/newsfirstlive-kannada/media/post_attachments/wp-content/uploads/2024/12/UK_BUS_ACCIDENT.jpg)
ಡೆಹ್ರಾಡೂನ್: 1500 ಅಡಿ ಆಳದ ಕಮರಿಗೆ ಬಸ್​ವೊಂದು ಬಿದ್ದು ನಾಲ್ವರು ಪ್ರಾಣ ಕಳೆದುಕೊಂಡಿದ್ದು 23 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಾಖಂಡದ ನೈನಿತಾಲ್ನ ಭೀಮತಾಲ್ ಬಳಿಯ ಬೋಹ್ರಾ ಕುನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಬಸ್​ ಅಲ್ಮೋರಾದಿಂದ ಹಲ್ದಾವಾನಿಗೆ ತೆರಳುತ್ತಿರುವಾಗ ಬೋಹ್ರಾ ಕುನ್ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ 1500 ಅಡಿ ಆಳದ ಕಮರಿಗೆ ಬಿದ್ದಿದೆ. ಇದರಿಂದ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 27 ಪ್ರಯಾಣಿಕರ ಪೈಕಿ ನಾಲ್ವರು ಸ್ಥಳದಲ್ಲೇ ಹಸುನೀಗಿದ್ದಾರೆ. ಉಳಿದ 23 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಗೊಂಡವರಲ್ಲಿ ಕೆಲವ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
/newsfirstlive-kannada/media/post_attachments/wp-content/uploads/2024/12/UK_BUS_ACCIDENT_1.jpg)
ಇದನ್ನೂ ಓದಿ: ಗೆಸ್ ಮಾಡಿ.. ಸಾಂತಾ ಕ್ಲಾಸ್​​ನಲ್ಲಿ ಇರುವ ಈ ಸ್ಟಾರ್ ಕ್ರಿಕೆಟ್ ದಿಗ್ಗಜ ಯಾರು..?
ಬಸ್​ ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಎನ್​​​ಡಿಆರ್​ಎಫ್​, ಎಸ್​​ಡಿಆರ್​ಎಫ್ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡವು. ತೀರ ಆಳಕ್ಕೆ ಬಸ್​ ಬಿದ್ದಿದ್ದರಿಂದ ಗಾಯಾಳುಗಳನ್ನು ಮೇಲಕ್ಕೆ ಕರೆತರಲು ಹರಸಾಹಸವೇ ಪಡಬೇಕಾಯಿತು. ಘಟನೆ ನಡೆದ ಸ್ಥಳದಿಂದ ಆಸ್ಪತ್ರೆಗೆ ಸುಮಾರು 15 ಆಂಬುಲೆನ್ಸ್​ಗಳು ಕಾರ್ಯಚರಣೆ ನಡೆಸಿವೆ. ಗಾಯಾಳುಗಳನ್ನು ಹಲ್ದಾವಾನಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಈ ಘಟನೆ ಸಂಬಂಧ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು ಸ್ಥಳೀಯ ಅಧಿಕಾರಿಗಳ ಜೊತೆ ಸಿಎಂ ನಿರಂತರ ಸಂಪರ್ಕದಲ್ಲಿದ್ದಾರೆ. ಗಾಯಾಳುಗಳ ಚಿಕಿತ್ಸೆಯ ವೆಚ್ಚದ ಕುರಿತು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us