/newsfirstlive-kannada/media/post_attachments/wp-content/uploads/2024/07/Truck-Accident-1.jpg)
ಡಬಲ್​ ಡೆಕ್ಕರ್​ ಬಸ್​ ಮತ್ತು ಹಾಲಿನ ಟ್ಯಾಂಕರ್​​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಉತ್ತರ ಪ್ರದೇಶ ಉನ್ನಾವೊದಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ 18 ಜನರು ಸಾವನ್ನಪ್ಪಿದ್ದು, ಸುಮಾರು 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಲಕ್ನೋ-ಆಗ್ರಾ ಎಕ್ಸ್​​ಪ್ರೆಸ್​​ವೇನಲ್ಲಿ ಬುಧವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ. ಬಸ್​​ ಬಿಹಾರದ ಸೀತಾರ್ಮಹಿಯಿಂದ ದೆಹಲಿ ಕಡೆ ತೆರಳುತ್ತಿತ್ತು. ಈ ವೇಳೆ ಗರ್ಹಾ ಗ್ರಾಮದ ಬಳಿ ಹಾಲಿನ ಟ್ಯಾಂಕರ್​ಗೆ ಹಿಂದಿನಿಂದ ಹೋಗಿ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ವರುಣಾರ್ಭಟಕ್ಕೆ ಮುಂಬೈ, ಅಸ್ಸಾಂ ತತ್ತರ.. ಸಾಲು ಸಾಲು ಸಾವು ನೋವು
ಬಸ್​ ಡಿಕ್ಕಿ ಹೊಡೆದಂತೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್​ನಲ್ಲಿದ್ದ ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಇನ್ನು ಕೆಲವರು ಬಸ್​ನಲ್ಲೇ ಸಿಲುಕಿ ಸಾವನ್ನಪ್ಪಿದ್ದಾರೆ.
ಅಪಘಾತ ನಡೆದ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಪೊಲೀಸರು ಮತ್ತು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸಂತ್ರಸ್ತರನ್ನು ಹೊರತೆಗೆದಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ
ಭೀಕರ ಅಪಘಾತಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸಂತಾಪ ಸೂಚಿಸಿದ್ದಾರೆ ‘‘ದುಃಖದಲ್ಲಿರುವ ಕುಟುಂಬಳಿಗೆ ಸಂತಾಪ ಸೂಚಿಸುತ್ತಿದ್ದೇನೆ. ಜಿಲ್ಲಾಧಿಕಾರಿಯೊಂದಿಗೆ ಪರಿಸ್ಥಿತಿ ಬಗ್ಗೆ ತಿಳಿದುಕೊಂಡಿದ್ದೇನೆ’’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ.. ಡಿಕೆಶಿ ಲೆಕ್ಕಾಚಾರವೇನು? ಜನರು ಎಲ್ಲಾ ದಾಖಲೆಗಳನ್ನು ಬದಲಾವಣೆ ಮಾಡ್ಬೇಕಾಗುತ್ತಾ?
ಸಾರಿಗೆ ಸಚಿವ ದಯಾಶಂಕರ್​ ಸಿಂಗ್​ ‘‘ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’’ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us