/newsfirstlive-kannada/media/post_attachments/wp-content/uploads/2025/05/Bumrah.jpg)
ಟೀಮ್ ಇಂಡಿಯಾದ ಟೆಸ್ಟ್ ಕ್ರಿಕೆಟ್ನ ನಾಯಕತ್ವ ಸ್ಥಾನಕ್ಕೆ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರಿತ್ ಬೂಮ್ರಾ ಉತ್ತಮ ಆಯ್ಕೆ ಎಂದು ಮಾಜಿ ಕ್ರಿಕೆಟರ್ರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ. ರೋಹಿತ್ ಶರ್ಮಾ ಅವರು ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೇ ಬೂಮ್ರಾ ಹೆಸರನ್ನು ಸೂಚಿಸಲಾಗಿದೆ.
1983ರಲ್ಲಿ ಏಕದಿನ ವಿಶ್ವಕಪ್ ವಿಜೇತ ತಂಡದ ಆಟಗಾರನಾಗಿದ್ದ ಮದನ್ ಲಾಲ್ ಅವರು ಟೀಮ್ ಇಂಡಿಯಾದ ಟೆಸ್ಟ್ ಕ್ಯಾಪ್ಟನ್ ಸ್ಥಾನದ ಕುರಿತು ಮಾತನಾಡಿದ್ದಾರೆ. ರೋಹಿತ್ ಶರ್ಮಾ ಅವರು ಟೆಸ್ಟ್ಗೆ ನಿವೃತ್ತಿ ಘೋಷಣೆ ಮಾಡಿದ್ದರಿಂದ ಸದ್ಯ ಭಾರತದ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಸ್ಥಾನ ಖಾಲಿ ಆಗಿದೆ. ಹೀಗಾಗಿ ಈ ಸ್ಥಾನಕ್ಕೆ ಜಸ್ಪ್ರಿತ್ ಬೂಮ್ರಾ ಅವರನ್ನು ನೇಮಕ ಮಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.
ಭಾರತದ ಟೆಸ್ಟ್ ಕ್ರಿಕೆಟ್ ತಂಡದ ನಾಯಕನಾಗಲು ಬೂಮ್ರಾ ಸರಿಯಾದ ಆಟಗಾರ. ಫಿಟ್ನೆಸ್ ದೊಡ್ಡ ವಿಷಯವಲ್ಲ. ಅದು ಇಲ್ಲಿ ಗಣನೆಗೆ ತೆಗೆದುಕೊಳ್ಳಬೇಕಾಗಿಲ್ಲ. ಫಿಟ್ ಆಗಿದ್ದರೇ ಅವರೇ ಮೊದಲ ಆಯ್ಕೆ ಎಂದು ಮಾಜಿ ಕ್ರಿಕೆಟರ್ ಮದನ್ ಲಾಲ್ ಅವರು ಹೇಳಿದ್ದಾರೆ. ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಮಾಡಿದ ಮೇಲೆ ನಾಯಕ ಯಾರೆಂಬುದರ ಬಗ್ಗೆ ಬಿಸಿಸಿಐ ಇದುವರೆಗೆ ಯಾವುದೇ ಮಾಹಿತಿ ನೀಡಿಲ್ಲ ಎನ್ನಲಾಗಿದೆ.
ಇದನ್ನೂ ಓದಿ:ಪಾಕ್ನ 500 ಡ್ರೋಣ್ ಹೊಡೆದುರುಳಿಸಿದ್ದು ಹೇಗೆ..? ಭಾರತದ ರಕ್ಷಣಾ ಮೂಲಗಳಿಂದ ವಿಡಿಯೋ ರಿಲೀಸ್
ಬೂಮ್ರಾ ಅವರಿಗೆ ಈಗಾಗಲೇ ನಾಯಕತ್ವದ ಅನುಭವ ಇದೆ. ಹೊಸದಾಗಿ ಏನು ಹೇಳುವುದು ಅವಶ್ಯಕತೆ ಇರುವುದಿಲ್ಲ. 2022ರಲ್ಲಿ ಬರ್ಮಿಂಗ್ಹ್ಯಾಮ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೊನೆ ಪಂದ್ಯದ ನಾಯಕತ್ವವನ್ನು ಬೂಮ್ರಾ ವಹಿಸಿಕೊಂಡಿದ್ದರು. ಇದಾದ ಮೇಲೆ 2024-25ರಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಎರಡು ಪಂದ್ಯಗಳಿಗೆ ಕ್ಯಾಪ್ಟನ್ ಆಗಿ ಸಕ್ಸಸ್ ಕಂಡಿದ್ದಾರೆ.
ಜಸ್ಪ್ರಿತ್ ಬೂಮ್ರಾ ಅವರು ನಾಯಕನಾಗಿ ಇದುವರೆಗೆ 15 ವಿಕೆಟ್ಗಳನ್ನು ಉರುಳಿಸಿ ತಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಇದು ಅಲ್ಲದೇ ಬಾರ್ಡರ್ ಗವಾಸ್ಕರ್ ಸರಣಿಯ ಪರ್ತ್ ಟೆಸ್ಟ್ನಲ್ಲಿ 18 ಓವರ್ ಬೌಲಿಂಗ್ ಮಾಡಿ, 6 ಓವರ್ ಮೇಡಿನ್ ಮಾಡಿದ್ದರು. ಕೇವಲ 30 ರನ್ ನೀಡಿ ಆಸ್ಟ್ರೇಲಿಯಾದ ಪ್ರಮುಖ 5 ವಿಕೆಟ್ಗಳನ್ನು ಉರುಳಿಸಿ ತಂಡದ ಗೆಲುವಿಗೆ ಕಾರಣರಾಗಿದ್ದರು.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ