/newsfirstlive-kannada/media/post_attachments/wp-content/uploads/2024/10/jagadish-2.jpg)
ಬೆಂಗಳೂರು: ಇತ್ತೀಚೆಗೆ ಒಂದಲ್ಲ ಮತ್ತೊಂದು ವಿಚಾರಕ್ಕೆ ಸುದ್ದಿ ಆಗುತ್ತಿರೋ ಲಾಯರ್​ ಜಗದೀಶ್​ ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ ಎಂದು ತಿಳಿದು ಬಂದಿದೆ. ನಿನ್ನೆ ಅಣ್ಣಮ್ಮ ಕೂರಿಸಿ ರಸ್ತೆ ಬ್ಲಾಕ್ ಮಾಡಿದ್ದನ್ನು ಲಾಯರ್​​ ಜಗದೀಶ್​ ಪ್ರಶ್ನಿಸಿದ್ದರು. ಹೀಗಾಗಿ ಇವರ ಮೇಲೆ ಯುವಕರ ಗುಂಪು ಹಲ್ಲೆ ಮಾಡಿತ್ತು. ಈ ಬೆನ್ನಲ್ಲೀಗ ಮತ್ತೆ ಕಿಡಿಗೇಡಿಗಳು ಲಾಯರ್ ಜಗದೀಶ್​ ಮೇಲೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ.
ಲಾಯರ್​ ಜಗದೀಶ್​ ಅವರಿಗೆ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ. ಜಗದೀಶ್ ಮುಖದಲ್ಲಿ ರಕ್ತ ಸುರಿಯುತ್ತಿದ್ದು, ಕಿಡಿಗೇಡಿಗಳ ವಿರುದ್ಧ ವಿಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
/newsfirstlive-kannada/media/post_attachments/wp-content/uploads/2025/01/jagadish.jpg)
ಬೆಳಗ್ಗೆಯಷ್ಟೇ ಲೈವ್​ ಬಂದು ದರ್ಶನ್ ಫ್ಯಾನ್ಸ್​ಗೆ ಲಾಯರ್​ ಜಗದೀಶ್ ವಾರ್ನಿಂಗ್ ಕೊಟ್ಟಿದ್ರು. ಸಂಜೆ ವೇಳೆಗೆ ಜಗದೀಶ್ ಮೇಲೆ ಕೆಲ ಪುಂಡರು ಅಟ್ಯಾಕ್ ಮಾಡಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಆಕ್ರೋಶ ಹೊರಹಾಕಿದ ಜಗದೀಶ್​, ಲಾಂಗು, ದೊಣ್ಣೆಯಿಂದ ಹೊಡೆದಿದ್ದಾರೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us