newsfirstkannada.com

ಅಮಿತ್​ ಶಾ, ಜೆಪಿ ನಡ್ಡಾ ಜತೆ ಮಹತ್ವದ ಮಾತುಕತೆ; ವಿಪಕ್ಷ ನಾಯಕನ ಬಗ್ಗೆ ಬಿಎಸ್​ವೈ ಹೇಳಿದ್ದೇನು?

Share :

02-07-2023

    ಇನ್ನೂ ಬಗೆಹರಿಯದ ವಿಪಕ್ಷ ನಾಯಕನ ಕಗ್ಗಂಟು

    ಅಮಿತ್​ ಶಾ, ಜೆಪಿ ನಡ್ಡಾ ಜತೆ ಮಹತ್ವದ ಮಾತುಕತೆ

    ವಿಪಕ್ಷ ನಾಯಕನ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ದೆಹಲಿ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾದ ಬಳಿಕ ಮಾತಾಡಿದ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಇಲ್ಲ ಎಂದಿದ್ದಾರೆ.

ಈ ಸಂಬಂಧ ಮಾತಾಡಿದ ಬಿ.ಎಸ್​​ ಯಡಿಯೂರಪ್ಪ, ನಾಳೆ ವಿರೋಧ ಪಕ್ಷದ ನಾಯಕನ ಆಯ್ಕೆ ಇಲ್ಲ. ನಾನು ಅಮಿತ್​ ಶಾ, ಜೆಪಿ ನಡ್ಡಾ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ನನ್ನ ಅಭಿಪ್ರಾಯ ನೀಡಿದ್ದೇನೆ. ಅಗತ್ಯಬಿದ್ದರೆ ಮತ್ತೊಮ್ಮೆ ಬರಬೇಕು ಎಂದು ಕೇಳಿಕೊಂಡಿದ್ದಾರೆ ಎಂದರು.

ನಾಳೆ ಕೇಂದ್ರದಿಂದ ವಿನೋದ್​ ತಾವಡೆ, ಮನ್ಸುಖ್ ಮಾಂಡವೀಯ ಎಂಬ ಇಬ್ಬರು ವೀಕ್ಷಕರು ರಾಜ್ಯಕ್ಕೆ ಬರಲಿದ್ದಾರೆ. ರಾಜ್ಯ ಬಿಜೆಪಿ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಬಳಿಕ ಇದನ್ನು ಕೇಂದ್ರದ ನಾಯಕರಿಗೆ ನೀಡಲಿದ್ದಾರೆ. ಶಾಸಕರ ಅಭಿಪ್ರಾಯದ ಆಧಾರದ ಮೇರೆಗೆ ವಿಪಕ್ಷ ನಾಯಕನ ಆಯ್ಕೆ ಆಗಲಿದೆ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಮಿತ್​ ಶಾ, ಜೆಪಿ ನಡ್ಡಾ ಜತೆ ಮಹತ್ವದ ಮಾತುಕತೆ; ವಿಪಕ್ಷ ನಾಯಕನ ಬಗ್ಗೆ ಬಿಎಸ್​ವೈ ಹೇಳಿದ್ದೇನು?

https://newsfirstlive.com/wp-content/uploads/2023/07/BSY_2.jpg

    ಇನ್ನೂ ಬಗೆಹರಿಯದ ವಿಪಕ್ಷ ನಾಯಕನ ಕಗ್ಗಂಟು

    ಅಮಿತ್​ ಶಾ, ಜೆಪಿ ನಡ್ಡಾ ಜತೆ ಮಹತ್ವದ ಮಾತುಕತೆ

    ವಿಪಕ್ಷ ನಾಯಕನ ಬಗ್ಗೆ ಯಡಿಯೂರಪ್ಪ ಹೇಳಿದ್ದೇನು?

ದೆಹಲಿ: ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾದ ಬಳಿಕ ಮಾತಾಡಿದ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಇಲ್ಲ ಎಂದಿದ್ದಾರೆ.

ಈ ಸಂಬಂಧ ಮಾತಾಡಿದ ಬಿ.ಎಸ್​​ ಯಡಿಯೂರಪ್ಪ, ನಾಳೆ ವಿರೋಧ ಪಕ್ಷದ ನಾಯಕನ ಆಯ್ಕೆ ಇಲ್ಲ. ನಾನು ಅಮಿತ್​ ಶಾ, ಜೆಪಿ ನಡ್ಡಾ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ನನ್ನ ಅಭಿಪ್ರಾಯ ನೀಡಿದ್ದೇನೆ. ಅಗತ್ಯಬಿದ್ದರೆ ಮತ್ತೊಮ್ಮೆ ಬರಬೇಕು ಎಂದು ಕೇಳಿಕೊಂಡಿದ್ದಾರೆ ಎಂದರು.

ನಾಳೆ ಕೇಂದ್ರದಿಂದ ವಿನೋದ್​ ತಾವಡೆ, ಮನ್ಸುಖ್ ಮಾಂಡವೀಯ ಎಂಬ ಇಬ್ಬರು ವೀಕ್ಷಕರು ರಾಜ್ಯಕ್ಕೆ ಬರಲಿದ್ದಾರೆ. ರಾಜ್ಯ ಬಿಜೆಪಿ ಶಾಸಕರ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಬಳಿಕ ಇದನ್ನು ಕೇಂದ್ರದ ನಾಯಕರಿಗೆ ನೀಡಲಿದ್ದಾರೆ. ಶಾಸಕರ ಅಭಿಪ್ರಾಯದ ಆಧಾರದ ಮೇರೆಗೆ ವಿಪಕ್ಷ ನಾಯಕನ ಆಯ್ಕೆ ಆಗಲಿದೆ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More