/newsfirstlive-kannada/media/post_attachments/wp-content/uploads/2024/12/Shobitha-Shivanna8.jpg)
ಕನ್ನಡದ ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಶಿವಣ್ಣ ದುರಂತ ಅಂತ್ಯ ಕಂಡಿದ್ದಾರೆ. ಕಿರುತೆರೆಯಲ್ಲಿ ನಟಿಸಿ ಕನ್ನಡಿಗರ ಮನೆ ಮಾತಾಗಿದ್ದ ನಟಿ ಶೋಭಿತಾ ಇನ್ನು ನೆನಪು ಮಾತ್ರ. ಶೋಭಿತಾ ಶಿವಣ್ಣ ಅವರು ಇನ್ನಿಲ್ಲ ಅನ್ನೋ ಸುದ್ದಿ ಕೇಳಿ ಕನ್ನಡ ಕಿರುತೆರೆಯ ನಟ, ನಟಿಯರು ಶಾಕ್ ಆಗಿದ್ದಾರೆ.
ಹಾಸನ ಸಕಲೇಶಪುರ ಮೂಲದ ನಟಿ ಶೋಭಿತಾ, ಕೃಷ್ಣ ರುಕ್ಮಿಣಿ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ಬಳಿಕ ಮೀನಾಕ್ಷಿ ಮದುವೆ ಸೇರಿ ಹತ್ತು ಹಲವು ಧಾರಾವಾಹಿಯಲ್ಲಿ ನಟಿಸಿ ಕಿರುತೆರೆಯಲ್ಲಿ ತಮ್ಮದೇ ಆದ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು.
ಬ್ರಹ್ಮಗಂಟು ಸೀರಿಯಲ್ನಲ್ಲಿ ‘ಪಿಂಕಿ’ ಆಗಿ ಮಿಂಚಿದ್ದ ಶೋಭಿತಾ
ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟಿ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರವಾಹಿ ಮೂಲಕ ಖ್ಯಾತಿಗಳಿಸಿದ್ದರು. ಸೀರಿಯಲ್ನಲ್ಲಿ ಪಿಂಕಿ ಅನ್ನೋ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಶೋಭಿತಾ ತಮ್ಮ ನಟನೆಯ ಮೂಲಕವೇ ಎಲ್ಲರ ಮನಗೆದ್ದಿದ್ದರು.
ಕಿರುತೆರೆ ಮಾತ್ರವಲ್ಲದೇ ಬೆಳ್ಳಿತೆರೆಯಲ್ಲೂ ಶೋಭಿತಾ ಮಿಂಚು
ನಟಿ ಶೋಭಿತಾ ಕೇವಲ ಕನ್ನಡ ಕಿರುತೆರೆ ಮಾತ್ರವಲ್ಲದೇ ಬೆಳ್ಳಿತೆರೆಯಲ್ಲೂ ಮಿಂಚು ಹರಿಸಿದ್ರು. ವಂದನಾ, 'ಅಟೆಂಪ್ಟ್ ಟು ಮರ್ಡರ್', 'ಜಾಕ್ಪಾಟ್' ಸಿನಿಮಾಗಳಲ್ಲಿ ನಟಿಸಿದ್ದರು. ಅಲ್ಲದೇ ತೆಲುಗಿನ ಧಾರಾವಾಹಿಗಳಲ್ಲಿ ಸಹ ನಟಿಸಿದ್ದರು.
ಮದುವೆ ಬಳಿಕ ಶೋಭಿತಾ ಕಿರುತೆರೆಯಿಂದ ಅಂತರ
ಶೋಭಿತಾ ಶಿವಣ್ಣ ಅವರು 2023ರ ಮೇನಲ್ಲಿ ಹೈದ್ರಾಬಾದ್ ಸಾಫ್ಟ್ವೇರ್ ಎಂಜಿನಿಯರ್ ಸುಧೀರ್ ಅನ್ನು ಮದುವೆಯಾಗಿ ಅಲ್ಲಿಯೇ ಸೆಟಲ್ ಆಗಿದ್ದರು. ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ನಟನೆಯಿಂದ ಅಂತರ ಕಾಯ್ದುಕೊಂಡು ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದರು. ಆದ್ರೆ ಎಲ್ಲೂ ಕೂಡ ತಮ್ಮ ಪತಿಯ ಬಗ್ಗೆ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಶೋಭಿತಾ ಸಾವಿನ ಕಾರಣ ನಿಗೂಢವಾಗಿದ್ದು, ಮರಣೋತ್ತರ ಪರೀಕ್ಷೆ ನಂತರವೇ ಅಸಲಿ ಕಾರಣ ಏನು ಅನ್ನೋದು ಗೊತ್ತಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ