ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ
ಪಲ್ಟಿ ಹೊಡೆದ ಬಸ್.. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
30 ಅಡಿ ಎತ್ತರಕ್ಕೆ ಜಿಗಿದು ಹೊಲದಲ್ಲಿ ಬಿದ್ದ ಸವಾರ.. ಅಲ್ಲೇ ಸಾವು
ಬೆಳಗಾವಿ: ಬೈಕ್ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಬೆಳಗಾವಿ ಖನಗಾಂವ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ಕೆ.ಎಚ್.ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸುಳೇಬಾವಿ ಗ್ರಾಮದ ವಿಠ್ಠಲ ದತ್ತಾ ಲೋಕರೆ(29) ಬಸ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಬಸ್ ಗುದ್ದಿದ ರಭಸಕ್ಕೆ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಇದನ್ನೂ ಓದಿ: ‘ಅನ್ನದಾತ’ ರಾಮೋಜಿ ರಾವ್.. ಕೃಷಿ ಕುಟುಂಬದಿಂದ ಬಂದು ಬಡವರ ಹಸಿವು ನೀಗಿಸಿದ ಪುಣ್ಯಾತ್ಮ
ಬಸ್ ಬೆಳಗಾವಿ ಕಡೆಗೆ ಬರುತ್ತಿತ್ತು. ಈ ವೇಳೆ ಬೈಕ್ ಸವಾರನಿಗೆ ಗುದ್ದಿದೆ. ಪರಿಣಾಮ ಬೈಕ್ ಸವಾರ 30 ಅಡಿ ಎತ್ತರಕ್ಕೆ ಜಿಗಿದು ಹೊಲದಲ್ಲಿ ಬಿದ್ದಿದ್ದಾನೆ. ಅಲ್ಲೇ ಉಸಿರು ಚೆಲ್ಲಿದ್ದಾನೆ. ಇತ್ತ ನಿಯಂತ್ರಣ ತಪ್ಪಿದ ಬಸ್ ಕೂಡ ಪಲ್ಟಿ ಹೊಡೆದಿದೆ.
ಇದನ್ನೂ ಓದಿ: 5 ಗಂಟೆಗಳ ಕಾಲ ಭವಾನಿ ರೇವಣ್ಣ ವಿಚಾರಣೆ.. ತನಿಖೆ ವೇಳೆ ಏನು ಹೇಳಿದ್ರು ಗೊತ್ತಾ?
ಬಸ್ ಪಲ್ಟಿ ಹೊಡೆದ ರಭಸಕ್ಕೆ ಬಸ್ನಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ
ಪಲ್ಟಿ ಹೊಡೆದ ಬಸ್.. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ
30 ಅಡಿ ಎತ್ತರಕ್ಕೆ ಜಿಗಿದು ಹೊಲದಲ್ಲಿ ಬಿದ್ದ ಸವಾರ.. ಅಲ್ಲೇ ಸಾವು
ಬೆಳಗಾವಿ: ಬೈಕ್ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಬೆಳಗಾವಿ ಖನಗಾಂವ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ಕೆ.ಎಚ್.ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸುಳೇಬಾವಿ ಗ್ರಾಮದ ವಿಠ್ಠಲ ದತ್ತಾ ಲೋಕರೆ(29) ಬಸ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಬಸ್ ಗುದ್ದಿದ ರಭಸಕ್ಕೆ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ಇದನ್ನೂ ಓದಿ: ‘ಅನ್ನದಾತ’ ರಾಮೋಜಿ ರಾವ್.. ಕೃಷಿ ಕುಟುಂಬದಿಂದ ಬಂದು ಬಡವರ ಹಸಿವು ನೀಗಿಸಿದ ಪುಣ್ಯಾತ್ಮ
ಬಸ್ ಬೆಳಗಾವಿ ಕಡೆಗೆ ಬರುತ್ತಿತ್ತು. ಈ ವೇಳೆ ಬೈಕ್ ಸವಾರನಿಗೆ ಗುದ್ದಿದೆ. ಪರಿಣಾಮ ಬೈಕ್ ಸವಾರ 30 ಅಡಿ ಎತ್ತರಕ್ಕೆ ಜಿಗಿದು ಹೊಲದಲ್ಲಿ ಬಿದ್ದಿದ್ದಾನೆ. ಅಲ್ಲೇ ಉಸಿರು ಚೆಲ್ಲಿದ್ದಾನೆ. ಇತ್ತ ನಿಯಂತ್ರಣ ತಪ್ಪಿದ ಬಸ್ ಕೂಡ ಪಲ್ಟಿ ಹೊಡೆದಿದೆ.
ಇದನ್ನೂ ಓದಿ: 5 ಗಂಟೆಗಳ ಕಾಲ ಭವಾನಿ ರೇವಣ್ಣ ವಿಚಾರಣೆ.. ತನಿಖೆ ವೇಳೆ ಏನು ಹೇಳಿದ್ರು ಗೊತ್ತಾ?
ಬಸ್ ಪಲ್ಟಿ ಹೊಡೆದ ರಭಸಕ್ಕೆ ಬಸ್ನಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ