ಸ್ಕಿಡ್ ಆಗಿ ಕಂದಕಕ್ಕೆ ಉರುಳಿ ಬಿದ್ದು ಪ್ರಯಾಣಿಕರಿದ್ದ ಬಸ್
ಮೂವತ್ತೆಂಟು ಜನರನ್ನು ಹೊತ್ತೊಯ್ದು ಸಾಗುತ್ತಿದ್ದ ಬಸ್ ಅಪಘಾತ
ಕಲ್ಲು ಬಂಡೆಗಳ ಮೇಲೆ ಪ್ರಯಾಣಿಕರ ಮೃತದೇಹ, ಗುರುತೇ ಸಿಗದಂತಿರುವ ಬಸ್
ಬಸ್ವೊಂದು ಸ್ಕಿಡ್ ಆಗಿ ಕಂದಕಕ್ಕೆ ಉರುಳಿ ಬಿದ್ದು 20 ಮಂದಿ ಸಾವನ್ನಪ್ಪಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಡೈಮರ್ ಜಿಲ್ಲೆಯ ಗಿಲ್ಗಿಟ್ -ಬಾಲ್ಟಿಸ್ತಾನ್ ಪ್ರದೇಶದಲ್ಲಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ. ಬೆಳಗ್ಗೆ 5.30ರ ಸುಮಾರಿಗೆ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ.
38 ಜನರನ್ನು ಹೊತ್ತೊಯ್ದ ಬಸ್ ರಾವಲ್ಪಿಂಡಿಯಿಂದ ಹುಂಜಾಗೆ ತೆರಳುತ್ತಿತ್ತು. ಈ ವೇಳೆ ಆಳವಾದ ಕಂದಕಕ್ಕೆ ಬಿದ್ದಿದೆ. ಇನ್ನು ಈ ಘಟನೆ ಬಗ್ಗೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ನೋಡ ನೋಡುತ್ತಿದ್ದಂತೆಯೇ ಪತನಗೊಂಡ ಹೆಲಿಕಾಪ್ಟರ್.. ಶಿವಸೇನಾ ಉಪನಾಯಕಿಗೆ ಏನಾಯ್ತು?
ಕಳೆದ ತಿಂಗಳು ಯಾತ್ರಾರ್ಥಿಗಳನ್ನು ಹೊತ್ತೊಯ್ದ ಟ್ರಕ್ ಅಪಘಾತಕ್ಕೀಡಾಗಿತ್ತು. ಹಬ್ ಜಿಲ್ಲೆಯಲ್ಲಿ ಆಳವಾದ ಕಂದಕಕ್ಕೆ ಬಿದ್ದಿತ್ತು. ಈ ಘಟನೆಯಲ್ಲಿ 17 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸ್ಕಿಡ್ ಆಗಿ ಕಂದಕಕ್ಕೆ ಉರುಳಿ ಬಿದ್ದು ಪ್ರಯಾಣಿಕರಿದ್ದ ಬಸ್
ಮೂವತ್ತೆಂಟು ಜನರನ್ನು ಹೊತ್ತೊಯ್ದು ಸಾಗುತ್ತಿದ್ದ ಬಸ್ ಅಪಘಾತ
ಕಲ್ಲು ಬಂಡೆಗಳ ಮೇಲೆ ಪ್ರಯಾಣಿಕರ ಮೃತದೇಹ, ಗುರುತೇ ಸಿಗದಂತಿರುವ ಬಸ್
ಬಸ್ವೊಂದು ಸ್ಕಿಡ್ ಆಗಿ ಕಂದಕಕ್ಕೆ ಉರುಳಿ ಬಿದ್ದು 20 ಮಂದಿ ಸಾವನ್ನಪ್ಪಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಡೈಮರ್ ಜಿಲ್ಲೆಯ ಗಿಲ್ಗಿಟ್ -ಬಾಲ್ಟಿಸ್ತಾನ್ ಪ್ರದೇಶದಲ್ಲಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ. ಬೆಳಗ್ಗೆ 5.30ರ ಸುಮಾರಿಗೆ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ.
38 ಜನರನ್ನು ಹೊತ್ತೊಯ್ದ ಬಸ್ ರಾವಲ್ಪಿಂಡಿಯಿಂದ ಹುಂಜಾಗೆ ತೆರಳುತ್ತಿತ್ತು. ಈ ವೇಳೆ ಆಳವಾದ ಕಂದಕಕ್ಕೆ ಬಿದ್ದಿದೆ. ಇನ್ನು ಈ ಘಟನೆ ಬಗ್ಗೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ನೋಡ ನೋಡುತ್ತಿದ್ದಂತೆಯೇ ಪತನಗೊಂಡ ಹೆಲಿಕಾಪ್ಟರ್.. ಶಿವಸೇನಾ ಉಪನಾಯಕಿಗೆ ಏನಾಯ್ತು?
ಕಳೆದ ತಿಂಗಳು ಯಾತ್ರಾರ್ಥಿಗಳನ್ನು ಹೊತ್ತೊಯ್ದ ಟ್ರಕ್ ಅಪಘಾತಕ್ಕೀಡಾಗಿತ್ತು. ಹಬ್ ಜಿಲ್ಲೆಯಲ್ಲಿ ಆಳವಾದ ಕಂದಕಕ್ಕೆ ಬಿದ್ದಿತ್ತು. ಈ ಘಟನೆಯಲ್ಲಿ 17 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ