ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಯುವಕರು
ಇನ್ನೊಬ್ಬ ಯುವಕನ ಗುರುತು ಪತ್ತೆಗೆ ಮುಂದಾದ ಪೊಲೀಸರು
ಅಪಘಾತಕ್ಕೆ ಕೇಳಿಬರುತ್ತಿರುವ ಕಾರಣ ಏನು ಗೊತ್ತಾ?
ಮಂಡ್ಯ: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಪ್ಲೈಓವರ್ ಮೇಲೆ ನಡೆದಿದೆ.
ಮಣಿ (25), ಜನಾರ್ಧನ ಪೂಜಾರಿ (21) ಮೃತ ಯುವಕರು. ಮೃತರಿಬ್ಬರು ಕೋಲಾರ, ಕೊಪ್ಪಳ ಜಿಲ್ಲೆಯವರು ಎಂದು ಗುರುತು ಪತ್ತೆ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಯುವಕರು ಕೆಲಸ ಮಾಡುತ್ತಿದ್ದರು. ಇಂದು ಬೆಳಗಿನ ಜಾವ ಮೈಸೂರಿಗೆ ತೆರಳುತ್ತಿದ್ದ ವೇಳೆ ಇವರೇ KA- 51H, P-1842 ನಂಬರಿನ ಪಲ್ಸರ್ ಬೈಕ್ ಚಲಾಯಿಸಿಕೊಂಡು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮೃತ ಜನಾರ್ದನ ಕೊಪ್ಪಳದ ಲಿಂಗದಮಂಡಿ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಯುವಕರು
ಇನ್ನೊಬ್ಬ ಯುವಕನ ಗುರುತು ಪತ್ತೆಗೆ ಮುಂದಾದ ಪೊಲೀಸರು
ಅಪಘಾತಕ್ಕೆ ಕೇಳಿಬರುತ್ತಿರುವ ಕಾರಣ ಏನು ಗೊತ್ತಾ?
ಮಂಡ್ಯ: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಪ್ಲೈಓವರ್ ಮೇಲೆ ನಡೆದಿದೆ.
ಮಣಿ (25), ಜನಾರ್ಧನ ಪೂಜಾರಿ (21) ಮೃತ ಯುವಕರು. ಮೃತರಿಬ್ಬರು ಕೋಲಾರ, ಕೊಪ್ಪಳ ಜಿಲ್ಲೆಯವರು ಎಂದು ಗುರುತು ಪತ್ತೆ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಯುವಕರು ಕೆಲಸ ಮಾಡುತ್ತಿದ್ದರು. ಇಂದು ಬೆಳಗಿನ ಜಾವ ಮೈಸೂರಿಗೆ ತೆರಳುತ್ತಿದ್ದ ವೇಳೆ ಇವರೇ KA- 51H, P-1842 ನಂಬರಿನ ಪಲ್ಸರ್ ಬೈಕ್ ಚಲಾಯಿಸಿಕೊಂಡು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮೃತ ಜನಾರ್ದನ ಕೊಪ್ಪಳದ ಲಿಂಗದಮಂಡಿ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ