1500 ಅಡಿ ಆಳಕ್ಕೆ ಬಿದ್ದ ಬಸ್​.. ಪ್ರಯಾಣಿಕರ ರಕ್ಷಣೆಗೆ ಹರಸಾಹಸ

author-image
Bheemappa
Updated On
1500 ಅಡಿ ಆಳಕ್ಕೆ ಬಿದ್ದ ಬಸ್​.. ಪ್ರಯಾಣಿಕರ ರಕ್ಷಣೆಗೆ ಹರಸಾಹಸ
Advertisment
  • ದುರಂತದ ಮಾಹಿತಿ ತಿಳಿದು ತೀವ್ರ ದುಃಖ ವ್ಯಕ್ತಪಡಿಸಿದ ಸಿಎಂ
  • ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ
  • ಬಸ್​​ನಲ್ಲಿ ಒಟ್ಟು ಎಷ್ಟು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ರು?

ಡೆಹ್ರಾಡೂನ್: 1500 ಅಡಿ ಆಳದ ಕಮರಿಗೆ ಬಸ್​ವೊಂದು ಬಿದ್ದು ನಾಲ್ವರು ಪ್ರಾಣ ಕಳೆದುಕೊಂಡಿದ್ದು 23 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಾಖಂಡದ ನೈನಿತಾಲ್‌ನ ಭೀಮತಾಲ್‌ ಬಳಿಯ ಬೋಹ್ರಾ ಕುನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಬಸ್​ ಅಲ್ಮೋರಾದಿಂದ ಹಲ್ದಾವಾನಿಗೆ ತೆರಳುತ್ತಿರುವಾಗ ಬೋಹ್ರಾ ಕುನ್ ಪ್ರದೇಶದಲ್ಲಿ ಇದ್ದಕ್ಕಿದ್ದಂತೆ 1500 ಅಡಿ ಆಳದ ಕಮರಿಗೆ ಬಿದ್ದಿದೆ. ಇದರಿಂದ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 27 ಪ್ರಯಾಣಿಕರ ಪೈಕಿ ನಾಲ್ವರು ಸ್ಥಳದಲ್ಲೇ ಹಸುನೀಗಿದ್ದಾರೆ. ಉಳಿದ 23 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಗೊಂಡವರಲ್ಲಿ ಕೆಲವ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

publive-image

ಇದನ್ನೂ ಓದಿ:ಗೆಸ್ ಮಾಡಿ.. ಸಾಂತಾ ಕ್ಲಾಸ್​​ನಲ್ಲಿ ಇರುವ ಈ ಸ್ಟಾರ್ ಕ್ರಿಕೆಟ್ ದಿಗ್ಗಜ ಯಾರು..?

ಬಸ್​ ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಎನ್​​​ಡಿಆರ್​ಎಫ್​, ಎಸ್​​ಡಿಆರ್​ಎಫ್ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡವು. ತೀರ ಆಳಕ್ಕೆ ಬಸ್​ ಬಿದ್ದಿದ್ದರಿಂದ ಗಾಯಾಳುಗಳನ್ನು ಮೇಲಕ್ಕೆ ಕರೆತರಲು ಹರಸಾಹಸವೇ ಪಡಬೇಕಾಯಿತು. ಘಟನೆ ನಡೆದ ಸ್ಥಳದಿಂದ ಆಸ್ಪತ್ರೆಗೆ ಸುಮಾರು 15 ಆಂಬುಲೆನ್ಸ್​ಗಳು ಕಾರ್ಯಚರಣೆ ನಡೆಸಿವೆ. ಗಾಯಾಳುಗಳನ್ನು ಹಲ್ದಾವಾನಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಸದ್ಯ ಈ ಘಟನೆ ಸಂಬಂಧ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು ಸ್ಥಳೀಯ ಅಧಿಕಾರಿಗಳ ಜೊತೆ ಸಿಎಂ ನಿರಂತರ ಸಂಪರ್ಕದಲ್ಲಿದ್ದಾರೆ. ಗಾಯಾಳುಗಳ ಚಿಕಿತ್ಸೆಯ ವೆಚ್ಚದ ಕುರಿತು ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment