/newsfirstlive-kannada/media/post_attachments/wp-content/uploads/2024/07/Bus-1.jpg)
ರಾಯಚೂರು: ಸ್ಟೇರಿಂಗ್ ಕಟ್ ಆಗಿ ಈಶಾನ್ಯ ಸಾರಿಗೆ ಬಸ್ ಪಲ್ಟಿ ಹೊಡೆದ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಸಗಮಕುಂಟಾ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಸ್ಕೂಲ್ ಮಕ್ಕಳಿಗೆ ಗಾಯಗಳಾಗಿವೆ.
ಇದನ್ನೂ ಓದಿ: ಮದುವೆ ಮುಗಿಸಿ ಬರುವಾಗ ಕಾರು ಅಪಘಾತ.. ಓರ್ವ ಸಾವು, ಇಬ್ಬರಿಗೆ ಗಾಯ
ಕೊರ್ವಿಹಾಳದಿಂದ ರಾಯಚೂರಿಗೆ ಬರುತ್ತಿದ್ದ ಈಶಾನ್ಯ ಸಾರಿಗೆ ಬಸ್ ಪಲ್ಟಿ ಹೊಡೆದಿದೆ. ಬಸ್ ನಲ್ಲಿದ್ದ ಕೊರ್ವಿಹಾಳ ಗ್ರಾಮದ ವಿದ್ಯಾರ್ಥಿನಿ ಸಂಗೀತಾಗೆ ಗಂಭೀರ ಗಾಯವಾಗಿದೆ. ಗಾಯಗೊಂಡ 9ನೇ ತರಗತಿ ವಿದ್ಯಾರ್ಥಿನಿಯನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ