನ್ನೂ ಸಿಲಿಕಾನ್‌ ಸಿಟಿ ಜನರ ಮನಸಿಂದ ದೂರವಾಗಿಲ್ಲ. ಬಾಂಬರ್‌ ಅನ್ನು ಅರೆಸ್ಟ್ ಮಾಡಿದ ಸುದ್ದಿ ಸ್ವಲ್ಪ ನೆಮ್ಮದಿ ತಂದಿತ್ತು. ಆದರೆ ಈಗ ಬೆಂಗಳೂರು ನಗರದ ಮತ್ತೊಂದು ಖಾಸಗಿ ಹೋಟೆಲ್‌ಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಹೊಟೇಲ್‌ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಅಪರಿಚಿತರು ಪೊಲೀಸರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ಜಾಲಹಳ್ಳಿಯ ಕದಂಬ  ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಪತ್ರ ಕಳುಹಿಸಲಾಗಿದೆ.

ಇಂದು ಮಧ್ಯಾಹ್ನ  11.45ಕ್ಕೆ ಕದಂಬ ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಪೋಸ್ಟ್ ಮೂಲಕ ಬೆದರಿಕೆ ಪತ್ರ ಹಾಕಲಾಗಿದೆ. ಈ ಸುದ್ದಿ ತಿಳಿದ ಕೂಡಲೇ ಕದಂಬ ಗಾರ್ಡೇನಿಯಾ ಹೋಟೆಲ್‌ಗೆ ಜಾಲಹಳ್ಳಿ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹೊಟೇಲ್‌ನಲ್ಲಿದ್ದ ಸಿಬ್ಬಂದಿ, ಗ್ರಾಹಕರನ್ನೆಲ್ಲಾ ಪೊಲೀಸರು ಹೊರಗೆ ಕಳುಹಿಸಿದ್ದಾರೆ. ಕದಂಬ ಹೋಟೆಲ್ ಬಳಿಯೇ ಜಾಲಹಳ್ಳಿ ಪೊಲೀಸರು ಬೀಡು ಬಿಟ್ಟಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌.. ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ NIA; ಕಾರ್ಯಾಚರಣೆ ಹೇಗಿತ್ತು?

ಬಾಂಬ್ ಬೆದರಿಕೆ ಪತ್ರ ಬರೆದಿರುವ ಅನಾಮಿಕ ಪೊಲೀಸರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಹೊಟೇಲ್‌ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾನೆ. ಹೋಟೆಲ್‌ ಅನ್ನು ಸಂಪೂರ್ಣವಾಗಿ ಪರಿಶೀಲಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್ ಬೆದರಿಕೆ; ಸ್ಥಳಕ್ಕೆ ಪೊಲೀಸರು ದೌಡು

https://newsfirstlive.com/wp-content/uploads/2024/04/Bangalore-kadamba-Hotel.jpg

    ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ ಎಂದು ಬೆದರಿಕೆ

    ಈ ಹೊಟೇಲ್‌ನಲ್ಲಿ ಬಾಂಬ್ ಇಟ್ಟಿರುವುದು ನಾನೇ ಎಂದಿರುವ ಅನಾಮಿಕ

    ಮಧ್ಯಾಹ್ನ  11.45ಕ್ಕೆ ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಪೋಸ್ಟ್

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಘಟನೆ ಇನ್ನೂ ಸಿಲಿಕಾನ್‌ ಸಿಟಿ ಜನರ ಮನಸಿಂದ ದೂರವಾಗಿಲ್ಲ. ಬಾಂಬರ್‌ ಅನ್ನು ಅರೆಸ್ಟ್ ಮಾಡಿದ ಸುದ್ದಿ ಸ್ವಲ್ಪ ನೆಮ್ಮದಿ ತಂದಿತ್ತು. ಆದರೆ ಈಗ ಬೆಂಗಳೂರು ನಗರದ ಮತ್ತೊಂದು ಖಾಸಗಿ ಹೋಟೆಲ್‌ಗೆ ಬಾಂಬ್ ಬೆದರಿಕೆ ಹಾಕಲಾಗಿದೆ.

ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಹೊಟೇಲ್‌ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಅಪರಿಚಿತರು ಪೊಲೀಸರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ಜಾಲಹಳ್ಳಿಯ ಕದಂಬ  ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಪತ್ರ ಕಳುಹಿಸಲಾಗಿದೆ.

ಇಂದು ಮಧ್ಯಾಹ್ನ  11.45ಕ್ಕೆ ಕದಂಬ ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಪೋಸ್ಟ್ ಮೂಲಕ ಬೆದರಿಕೆ ಪತ್ರ ಹಾಕಲಾಗಿದೆ. ಈ ಸುದ್ದಿ ತಿಳಿದ ಕೂಡಲೇ ಕದಂಬ ಗಾರ್ಡೇನಿಯಾ ಹೋಟೆಲ್‌ಗೆ ಜಾಲಹಳ್ಳಿ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹೊಟೇಲ್‌ನಲ್ಲಿದ್ದ ಸಿಬ್ಬಂದಿ, ಗ್ರಾಹಕರನ್ನೆಲ್ಲಾ ಪೊಲೀಸರು ಹೊರಗೆ ಕಳುಹಿಸಿದ್ದಾರೆ. ಕದಂಬ ಹೋಟೆಲ್ ಬಳಿಯೇ ಜಾಲಹಳ್ಳಿ ಪೊಲೀಸರು ಬೀಡು ಬಿಟ್ಟಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌.. ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ NIA; ಕಾರ್ಯಾಚರಣೆ ಹೇಗಿತ್ತು?

ಬಾಂಬ್ ಬೆದರಿಕೆ ಪತ್ರ ಬರೆದಿರುವ ಅನಾಮಿಕ ಪೊಲೀಸರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಹೊಟೇಲ್‌ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾನೆ. ಹೋಟೆಲ್‌ ಅನ್ನು ಸಂಪೂರ್ಣವಾಗಿ ಪರಿಶೀಲಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More