ಪುಣೆ ಪೋರ್ಷೆ ಕಾರು ಆ್ಯಕ್ಸಿಡೆಂಟ್ ಕೇಸ್‌.. ಎರಡು ಜೀವ ಬಲಿ ಪಡೆದ ಆರೋಪಿಗೆ ಬಿಡುಗಡೆ ಭಾಗ್ಯ; ಭಾರೀ ಆಕ್ರೋಶ!

author-image
Veena Gangani
Updated On
ಪೋರ್ಷೆ ಕಾರು ಆಕ್ಸಿಡೆಂಟ್​​ನಲ್ಲಿ ತಪ್ಪು ಒಪ್ಪಿಕೊಂಡ ಬಾಲಕ.. ಪೊಲೀಸರ ಮುಂದೆ ಬಾಯ್ಬಿಟ್ಟಿದ್ದೇನು?
Advertisment
  • ಮಗನನ್ನ ಉಳಿಸಿಕೊಳ್ಳಲು ಹೋಗಿ ಜೈಲು ಪಾಲಾಗಿದ್ದ ಇಡೀ ಕುಟುಂಬಸ್ಥರು
  • ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾಗಿದ್ದ ಅಪ್ರಾಪ್ತ
  • ಅಪ್ರಾಪ್ತ ಆರೋಪಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು

ಮುಂಬೈ: ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್‌ವೇರ್‌ ಇಂಜಿನಿಯರ್‌ಗಳ ಸಾವಿಗೆ ಕಾರಣವಾಗಿದ್ದ ಪುಣೆಯ ಪೋರ್ಷೆ ಕಾರು ಅಪಘಾತದ ಕೇಸ್​​ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆ ಭೀಕರ ಆಕ್ಸಿಡೆಂಟ್​ಗೆ ಸಂಬಂಧಿಸಿದಂತೆ ಅಪ್ರಾಪ್ತ ಆರೋಪಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಪ್ರಾಪ್ತನಿಗೆ ಜಾಮೀನು ಸಿಕ್ಕಿರೋದು ದೇಶಾದ್ಯಂತ ಸಂಚಲನ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

publive-image

ಇದನ್ನೂ ಓದಿ: ಕೊಲೆ ಕೇಸ್‌ಗೆ 10, 20 ಅಲ್ಲ ಬರೋಬ್ಬರಿ 50 ಸಿಸಿಟಿವಿಯಲ್ಲಿ ಸುಳಿವು.. ದರ್ಶನ್ ಗ್ಯಾಂಗ್‌ಗೆ ಹೊಸ ಆಪತ್ತು!

ಅಪ್ರಾಪ್ತ ಬಾಲಕನೊಬ್ಬ ಕಳೆದ ಮೇ 19ರಂದು ಮದ್ಯಪಾನ ಮಾಡಿ ಐಷಾರಾಮಿ ಪೋರ್ಷೆ ಕಾರಿನಲ್ಲಿ ಅತಿ ವೇಗವಾಗಿ ಬಂದು ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣವಾಗಿದ್ದಾನೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಬಾಲಕನನ್ನು ಕಾಪಾಡಲು ಹೋಗಿದ್ದ ಇಡೀ ಕುಟುಂಬವೇ ಜೈಲು ಪಾಲಾಗಿತ್ತು. ಆದರೆ ಇದೀಗ ಆರೋಪಿಯಾಗಿರೋ ಅಪ್ರಾಪ್ತನಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜುವೆನೈಲ್ ಜಸ್ಟಿಸ್ ಬೋರ್ಡ್ ಸದಸ್ಯರಾದ ಎಲ್.ಎನ್. ದಾನವಾಡೆ ಅವರು ಆರೋಪಿಗೆ ಜಾಮೀನು ನೀಡಿದ್ದು ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

publive-image

ಇನ್ನು, ಜಾಮೀನಿನ ಮೇಲಿನ ಆಕ್ರೋಶದ ಬೆನ್ನಲ್ಲೇ ನ್ಯಾಯಾಲಯ ತನ್ನ ಆದೇಶವನ್ನು ಮಾರ್ಪಡಿಸಿತು. ಬಾಲಾಪರಾಧಿಯನ್ನು ಅಬ್ಸರ್ವೇಶನ್‌ ಹೋಮ್‌ನಲ್ಲಿರಿಸಲಾಗಿತ್ತು. ಪ್ರಕರಣ ಸಂಬಂಧ ಬಾಲಾಪರಾಧಿ ತಂದೆ, ತಾಯಿ, ತಾತನನ್ನೂ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Advertisment