/newsfirstlive-kannada/media/post_attachments/wp-content/uploads/2024/10/jagadish-2.jpg)
ಬೆಂಗಳೂರು: ಇತ್ತೀಚೆಗೆ ಒಂದಲ್ಲ ಮತ್ತೊಂದು ವಿಚಾರಕ್ಕೆ ಸುದ್ದಿ ಆಗುತ್ತಿರೋ ಲಾಯರ್ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ ಎಂದು ತಿಳಿದು ಬಂದಿದೆ. ನಿನ್ನೆ ಅಣ್ಣಮ್ಮ ಕೂರಿಸಿ ರಸ್ತೆ ಬ್ಲಾಕ್ ಮಾಡಿದ್ದನ್ನು ಲಾಯರ್ ಜಗದೀಶ್ ಪ್ರಶ್ನಿಸಿದ್ದರು. ಹೀಗಾಗಿ ಇವರ ಮೇಲೆ ಯುವಕರ ಗುಂಪು ಹಲ್ಲೆ ಮಾಡಿತ್ತು. ಈ ಬೆನ್ನಲ್ಲೀಗ ಮತ್ತೆ ಕಿಡಿಗೇಡಿಗಳು ಲಾಯರ್ ಜಗದೀಶ್ ಮೇಲೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ.
ಲಾಯರ್ ಜಗದೀಶ್ ಅವರಿಗೆ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ. ಜಗದೀಶ್ ಮುಖದಲ್ಲಿ ರಕ್ತ ಸುರಿಯುತ್ತಿದ್ದು, ಕಿಡಿಗೇಡಿಗಳ ವಿರುದ್ಧ ವಿಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಬೆಳಗ್ಗೆಯಷ್ಟೇ ಲೈವ್ ಬಂದು ದರ್ಶನ್ ಫ್ಯಾನ್ಸ್ಗೆ ಲಾಯರ್ ಜಗದೀಶ್ ವಾರ್ನಿಂಗ್ ಕೊಟ್ಟಿದ್ರು. ಸಂಜೆ ವೇಳೆಗೆ ಜಗದೀಶ್ ಮೇಲೆ ಕೆಲ ಪುಂಡರು ಅಟ್ಯಾಕ್ ಮಾಡಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಆಕ್ರೋಶ ಹೊರಹಾಕಿದ ಜಗದೀಶ್, ಲಾಂಗು, ದೊಣ್ಣೆಯಿಂದ ಹೊಡೆದಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ:BBK11: ರಜತ್ಗಾಗಿ ಬಿಗ್ಬಾಸ್ ಮನೆಗೆ ಬಂತು ಭರ್ಜರಿ ಗಿಫ್ಟ್; ಕಿಚ್ಚ ಸುದೀಪ್ಗೆ ಧನ್ಯವಾದ ಹೇಳಿದ್ದೇಕೆ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ