ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು
ವರುಣ ವಿಧಾನಸಭಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಪರ ಇದ್ದರು
ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ನಿಧನ
ಮೈಸೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತ ಹಾಗೂ ಬಿಜೆಪಿ ಮುಖಂಡ ಕಾರ್ಯ ಗ್ರಾಮದ ಕಾಪು ಸಿದ್ದಲಿಂಗಸ್ವಾಮಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ತೆರಳಿದ್ದರು. ಆದರೆ ಆಸ್ಪತ್ರೆಯಲ್ಲೇ ಕಾಪು ಸಿದ್ದಲಿಂಗಸ್ವಾಮಿ ಅವರು ನಿಧನರಾಗಿದ್ದಾರೆ.
ಇದನ್ನೂ ಓದಿ: ಟ್ರಕ್ಕಿಂಗ್ಗೆ ಹೋದವರ ದುರಂತ ಅಂತ್ಯ.. 9 ಜನರ ಪೈಕಿ 4 ಮೃತದೇಹಗಳಿಗಾಗಿ ಮುಂದುವರೆದ ಶೋಧಕಾರ್ಯ
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಅವರು ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಕಳೆದ ವಿಧಾನಸಭಾ ಎಲೆಕ್ಷನ್ನಲ್ಲಿ ಸಿಎಂ ಸಿದ್ದರಾಮಯ್ಯ ವರುಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಾಗ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ.ಸೋಮಣ್ಣ ಪರವಾಗಿ ಕಾಪು ಸಿದ್ದಲಿಂಗಸ್ವಾಮಿ ಕೆಲಸ ಮಾಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು
ವರುಣ ವಿಧಾನಸಭಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಪರ ಇದ್ದರು
ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ನಿಧನ
ಮೈಸೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತ ಹಾಗೂ ಬಿಜೆಪಿ ಮುಖಂಡ ಕಾರ್ಯ ಗ್ರಾಮದ ಕಾಪು ಸಿದ್ದಲಿಂಗಸ್ವಾಮಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ತೆರಳಿದ್ದರು. ಆದರೆ ಆಸ್ಪತ್ರೆಯಲ್ಲೇ ಕಾಪು ಸಿದ್ದಲಿಂಗಸ್ವಾಮಿ ಅವರು ನಿಧನರಾಗಿದ್ದಾರೆ.
ಇದನ್ನೂ ಓದಿ: ಟ್ರಕ್ಕಿಂಗ್ಗೆ ಹೋದವರ ದುರಂತ ಅಂತ್ಯ.. 9 ಜನರ ಪೈಕಿ 4 ಮೃತದೇಹಗಳಿಗಾಗಿ ಮುಂದುವರೆದ ಶೋಧಕಾರ್ಯ
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಅವರು ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಕಳೆದ ವಿಧಾನಸಭಾ ಎಲೆಕ್ಷನ್ನಲ್ಲಿ ಸಿಎಂ ಸಿದ್ದರಾಮಯ್ಯ ವರುಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಾಗ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ.ಸೋಮಣ್ಣ ಪರವಾಗಿ ಕಾಪು ಸಿದ್ದಲಿಂಗಸ್ವಾಮಿ ಕೆಲಸ ಮಾಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ